AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ: ಶಾಸಕ ಗಣೇಶ್ ಹುಕ್ಕೇರಿ

ಮುಖ್ಯಮಂತ್ರಿಗಳ ಮನವಿಯಂತೆ ಒಂದು ತಿಂಗಳ ಸಂಬಳವನ್ನ ಕೊವಿಡ್ ನಿಧಿಗೆ ನೀಡಿದ್ದೇನೆ. ಅದರ ಜೊತೆಗೆ ಮುಂದಿನ ಮೂರು ತಿಂಗಳ‌ ಸಂಬಳವನ್ನ ಫ್ರಂಟ್​ ಲೈನ್ ಕೊವಿಡ್ ವಾರಿಯರ್​ಗಳಿಗೆ ನೀಡಲು ನಿರ್ಧಾರ ಮಾಡಿದ್ದೇನೆ ಎಂದು ಶಾಸಕ ಗಣೇಶ್ ಹುಕ್ಕೇರಿ ತಿಳಿಸಿದ್ದಾರೆ.

ಮುಂದಿನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ: ಶಾಸಕ ಗಣೇಶ್ ಹುಕ್ಕೇರಿ
ಶಾಸಕ ಗಣೇಶ್ ಹುಕ್ಕೇರಿ
preethi shettigar
| Edited By: sandhya thejappa|

Updated on:May 01, 2021 | 8:25 AM

Share

ಬೆಂಗಳೂರು: ಕಾರ್ಮಿಕರ ದಿನಾಚರಣೆಯಂದು ಕೊವಿಡ್ ವಾರಿಯರ್​ಗಳಿಗೆ ನೆರವಾಗಲು ಮುಂದಾದ ಸದಲಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ, ನನ್ನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ತಮ್ಮ ಸ್ವಂತ ಹಣದಲ್ಲಿ 120 ಬೆಡ್‌ಗಳ ಆಸ್ಪತ್ರೆ ನಿರ್ಮಾಣ ಮಾಡಿರುವ ಶಾಸಕ ಗಣೇಶ್ ಹುಕ್ಕೇರಿ ಉಚಿತ ಆ್ಯಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಮನವಿಯಂತೆ ಒಂದು ತಿಂಗಳ ಸಂಬಳವನ್ನ ಕೊವಿಡ್ ನಿಧಿಗೆ ನೀಡಿದ್ದೇನೆ. ಅದರ ಜೊತೆಗೆ ಮುಂದಿನ ಮೂರು ತಿಂಗಳ‌ ಸಂಬಳವನ್ನ ಫ್ರಂಟ್​ ಲೈನ್ ಕೊವಿಡ್ ವಾರಿಯರ್​ಗಳಿಗೆ ನೀಡಲು ನಿರ್ಧಾರ ಮಾಡಿದ್ದೇನೆ ಎಂದು ಶಾಸಕ ಗಣೇಶ್ ಹುಕ್ಕೇರಿ ತಿಳಿಸಿದ್ದಾರೆ.

ಈಗಾಗಲೇ ರೋಗಿಗಳಿಗೆ ಉಚಿತ ಊಟ, ತಿಂಡಿ, ಹಣ್ಣು ಎಲ್ಲವನ್ನೂ ತಮ್ಮ ಅಣ್ಣಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಗಣೇಶ್ ಹುಕ್ಕೇರಿ ನಿಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆ, ಅಣ್ಣಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಖಾಲಿ ಇರುವ ಸ್ಥಾನಕ್ಕೆ ಸಂಬಳ ನೀಡಿ ಸಿಬ್ಬಂದಿಗಳನ್ನು ಕೂಡ ಭರ್ತಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

ಹಿರೇಕೆರೂರು, ರಟ್ಟಿಹಳ್ಳಿ ವ್ಯಾಪ್ತಿಯ ಬಡ ಕುಟುಂಬಗಳಿಗೆ ಕೃಷಿ ಸಚಿವರ ಸಹಾಯ ಹಸ್ತ; ಕೊರೊನಾ ಸೋಂಕಿತರ ವೆಚ್ಚ ಭರಿಸಲು ಮುಂದಾದ ಬಿ.ಸಿ.ಪಾಟೀಲ್

ಭಾವನಾತ್ಮಕ ಟ್ವೀಟ್; ಕೊರೊನಾ ವಿರುದ್ಧ ಹೋರಾಟಕ್ಕೆ ದೊಡ್ಡ ಮೊತ್ತದ ಧನಸಹಾಯ ಮಾಡಿದ ಆಸಿಸ್ ವೇಗಿ ಬ್ರೆಟ್ ಲೀ

(I will provide next 3 months salary of mine to Asha workers says minister Ganesh Hukkeri)

Published On - 8:15 am, Sat, 1 May 21

Follow Us
preethi shettigar
preethi shettigar
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು