AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟಿದ್ದ ಮಕರಬ್ಬಿ ಗ್ರಾಮಕ್ಕೆ ಮನೀಶ್ ಮೌದ್ಗೀಲ್ ಭೇಟಿ

ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿ ಗ್ರಾಮಕ್ಕೆ ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದ ಉನ್ನತ ಅಧಿಕಾರಿಗಳ ತನಿಖಾ ತಂಡ ಗುರುವಾರ (ಅ.7) ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟಿದ್ದ ಮಕರಬ್ಬಿ ಗ್ರಾಮಕ್ಕೆ ಮನೀಶ್ ಮೌದ್ಗೀಲ್ ಭೇಟಿ
ಐಎಎಸ್​ ಮನೀಶ್ ಮೌದ್ಗಿಲ್​
TV9 Web
| Edited By: |

Updated on: Oct 07, 2021 | 5:00 PM

Share

ಬಳ್ಳಾರಿ: ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿ ಗ್ರಾಮಕ್ಕೆ ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದ ಉನ್ನತ ಅಧಿಕಾರಿಗಳ ತನಿಖಾ ತಂಡ ಗುರುವಾರ (ಅ.7) ಭೇಟಿ ನೀಡಿ ಪರಿಶೀಲನೆ ನಡೆಸಿತು.

ಘಟನೆಗೆ ಕಾರಣವೇನು ಎಂದು ತಂಡವು ಪರಿಶೀಲನೆ ನಡೆಸುತ್ತಿದೆ. ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಕೆ.ಅರುಣ್, ಜಿಪಂ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಮಕರಬ್ಬಿ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ಸಭೆಯಲ್ಲಿ ಕಲುಷಿತ ನೀರಿನ ಬಗ್ಗೆ ಮನೀಶ್ ಮೌದ್ಗಿಲ್ ಮಾಹಿತಿ ಸಂಗ್ರಹಿಸಿದರು. ಸಭೆ ಬಳಿಕ ಮೃತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದೆ. ಪೈಪ್​ಲೈನ್ ವೀಕ್ಷಣೆ ಮಾಡಲಿದೆ. ಸಾವಿನ ಕುರಿತು ಟಿವಿ9 ನಿರಂತರ ವರದಿ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ತನಿಖಾ ತಂಡ ರಚಿಸಿತ್ತು.

ಮಕರಬ್ಬಿಯಲ್ಲಿ ಏನಾಗಿತ್ತು? ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಒಟ್ಟು ಆರು ಮಂದಿ ಸಾವನ್ನಪ್ಪಿದ್ದರು. ಬೋರ್​ವೆಲ್​ನಿಂದ ನೀರು ಸರಬರಾಜಿಗೆ ಹೊಸ ಪೈಪ್​ಲೈನ್ ಅಳವಡಿಸುವ ಕಾಮಗಾರಿ ವೇಳೆ ಹಳೆಯ ಪೈಪ್​ಲೈನ್​ಗಳಿಗೆ ಧಕ್ಕೆಯಾಗಿತ್ತು. ಹಾಳಾದ ಪೈಪ್​ಗಳಲ್ಲಿ ಚರಂಡಿ ನೀರು ಮಿಶ್ರಣವಾಗಿದ್ದು, ಇದೇ ನೀರನ್ನು ಮಕರಬ್ಬಿ ಗ್ರಾಮಸ್ಥರು ಸೇವಿಸಿದ್ದರು. ಸುಮಾರು 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಇರುವ ಮಕರಬ್ಬಿ ಗ್ರಾಮದಲ್ಲಿ 200ಕ್ಕೂ ಹೆಚ್ಚು ಜನರು ವಾಂತಿಭೇದಿಯಿಂದ ಬಳಲಿದ್ದರು. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಯಲ್ಲಿ ಈ ಪೈಕಿ ಹಲವರು ಚಿಕಿತ್ಸೆ ಪಡೆದಿದ್ದರು.

ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವಿಸಿ 6 ಜನರ ಸಾವು ಪ್ರಕರಣ, ಇಬ್ಬರು ಅಧಿಕಾರಿಗಳು ಅಮಾನತು ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಣೆ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ