ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ: ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿಶ್ವಾಸ

ನಾಳೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಎನ್​ಡಿಎ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ನಡುವೆ ತಮ್ಮ ಗೆಲುವಿಗೆ ಬೇಕಾದ ವಿಶ್ವಾಸ ಮತಗಳು ಬರುತ್ತವೆ ಎಂದು ಹೇಳುವ ಮೂಲಕ ಕುಪೇಂದ್ರ ರೆಡ್ಡಿ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ: ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿಶ್ವಾಸ
ಗೆಲುವಿಗೆ ಅವಶ್ಯವಿರುವ ಮತಗಳು ನನಗೆ ಬರುತ್ತವೆ ಎಂದ ರಾಜ್ಯಸಭೆ ಚುನಾವಣೆ NDA ಅಭ್ಯರ್ಥಿ ಕುಪೇಂದ್ರ ರೆಡ್ಡಿ
Follow us
| Updated By: Rakesh Nayak Manchi

Updated on:Feb 26, 2024 | 5:17 PM

ಬೆಂಗಳೂರು, ಫೆ.26: ನಾಳೆ ರಾಜ್ಯಸಭಾ ಚುನಾವಣೆ (Rajya Sabha Election) ನಡೆಯಲಿದ್ದು, ಎನ್​ಡಿಎ (NDA) ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ (Kupendra Reddy) ಅವರ ಗೆಲುವಿಗೆ ನಾಲ್ಕರಿಂದ ಐದು ಮತಗಳ ಕೊರತೆ ಇದೆ. ಈ ನಡುವೆ ತಮ್ಮ ಗೆಲುವಿಗೆ ಬೇಕಾದ ವಿಶ್ವಾಸ ಮತಗಳು ಬರುತ್ತವೆ ಎಂದು ಹೇಳುವ ಮೂಲಕ ಕುಪೇಂದ್ರ ರೆಡ್ಡಿ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಕುಪೇಂದ್ರ ರೆಡ್ಡಿ, ಕಳೆದ ಬಾರಿ ನಾನು ಸೋತೆ, ಆಗಲೂ ವಿಶ್ವಾಸದಲ್ಲಿದ್ದೆ. ಈ ಬಾರಿಯೂ ಸೋಲುತ್ತೇನೆ ಅಂತಾ ಇಟ್ಟುಕೊಳ್ಳಿ. ಇಲ್ಲಿ ವಿಶ್ವಾಸ ಎನ್ನುವುದು ಸೋಲುತ್ತೇನೆ, ಗೆಲ್ಲುತ್ತೇನೆ ಎನ್ನುವುದಲ್ಲ. ನಾವು ನಮ್ಮ ಮತಗಳನ್ನು ಕ್ರೋಢೀಕರಣ ಮಾಡುತ್ತೇವಾ ಎಂಬುದು ವಿಶ್ವಾಸವಾಗಿದೆ. ಯಾವುದೇ ಮತಗಳು ಆ ಕಡೆ ಈ ಕಡೆ ಆಗಬಾರದು ಅಂತಾ ಕುಮಾರಸ್ವಾಮಿ ಕೂಡಾ ಹೇಳಿದ್ದಾರೆ ಎಂದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಮತ ಕಾಂಗ್ರೆಸ್ ಅಭ್ಯರ್ಥಿಗೆ ಬಹುತೇಕ ಖಚಿತ

ನನಗಂತೂ ಮತಗಳು ಬರುತ್ತವೆ ಎಂಬ ಶೇಕಡಾ 100 ರಷ್ಟು ವಿಶ್ವಾಸ ಇದೆ. ಆ ಮತಗಳು ಬರುತ್ತವೆ. ಪಕ್ಷೇತರರಿಂದ ಬರುತ್ತವೋ ಅಥವಾ ಬೇರೆ ರೀತಿ ಬರುತ್ತವೋ, ಒಟ್ಟಾರೆಯಾಗಿ ವಿಶ್ವಾಸ ಮತಗಳು ನನಗೆ ಬರುತ್ತವೆ ಎಂಬ ವಿಶ್ವಾಸ ಇದೆ. ಅದರ ಬಗ್ಗೆ ನನಗೆ ಗ್ಯಾರಂಟಿ ಇದೆ ಎಂದರು.

ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಶಾಸಕರ ಸಂಪರ್ಕ ವಿಚಾರವಾಗಿ ಮಾತನಾಡಿದ ಕುಪೇಂದ್ರ ರೆಡ್ಡಿ, ಇವೆಲ್ಲಾ ಊಹಾಪೋಹಗಳು ಯಾಕೆ? ಜೆಡಿಎಸ್ ಶಾಸಕರು ಇವತ್ತು ಎಲ್ಲರು ಬಂದಿದ್ದರು. ನಾಳೆ ಒಂದು ಆ ಕಡೆ ಹೋದರೂ ಪ್ರಶ್ನೆ ಮಾಡಿ. ಶಾಸಕರನ್ನು ಹೋಟೆಲ್​ಗೆ ಕರೆದಿಲ್ಲ. ವಿಧಾನಸೌಧಕ್ಕೆ ನಾನು‌ ನಾಳೆ 8 ಗಂಟೆಗೆ ಬರುತ್ತೇನೆ. ಶಾಸಕರು ಕೂಡ ಅಷ್ಟೊತ್ತಿಗೆ ಬರುತ್ತಾರೆ. ಆ ಮೇಲೆ ಬ್ರೇಕ್ ಫಾಸ್ಟ್​ಗೆ ಸೇರುತ್ತೇವೆ. ಎಲ್ಲರೂ ಒಟ್ಟಿಗೆ ಮತ ಹಾಕುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Mon, 26 February 24

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು