AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಅಧಿಕಾರಿ ದೀಪಾ ಚೋಳನ್ ತಂದೆ, ತಾಯಿ ಕೊವಿಡ್​ಗೆ ಬಲಿ

ದೀಪಾ ಚೋಳನ್ ಮತ್ತು ರಾಜೇಂದ್ರ ಚೋಳನ್ ಕೊರೊನಾ ವಿರುದ್ಧ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಮಹಾಮಾರಿ ಕೊರೊನಾದಿಂದ ದೀಪಾ ಚೋಳನ್ ತನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ. ದೀಪಾ ಮೇ 26 ರಂದು ತಂದೆಯನ್ನು ಕಳೆದುಕೊಂಡಿದ್ದರೆ, ಎರಡು ವಾರದ ಮುಂಚೆ ತಾಯಿ ನಿಧನರಾಗಿದ್ದರು.

ಐಎಎಸ್ ಅಧಿಕಾರಿ ದೀಪಾ ಚೋಳನ್ ತಂದೆ, ತಾಯಿ ಕೊವಿಡ್​ಗೆ ಬಲಿ
ಐಎಎಸ್ ಅಧಿಕಾರಿ ದೀಪಾ ಚೋಳನ್ ಕುಟುಂಬ
sandhya thejappa
|

Updated on: Jun 01, 2021 | 10:40 AM

Share

ಬೆಂಗಳೂರು: ಐಎಎಸ್ ಅಧಿಕಾರಿಯಾದ ದೀಪಾ ಚೋಳನ್ರವರ ತಂದೆ ಮತ್ತು ತಾಯಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ದೀಪಾ ಚೋಳನ್ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ರಾಜೇಂದ್ರ ಚೋಳನ್ ಪತ್ನಿ. ಸದ್ಯ ಚೋಳನ್ ದಂಪತಿ ಕೊವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದಾರೆ. 10 ದಿನದ ಅಂತರದಲ್ಲಿ ದೀಪಾ ಚೋಳನ್ ತಂದೆ ಹಾಗೂ ತಾಯಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್ ನಿರ್ವಹಣೆ ಹೊಣೆ ಹೊತ್ತಿದ್ದ ರಾಜೇಂದ್ರ ಚೋಳನ್ ಅತ್ತೆ, ಮಾವನ ಅಂತ್ಯಸಂಸ್ಕಾರಕ್ಕೂ ಹೋಗಲು ಸಾಧ್ಯವಾಗಲಿಲ್ಲ.

ದೀಪಾ ಚೋಳನ್ ಮತ್ತು ರಾಜೇಂದ್ರ ಚೋಳನ್ ಕೊರೊನಾ ವಿರುದ್ಧ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಮಹಾಮಾರಿ ಕೊರೊನಾದಿಂದ ದೀಪಾ ಚೋಳನ್ ತನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ. ದೀಪಾ ಮೇ 26 ರಂದು ತಂದೆಯನ್ನು ಕಳೆದುಕೊಂಡಿದ್ದರೆ, ಎರಡು ವಾರದ ಮುಂಚೆ ತಾಯಿ ನಿಧನರಾಗಿದ್ದರು. ರಾಜೇಂದ್ರ ಚೋಳನ್ ತಂದೆ ತಾಯಿಗೂ ಇದೀಗ ಕೊವಿಡ್ ಧೃಡಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ತವ್ಯದಲ್ಲಿರುವ ಕಾರಣ ರಾಜೇಂದ್ರ ಚೋಳನ್​ಗೆ ಊರಿಗೆ ಹೋಗಲು ಸಾಧ್ಯವಾಗುತ್ತಿಲ್ಲ.

ಕೊವಿಡ್​ಗೆ ತಾಯಿ, ಮಗ ಬಲಿ ತುಮಕೂರು: ತಾಲೂಕಿನ ಚಿಕ್ಕಕೊರಟಗೆರೆಯಲ್ಲಿ 13 ದಿನಗಳ ಅಂತರದಲ್ಲಿ ಕೊರೊನಾ ಸೋಂಕಿನಿಂದ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ. ಮೇ 18 ರಂದು 65 ವರ್ಷದ ಚಿಕ್ಕಮ್ಮ ಸಾವನ್ನಪ್ಪಿದ್ದಾರೆ. ಇಂದು (ಜೂನ್ 1) 43 ವರ್ಷದ ಮಗ ಕುಮಾರಸ್ವಾಮಿ ಕೂಡಾ ಕೊವಿಡ್​ಗೆ ಬಲಿಯಾಗಿದ್ದಾರೆ. ಕುಮಾರಸ್ವಾಮಿ ಪ್ರಸಿದ್ದ ಕೆಂಪಮ್ಮ ದೇವಿ ಅರ್ಚಕರಾಗಿದ್ದರು. ಸೋಂಕು ತಗುಲಿದ ಕುಮಾರಸ್ವಾಮಿ ಪತ್ನಿ, ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಇದನ್ನೂ ಓದಿ

Coronavirus Cases in India: ದೇಶದಲ್ಲಿ 1.27 ಲಕ್ಷ ಹೊಸ ಕೊವಿಡ್ ಪ್ರಕರಣ, 2795 ಮಂದಿ ಸಾವು

ನಿವೃತ್ತ ಚಾಲಕನನ್ನು ಕೂರಿಸಿಕೊಂಡು ಕಾರು ಚಾಲನೆ; ಹೃದಯಸ್ಪರ್ಶಿ ಕೊಡುಗೆ ನೀಡಿದ ಕೊಪ್ಪಳ ತಹಶೀಲ್ದಾರ್

(IAS officer Deepa Cholan father and mother died due to corona)

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ