AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohini Vs Roopa: ರೂಪಾ ವಿರುದ್ಧ FIR ದಾಖಲಿಸಲು ರೋಹಿಣಿ ಸಿಂಧೂರಿ ಪಟ್ಟು, ಪೊಲೀಸ್ ಆಯುಕ್ತರಿಗೆ ಪತ್ರ

ರೋಹಿಣಿ ಸಿಂಧೂರಿ ಕೋರ್ಟ್​ನಿಂದ ತಡೆಯಾಜ್ಞೆ ತಂದಿರುವ ಬೆನ್ನಲ್ಲೇ ಇದೀಗ ರೂಪಾ ವಿರುದ್ಧ ಎಫ್​ಐಆರ್​ ದಾಖಲಿಸಿಕೊಳ್ಳುವಂತೆ ಬಿಗಿಪಟ್ಟು ಹಿಡಿದಿದ್ದಾರೆ.

Rohini Vs Roopa: ರೂಪಾ ವಿರುದ್ಧ FIR ದಾಖಲಿಸಲು ರೋಹಿಣಿ ಸಿಂಧೂರಿ ಪಟ್ಟು, ಪೊಲೀಸ್ ಆಯುಕ್ತರಿಗೆ ಪತ್ರ
ರಮೇಶ್ ಬಿ. ಜವಳಗೇರಾ
|

Updated on: Feb 23, 2023 | 8:12 PM

Share

ಬೆಂಗಳೂರು: ಯಾವುದೇ ಮಾನಹಾನಿಕಾರ ಹೇಳಿಕೆ, ಆರೋಪಗಳನ್ನು ಮಾಡದಂತೆ ಡಿ ರೂಪಾ ಮೌದ್ಗಿಲ್(D Roopa moudgil)  ಸೇರಿದಂತೆ ಇತರೆ ಪ್ರತಿವಾದಿಗಳ ವಿರುದ್ಧ ರೋಹಿಣಿ ಸಿಂಧೂರಿ (Rohini SIndhuri) ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಐಪಿಎಸ್​ ಡಿ. ರೂಪಾ ಮೌದ್ಗಿಲ್ ವಿರುದ್ಧ FIR ದಾಖಲಿಸುವಂತೆ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದಾರೆ. ರೂಪಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಿ ಎಂದು ರೋಹಿಣಿ ಸಿಂಧೂರಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿಗೆ ಮತ್ತೆ ಪತ್ರ ಬರೆದಿದ್ದಾರೆ. ಐಟಿ ಕಾಯ್ದೆ, ಐಪಿಸಿ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಿಕೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರೋಹಿಣಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಟಿವಿ9 ಹೊರತುಪಡಿಸಿ ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಕೋರ್ಟ್ ನಿರ್ಬಂಧ

ಐಪಿಸಿ ಸೆಕ್ಷನ್‌ 354ಸಿ, 463, 509, 504, 120ಬಿ, 378 ಹಾಗೂ ಐಟಿ ಕಾಯ್ದೆ ಸೆಕ್ಷನ್ 43, 66, 66ಬಿ, 66ಇ, 67, 67ಎ, 71, 72 ಹಾಗೂ 74ರಡಿ ದೂರು ದಾಖಲಿಸುವಂತೆ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಫೇಸ್ ಬುಕ್ ನಲ್ಲಿ ರೂಪಾ ಮಾನಹಾನಿಕರ ಹೇಳಿಕೆ ನೀಡಿದ್ದಾರೆ. ಖಾಸಗಿ ಫೋಟೋಗಳು, ಸ್ಕ್ರೀನ್ ಷಾಟ್ ಗಳನ್ನು ಹಾಕಿದ್ದಾರೆ. ಕೆಲ ಫೋಟೋಗಳನ್ನು ತಿರುಚಿ ಪೋಸ್ಟ್ ಮಾಡಿದ್ದಾರೆ. ವೃತ್ತಿ ಮಾತ್ಸರ್ಯದಿಂದ ರೂಪಾ ಮೌದ್ಗಿಲ್ ಹೀಗೆ ಮಾಡಿದ್ದಾರೆ. ಈ ಬಗ್ಗೆ ಬಾಗಲಕುಂಟೆ ಪೊಲೀಸರಿಗೆ ದೂರು ನೀಡಿದ್ದೇನೆ. ಆದರೆ ಪೊಲೀಸರು ಈ ಬಗ್ಗೆ ತನಿಖೆಯನ್ನೇ ನಡೆಸಿಲ್ಲ. ರೂಪಾ ಐಜಿಪಿ ರ್ಯಾಂಕ್ ನಲ್ಲಿರುವ ಪವರ್‌ಫುಲ್ ಅಧಿಕಾರಿಯಾಗಿದ್ದಾರೆ. ಹೀಗಾಗಿಯೇ ಪೊಲೀಸರು ತನಿಖೆ ಆರಂಭಿಸಿಲ್ಲವೆಂದು ರೋಹಿಣಿ ಆರೋಪಿಸಿದ್ದಾರೆ.

ರೋಹಿಣಿ ಸಿಂಧೂರಿ ಅವರ ಪತಿ ಸುಧೀರ್ ರೆಡ್ಡಿ ಸೋಮವಾರ ನೇರವಾಗಿ ಬೆಂಗಳೂರಿನ ಬಾಗಲಗುಂಟೆಯ ಪೊಲೀಸ್ ಠಾಣೆಗೆ ತೆರಳಿ ಡಿ. ರೂಪಾ ವಿರುದ್ಧ ದೂರು ದಾಖಲಿಸಿದ್ದರು. ಆದ್ರೆ, ಪೊಲೀಸರು ಈ ಬಗ್ಗೆ ತನಿಖೆಯನ್ನೇ ನಡೆಸಿಲ್ಲ ಎಂದು ರೋಹಿಣಿ ಸಿಂಧೂರಿ ಪತ್ರದ ಮೂಲಕ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿ ಅವರ ಗಮನಕ್ಕೆ ತಂದಿದ್ದಾರೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು