AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohini Vs Roopa: ಸಾಲು ಸಾಲು ಆರೋಪ ಮಾಡಿದ ರೂಪಾ ವಿರುದ್ಧ ಕಾನೂನು ಸಮರಕ್ಕಿಳಿದ ರೋಹಿಣಿ, IPS ಅಧಿಕಾರಿಗೆ ಲೀಗಲ್​ ನೋಟಿಸ್!

ಸಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿರುವ ಡಿ ರೂಪಾ ಮೌದ್ಗಿಲ್​ ವಿರುದ್ಧ ರೋಹಿಣಿ ಸಿಂಧೂರಿ ಕಾನೂನು ಹೋರಾಟಕ್ಕಿಳಿದಿದ್ದಾರೆ.

Rohini Vs Roopa: ಸಾಲು ಸಾಲು ಆರೋಪ ಮಾಡಿದ ರೂಪಾ ವಿರುದ್ಧ ಕಾನೂನು ಸಮರಕ್ಕಿಳಿದ ರೋಹಿಣಿ, IPS ಅಧಿಕಾರಿಗೆ ಲೀಗಲ್​ ನೋಟಿಸ್!
ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ
Follow us
ರಮೇಶ್ ಬಿ. ಜವಳಗೇರಾ
|

Updated on:Feb 22, 2023 | 10:37 PM

ಬೆಂಗಳೂರು: ಅತ್ತ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್(d roopa moudgil) ನಿರಂತರವಾಗಿ ಆರೋಪಗಳನ್ನು ಮಾಡುತ್ತಿದ್ದರೆ, ಇತ್ತ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (rohini sindhuri), ರೂಪಾ ವಿರುದ್ಧ ಕಾನೂನು ಸಮರ ಸಾರಿದ್ದಾರೆ. ರೂಪಾ ವಿರುದ್ಧ ನಿರ್ಬಂಧಕಾಜ್ಞೆ ವಿಧಿಸುವಂತೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ರೋಹಿಣಿ ಸಿಂಧೂರಿ ತಮ್ಮ ಪರ ವಕೀಲರ ಮೂಲಕ ರೂಪಾಗೆ ಲೀಗಲ್ ನೋಟಿಸ್(legal notice) ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Rohini Vs Roopa: ರೂಪಾ ವಿರುದ್ಧ ಕೋರ್ಟ್​​​​ಗೆ ರೋಹಿಣಿ ಸಿಂಧೂರಿ ಅರ್ಜಿ, ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಹೌದು.. ಸಾಮಾಜಿಕ ಜಾಲತಾಣಗಳಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೈಯಕ್ತಿ ಫೋಟೋಗಳನ್ನು ಹರಿಬಿಟ್ಟು ಸಾಲು ಸಾಲು ಆರೋಪಗಳನ್ನು ಮಾಡಿರುವ ಐಪಿಎಸ್​ ಡಿ. ರೂಪಾಗೆ ಲೀಗಲ್‌ ನೋಟಿಸ್‌ ನೀಡಲಾಗಿದೆ. ರೋಹಿಣಿ ಸಿಂಧೂರಿ ಅವರು ತಮ್ಮ ಪರ ವಕೀಲ ಸಿವಿ ನಾಗೇಶ್‌ ಮೂಲಕ ಲೀಗಲ್‌ ನೋಟಿಸ್‌ ನಿಡಿದ್ದಾರೆ. ಈ ನೋಟಿಸ್‌ ತಲುಪಿದ 24 ಗಂಟೆಯ ಒಳಗಾಗಿ ರೂಪಾ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ 1 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ನೋಟಿಸ್​ನಲ್ಲಿ 21 ಅಂಶಗಳನ್ನು ಉಲ್ಲೇಖಿಸಿ ರೂಪಾ ಅವರ ಮನೆ ಹಾಗೂ ಕೆಲಸದ ಸ್ಥಳದ ವಿಳಾಸಕ್ಕೆ ಕಳುಹಿಸಿದ್ದಾರೆ. ಅದರೊಂದಿಗೆ ತಮ್ಮ ಫೇಸ್‌ಬುಕ್‌ ಪೇಜ್​ನಲ್ಲಿ ಹಂಚಿಕೊಂಡಿರುವ ಮಾನಹಾನಿಕರ ಮೆಸೇಜ್‌ಗಳು ಹಾಗೂ ಚಿತ್ರವನ್ನು ತಕ್ಷಣವೇ ಡಿಲೀಟ್‌ ಮಾಡಬೇಕು. ಹಾಗೇ ಕ್ಷಮೆಯಾಚಿಸಬೇಕೆಂದು ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿಯವರ ವೈಯಕ್ತಿ ಫೋಟೋ ಏಕೆ ಹಾಕಿದ್ದೀರಿ ಎಂದು ಪ್ರಶ್ನಿಸಿದವರಿಗೆ ರೂಪಾ ಕೊಟ್ಟ ಉತ್ತರ ಹೀಗಿದೆ

ಡಿ.ರೂಪಾ ಅವರು ಲಿಖಿತ ರೂಪದಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಅದಕ್ಕೂ ಮುನ್ನ ಮಾನಹಾನಿಕರ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಬೇಕು. 1 ಕೋಟಿ ರೂಪಾಯು ಮಾನನಷ್ಟ ಮೊಕದ್ದಮೆಯೊಂದಿಗೆ ಈ ನೋಟಿಸ್‌ ನೀಡಲು ಖರ್ಚಾಗಿರುವ 50 ಸಾವಿರ ರೂಪಾಯಿಯನ್ನು ರೂಪಾ ಅವರೇ ಭರಿಸಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ.ಇಲ್ಲದಿದ್ದರೆ 1 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹಾಕುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ರೂಪಾ ಮುಂದೆ ಯಾವ ಹೆಜ್ಜೆ ಇಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 10:27 pm, Wed, 22 February 23

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ