AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ: ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿಶ್ವಾಸ

ನಾಳೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಎನ್​ಡಿಎ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ನಡುವೆ ತಮ್ಮ ಗೆಲುವಿಗೆ ಬೇಕಾದ ವಿಶ್ವಾಸ ಮತಗಳು ಬರುತ್ತವೆ ಎಂದು ಹೇಳುವ ಮೂಲಕ ಕುಪೇಂದ್ರ ರೆಡ್ಡಿ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ: ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿಶ್ವಾಸ
ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ ಎಂದ ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ
ಕಿರಣ್​ ಹನಿಯಡ್ಕ
| Updated By: Rakesh Nayak Manchi|

Updated on:Feb 26, 2024 | 5:17 PM

Share

ಬೆಂಗಳೂರು, ಫೆ.26: ನಾಳೆ ರಾಜ್ಯಸಭಾ ಚುನಾವಣೆ (Rajya Sabha Election) ನಡೆಯಲಿದ್ದು, ಎನ್​ಡಿಎ (NDA) ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ (Kupendra Reddy) ಅವರ ಗೆಲುವಿಗೆ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ನಡುವೆ ತಮ್ಮ ಗೆಲುವಿಗೆ ಬೇಕಾದ ವಿಶ್ವಾಸ ಮತಗಳು ಬರುತ್ತವೆ ಎಂದು ಹೇಳುವ ಮೂಲಕ ಕುಪೇಂದ್ರ ರೆಡ್ಡಿ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಕುಪೇಂದ್ರ ರೆಡ್ಡಿ, ಕಳೆದ ಬಾರಿ ನಾನು ಸೋತೆ, ಆಗಲೂ ವಿಶ್ವಾಸದಲ್ಲಿದ್ದೆ. ಈ ಬಾರಿಯೂ ಸೋಲುತ್ತೇನೆ ಅಂತಾ ಇಟ್ಟುಕೊಳ್ಳಿ. ಇಲ್ಲಿ ವಿಶ್ವಾಸ ಎನ್ನುವುದು ಸೋಲುತ್ತೇನೆ, ಗೆಲ್ಲುತ್ತೇನೆ ಎನ್ನುವುದಲ್ಲ. ನಾವು ನಮ್ಮ ಮತಗಳನ್ನು ಕ್ರೋಢೀಕರಣ ಮಾಡುತ್ತೇವಾ ಎಂಬುದು ವಿಶ್ವಾಸವಾಗಿದೆ. ಯಾವುದೇ ಮತಗಳು ಆ ಕಡೆ ಈ ಕಡೆ ಆಗಬಾರದು ಅಂತಾ ಕುಮಾರಸ್ವಾಮಿ ಕೂಡಾ ಹೇಳಿದ್ದಾರೆ ಎಂದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಮತ ಕಾಂಗ್ರೆಸ್ ಅಭ್ಯರ್ಥಿಗೆ ಬಹುತೇಕ ಖಚಿತ

ನನಗಂತೂ ಮತಗಳು ಬರುತ್ತವೆ ಎಂಬ ಶೇಕಡಾ 100 ರಷ್ಟು ವಿಶ್ವಾಸ ಇದೆ. ಆ ಮತಗಳು ಬರುತ್ತವೆ. ಪಕ್ಷೇತರರಿಂದ ಬರುತ್ತವೋ ಅಥವಾ ಬೇರೆ ರೀತಿ ಬರುತ್ತವೋ, ಒಟ್ಟಾರೆಯಾಗಿ ವಿಶ್ವಾಸ ಮತಗಳು ನನಗೆ ಬರುತ್ತವೆ ಎಂಬ ವಿಶ್ವಾಸ ಇದೆ. ಅದರ ಬಗ್ಗೆ ನನಗೆ ಗ್ಯಾರಂಟಿ ಇದೆ ಎಂದರು.

ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಶಾಸಕರ ಸಂಪರ್ಕ ವಿಚಾರವಾಗಿ ಮಾತನಾಡಿದ ಕುಪೇಂದ್ರ ರೆಡ್ಡಿ, ಇವೆಲ್ಲಾ ಊಹಾಪೋಹಗಳು ಯಾಕೆ? ಜೆಡಿಎಸ್ ಶಾಸಕರು ಇವತ್ತು ಎಲ್ಲರು ಬಂದಿದ್ದರು. ನಾಳೆ ಒಂದು ಆ ಕಡೆ ಹೋದರೂ ಪ್ರಶ್ನೆ ಮಾಡಿ. ಶಾಸಕರನ್ನು ಹೋಟೆಲ್​ಗೆ ಕರೆದಿಲ್ಲ. ವಿಧಾನಸೌಧಕ್ಕೆ ನಾನು‌ ನಾಳೆ 8 ಗಂಟೆಗೆ ಬರುತ್ತೇನೆ. ಶಾಸಕರು ಕೂಡ ಅಷ್ಟೊತ್ತಿಗೆ ಬರುತ್ತಾರೆ. ಆ ಮೇಲೆ ಬ್ರೇಕ್ ಫಾಸ್ಟ್​ಗೆ ಸೇರುತ್ತೇವೆ. ಎಲ್ಲರೂ ಒಟ್ಟಿಗೆ ಮತ ಹಾಕುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 26 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ