AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ: ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿಶ್ವಾಸ

ನಾಳೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಎನ್​ಡಿಎ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ನಡುವೆ ತಮ್ಮ ಗೆಲುವಿಗೆ ಬೇಕಾದ ವಿಶ್ವಾಸ ಮತಗಳು ಬರುತ್ತವೆ ಎಂದು ಹೇಳುವ ಮೂಲಕ ಕುಪೇಂದ್ರ ರೆಡ್ಡಿ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ: ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿಶ್ವಾಸ
ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ ಎಂದ ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ
ಕಿರಣ್​ ಹನಿಯಡ್ಕ
| Edited By: |

Updated on:Feb 26, 2024 | 5:17 PM

Share

ಬೆಂಗಳೂರು, ಫೆ.26: ನಾಳೆ ರಾಜ್ಯಸಭಾ ಚುನಾವಣೆ (Rajya Sabha Election) ನಡೆಯಲಿದ್ದು, ಎನ್​ಡಿಎ (NDA) ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ (Kupendra Reddy) ಅವರ ಗೆಲುವಿಗೆ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ನಡುವೆ ತಮ್ಮ ಗೆಲುವಿಗೆ ಬೇಕಾದ ವಿಶ್ವಾಸ ಮತಗಳು ಬರುತ್ತವೆ ಎಂದು ಹೇಳುವ ಮೂಲಕ ಕುಪೇಂದ್ರ ರೆಡ್ಡಿ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಕುಪೇಂದ್ರ ರೆಡ್ಡಿ, ಕಳೆದ ಬಾರಿ ನಾನು ಸೋತೆ, ಆಗಲೂ ವಿಶ್ವಾಸದಲ್ಲಿದ್ದೆ. ಈ ಬಾರಿಯೂ ಸೋಲುತ್ತೇನೆ ಅಂತಾ ಇಟ್ಟುಕೊಳ್ಳಿ. ಇಲ್ಲಿ ವಿಶ್ವಾಸ ಎನ್ನುವುದು ಸೋಲುತ್ತೇನೆ, ಗೆಲ್ಲುತ್ತೇನೆ ಎನ್ನುವುದಲ್ಲ. ನಾವು ನಮ್ಮ ಮತಗಳನ್ನು ಕ್ರೋಢೀಕರಣ ಮಾಡುತ್ತೇವಾ ಎಂಬುದು ವಿಶ್ವಾಸವಾಗಿದೆ. ಯಾವುದೇ ಮತಗಳು ಆ ಕಡೆ ಈ ಕಡೆ ಆಗಬಾರದು ಅಂತಾ ಕುಮಾರಸ್ವಾಮಿ ಕೂಡಾ ಹೇಳಿದ್ದಾರೆ ಎಂದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಮತ ಕಾಂಗ್ರೆಸ್ ಅಭ್ಯರ್ಥಿಗೆ ಬಹುತೇಕ ಖಚಿತ

ನನಗಂತೂ ಮತಗಳು ಬರುತ್ತವೆ ಎಂಬ ಶೇಕಡಾ 100 ರಷ್ಟು ವಿಶ್ವಾಸ ಇದೆ. ಆ ಮತಗಳು ಬರುತ್ತವೆ. ಪಕ್ಷೇತರರಿಂದ ಬರುತ್ತವೋ ಅಥವಾ ಬೇರೆ ರೀತಿ ಬರುತ್ತವೋ, ಒಟ್ಟಾರೆಯಾಗಿ ವಿಶ್ವಾಸ ಮತಗಳು ನನಗೆ ಬರುತ್ತವೆ ಎಂಬ ವಿಶ್ವಾಸ ಇದೆ. ಅದರ ಬಗ್ಗೆ ನನಗೆ ಗ್ಯಾರಂಟಿ ಇದೆ ಎಂದರು.

ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಶಾಸಕರ ಸಂಪರ್ಕ ವಿಚಾರವಾಗಿ ಮಾತನಾಡಿದ ಕುಪೇಂದ್ರ ರೆಡ್ಡಿ, ಇವೆಲ್ಲಾ ಊಹಾಪೋಹಗಳು ಯಾಕೆ? ಜೆಡಿಎಸ್ ಶಾಸಕರು ಇವತ್ತು ಎಲ್ಲರು ಬಂದಿದ್ದರು. ನಾಳೆ ಒಂದು ಆ ಕಡೆ ಹೋದರೂ ಪ್ರಶ್ನೆ ಮಾಡಿ. ಶಾಸಕರನ್ನು ಹೋಟೆಲ್​ಗೆ ಕರೆದಿಲ್ಲ. ವಿಧಾನಸೌಧಕ್ಕೆ ನಾನು‌ ನಾಳೆ 8 ಗಂಟೆಗೆ ಬರುತ್ತೇನೆ. ಶಾಸಕರು ಕೂಡ ಅಷ್ಟೊತ್ತಿಗೆ ಬರುತ್ತಾರೆ. ಆ ಮೇಲೆ ಬ್ರೇಕ್ ಫಾಸ್ಟ್​ಗೆ ಸೇರುತ್ತೇವೆ. ಎಲ್ಲರೂ ಒಟ್ಟಿಗೆ ಮತ ಹಾಕುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 26 February 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್