AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ: ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿಶ್ವಾಸ

ನಾಳೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಎನ್​ಡಿಎ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ನಡುವೆ ತಮ್ಮ ಗೆಲುವಿಗೆ ಬೇಕಾದ ವಿಶ್ವಾಸ ಮತಗಳು ಬರುತ್ತವೆ ಎಂದು ಹೇಳುವ ಮೂಲಕ ಕುಪೇಂದ್ರ ರೆಡ್ಡಿ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ: ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿಶ್ವಾಸ
ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ ಎಂದ ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on:Feb 26, 2024 | 5:17 PM

ಬೆಂಗಳೂರು, ಫೆ.26: ನಾಳೆ ರಾಜ್ಯಸಭಾ ಚುನಾವಣೆ (Rajya Sabha Election) ನಡೆಯಲಿದ್ದು, ಎನ್​ಡಿಎ (NDA) ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ (Kupendra Reddy) ಅವರ ಗೆಲುವಿಗೆ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ನಡುವೆ ತಮ್ಮ ಗೆಲುವಿಗೆ ಬೇಕಾದ ವಿಶ್ವಾಸ ಮತಗಳು ಬರುತ್ತವೆ ಎಂದು ಹೇಳುವ ಮೂಲಕ ಕುಪೇಂದ್ರ ರೆಡ್ಡಿ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಕುಪೇಂದ್ರ ರೆಡ್ಡಿ, ಕಳೆದ ಬಾರಿ ನಾನು ಸೋತೆ, ಆಗಲೂ ವಿಶ್ವಾಸದಲ್ಲಿದ್ದೆ. ಈ ಬಾರಿಯೂ ಸೋಲುತ್ತೇನೆ ಅಂತಾ ಇಟ್ಟುಕೊಳ್ಳಿ. ಇಲ್ಲಿ ವಿಶ್ವಾಸ ಎನ್ನುವುದು ಸೋಲುತ್ತೇನೆ, ಗೆಲ್ಲುತ್ತೇನೆ ಎನ್ನುವುದಲ್ಲ. ನಾವು ನಮ್ಮ ಮತಗಳನ್ನು ಕ್ರೋಢೀಕರಣ ಮಾಡುತ್ತೇವಾ ಎಂಬುದು ವಿಶ್ವಾಸವಾಗಿದೆ. ಯಾವುದೇ ಮತಗಳು ಆ ಕಡೆ ಈ ಕಡೆ ಆಗಬಾರದು ಅಂತಾ ಕುಮಾರಸ್ವಾಮಿ ಕೂಡಾ ಹೇಳಿದ್ದಾರೆ ಎಂದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಮತ ಕಾಂಗ್ರೆಸ್ ಅಭ್ಯರ್ಥಿಗೆ ಬಹುತೇಕ ಖಚಿತ

ನನಗಂತೂ ಮತಗಳು ಬರುತ್ತವೆ ಎಂಬ ಶೇಕಡಾ 100 ರಷ್ಟು ವಿಶ್ವಾಸ ಇದೆ. ಆ ಮತಗಳು ಬರುತ್ತವೆ. ಪಕ್ಷೇತರರಿಂದ ಬರುತ್ತವೋ ಅಥವಾ ಬೇರೆ ರೀತಿ ಬರುತ್ತವೋ, ಒಟ್ಟಾರೆಯಾಗಿ ವಿಶ್ವಾಸ ಮತಗಳು ನನಗೆ ಬರುತ್ತವೆ ಎಂಬ ವಿಶ್ವಾಸ ಇದೆ. ಅದರ ಬಗ್ಗೆ ನನಗೆ ಗ್ಯಾರಂಟಿ ಇದೆ ಎಂದರು.

ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಶಾಸಕರ ಸಂಪರ್ಕ ವಿಚಾರವಾಗಿ ಮಾತನಾಡಿದ ಕುಪೇಂದ್ರ ರೆಡ್ಡಿ, ಇವೆಲ್ಲಾ ಊಹಾಪೋಹಗಳು ಯಾಕೆ? ಜೆಡಿಎಸ್ ಶಾಸಕರು ಇವತ್ತು ಎಲ್ಲರು ಬಂದಿದ್ದರು. ನಾಳೆ ಒಂದು ಆ ಕಡೆ ಹೋದರೂ ಪ್ರಶ್ನೆ ಮಾಡಿ. ಶಾಸಕರನ್ನು ಹೋಟೆಲ್​ಗೆ ಕರೆದಿಲ್ಲ. ವಿಧಾನಸೌಧಕ್ಕೆ ನಾನು‌ ನಾಳೆ 8 ಗಂಟೆಗೆ ಬರುತ್ತೇನೆ. ಶಾಸಕರು ಕೂಡ ಅಷ್ಟೊತ್ತಿಗೆ ಬರುತ್ತಾರೆ. ಆ ಮೇಲೆ ಬ್ರೇಕ್ ಫಾಸ್ಟ್​ಗೆ ಸೇರುತ್ತೇವೆ. ಎಲ್ಲರೂ ಒಟ್ಟಿಗೆ ಮತ ಹಾಕುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 26 February 24

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ