AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟಿದ್ದ ಮಕರಬ್ಬಿ ಗ್ರಾಮಕ್ಕೆ ಮನೀಶ್ ಮೌದ್ಗೀಲ್ ಭೇಟಿ

ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿ ಗ್ರಾಮಕ್ಕೆ ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದ ಉನ್ನತ ಅಧಿಕಾರಿಗಳ ತನಿಖಾ ತಂಡ ಗುರುವಾರ (ಅ.7) ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟಿದ್ದ ಮಕರಬ್ಬಿ ಗ್ರಾಮಕ್ಕೆ ಮನೀಶ್ ಮೌದ್ಗೀಲ್ ಭೇಟಿ
ಐಎಎಸ್​ ಮನೀಶ್ ಮೌದ್ಗಿಲ್​
TV9 Web
| Edited By: |

Updated on: Oct 07, 2021 | 5:00 PM

Share

ಬಳ್ಳಾರಿ: ಕಲುಷಿತ ನೀರು ಸೇವಿಸಿ ಆರು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿ ಗ್ರಾಮಕ್ಕೆ ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದ ಉನ್ನತ ಅಧಿಕಾರಿಗಳ ತನಿಖಾ ತಂಡ ಗುರುವಾರ (ಅ.7) ಭೇಟಿ ನೀಡಿ ಪರಿಶೀಲನೆ ನಡೆಸಿತು.

ಘಟನೆಗೆ ಕಾರಣವೇನು ಎಂದು ತಂಡವು ಪರಿಶೀಲನೆ ನಡೆಸುತ್ತಿದೆ. ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಕೆ.ಅರುಣ್, ಜಿಪಂ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಮಕರಬ್ಬಿ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ಸಭೆಯಲ್ಲಿ ಕಲುಷಿತ ನೀರಿನ ಬಗ್ಗೆ ಮನೀಶ್ ಮೌದ್ಗಿಲ್ ಮಾಹಿತಿ ಸಂಗ್ರಹಿಸಿದರು. ಸಭೆ ಬಳಿಕ ಮೃತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದೆ. ಪೈಪ್​ಲೈನ್ ವೀಕ್ಷಣೆ ಮಾಡಲಿದೆ. ಸಾವಿನ ಕುರಿತು ಟಿವಿ9 ನಿರಂತರ ವರದಿ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ತನಿಖಾ ತಂಡ ರಚಿಸಿತ್ತು.

ಮಕರಬ್ಬಿಯಲ್ಲಿ ಏನಾಗಿತ್ತು? ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಒಟ್ಟು ಆರು ಮಂದಿ ಸಾವನ್ನಪ್ಪಿದ್ದರು. ಬೋರ್​ವೆಲ್​ನಿಂದ ನೀರು ಸರಬರಾಜಿಗೆ ಹೊಸ ಪೈಪ್​ಲೈನ್ ಅಳವಡಿಸುವ ಕಾಮಗಾರಿ ವೇಳೆ ಹಳೆಯ ಪೈಪ್​ಲೈನ್​ಗಳಿಗೆ ಧಕ್ಕೆಯಾಗಿತ್ತು. ಹಾಳಾದ ಪೈಪ್​ಗಳಲ್ಲಿ ಚರಂಡಿ ನೀರು ಮಿಶ್ರಣವಾಗಿದ್ದು, ಇದೇ ನೀರನ್ನು ಮಕರಬ್ಬಿ ಗ್ರಾಮಸ್ಥರು ಸೇವಿಸಿದ್ದರು. ಸುಮಾರು 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಇರುವ ಮಕರಬ್ಬಿ ಗ್ರಾಮದಲ್ಲಿ 200ಕ್ಕೂ ಹೆಚ್ಚು ಜನರು ವಾಂತಿಭೇದಿಯಿಂದ ಬಳಲಿದ್ದರು. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಯಲ್ಲಿ ಈ ಪೈಕಿ ಹಲವರು ಚಿಕಿತ್ಸೆ ಪಡೆದಿದ್ದರು.

ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವಿಸಿ 6 ಜನರ ಸಾವು ಪ್ರಕರಣ, ಇಬ್ಬರು ಅಧಿಕಾರಿಗಳು ಅಮಾನತು ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಣೆ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು