AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಷ್ಠ ಭಾರತ ಕಟ್ಟುವುದೇ ಗುರಿ: 142 ಕೋಟಿ ಜನ ಮನಸ್ಸು ಮಾಡಿದ್ರೆ ನಾಳೆಯೇ ಹಿಂದೂ ರಾಷ್ಟ್ರವಾಗಬಹುದು; ಭಾಗವತ್

ಆರ್​ಎಸ್ಎಸ್ ಶತಮಾನೋತ್ಸವ ಹಿನ್ನೆಲೆ ನಗರದ ಹೊಸಕೆರೆಹಳ್ಳಿಯ PES ಕಾಲೇಜು ಸಭಾಂಗಣದಲ್ಲಿ ನಡೆದ ನವ ಕ್ಷಿತೀಜ ಉಪನ್ಯಾಸ ಕಾರ್ಯಕ್ರಮದಲ್ಲಿ ಆಹ್ವಾನಿತರ ಪ್ರಶ್ನೆಗಳಿಗೆ ಮೋಹನ್ ಭಾಗವತ್ ಅವರು ಉತ್ತರಿಸಿದರು. ಬಲಿಷ್ಠ ಭಾರತ ಕಟ್ಟುವುದೇ ಗುರಿ, ಅದಕ್ಕಾಗಿ ಹಿಂದೂ ಸಮಾಜವನ್ನು ತಯಾರು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಲಿಷ್ಠ ಭಾರತ ಕಟ್ಟುವುದೇ ಗುರಿ: 142 ಕೋಟಿ ಜನ ಮನಸ್ಸು ಮಾಡಿದ್ರೆ ನಾಳೆಯೇ ಹಿಂದೂ ರಾಷ್ಟ್ರವಾಗಬಹುದು; ಭಾಗವತ್
ಮೋಹನ್ ಭಾಗವತ್
ಕಿರಣ್​ ಹನಿಯಡ್ಕ
| Edited By: |

Updated on:Nov 09, 2025 | 6:15 PM

Share

ಬೆಂಗಳೂರು, ನವೆಂಬರ್​ 09: ಮನಸ್ಸು ಮಾಡಿದರೆ ಒಂದೇ ದಿನದಲ್ಲಿ ಭೂಮಿಯಿಂದ ಚಂದ್ರನಲ್ಲಿಗೆ ಹೋಗಬಹುದಂತೆ. ಅದೇ ರೀತಿಯಾಗಿ 142 ಕೋಟಿ ಜನ ಮನಸ್ಸು ಮಾಡಿದರೆ ನಾಳೆ ಬೆಳಗ್ಗೆಯೇ ಹಿಂದೂ ರಾಷ್ಟ್ರ (hindu rashtra) ಆಗಬಹುದು. ಯಾರೂ ಸಹ ಎಷ್ಟು ದಿನ ಬೇಕು ಅಂತ ಹೇಳಿ ಕೊಡುವುದಿಲ್ಲ, ಮುಂದೊಂದು ದಿನ ಹಿಂದೂ ರಾಷ್ಟ್ರ ಆಗಿಯೇ ಆಗುತ್ತದೆ ಈ ಪ್ರಯತ್ನದಲ್ಲಿ ನಾವು ಇದ್ದೇವೆ ಎಂದು ಆರ್​​​ಎಸ್​​ಎಸ್​​ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat)​​ ಹೇಳಿದ್ದಾರೆ.

ಹಿಂದೂ ಸಮಾಜ ಕಟ್ಟುವುದೇ ಗುರಿ

ಆರ್​ಎಸ್ಎಸ್ ಶತಮಾನೋತ್ಸವ ಹಿನ್ನೆಲೆ ನಗರದ ಹೊಸಕೆರೆಹಳ್ಳಿಯ PES ಕಾಲೇಜು ಸಭಾಂಗಣದಲ್ಲಿ ನಡೆದ ನವ ಕ್ಷಿತೀಜ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ಬಲಿಷ್ಠ ಭಾರತ ಕಟ್ಟುವುದೇ ಗುರಿ. ಅದಕ್ಕಾಗಿ ಹಿಂದೂ ಸಮಾಜವನ್ನು ತಯಾರು ಮಾಡುತ್ತಿದ್ದೇವೆ, ಹಿಂದೂ ಸಮಾಜ ಕಟ್ಟುವುದೇ ಗುರಿ ಎಂದು ಹೇಳಿದರು.

ಇದನ್ನೂ ಓದಿ: ಭಗವಾ ಧ್ವಜ ಹಿಂದೂ ಧರ್ಮದ ಪ್ರತೀಕ: RSS ತ್ರಿವರ್ಣಧ್ವಜವನ್ನೂ ಒಪ್ಪಿಕೊಂಡಿದೆ; ಮೋಹನ್ ಭಾಗವತ್

ಯಾವುದೇ ಧರ್ಮ, ಜಾತಿಯವರಿರಲಿ, ಭಾರತ ಮಾತೆಯ ಪುತ್ರರಾಗಿ, ಹಿಂದೂಗಳಾಗಿ ಕೆಲಸ ಮಾಡಬೇಕು. ಎಲ್ಲಾ ಧರ್ಮದವರಿಗೂ ಸಂಘದಲ್ಲಿ ಅವಕಾಶವಿದೆ. ಸಂಘದಿಂದ ಯಾರಿಗೂ ಯಾವುದೇ ನಿರೀಕ್ಷೆ ಇರಬಾರದು. ಜಾತಿ, ಧರ್ಮಗಳ ಹೆಸರಿನಲ್ಲಿ ಸಂಘ ಏನೂ ಮಾಡುವುದಿಲ್ಲ. ಹಿಂದೂಸ್ಥಾನಿ, ಹಿಂದೂ ರಾಷ್ಟ್ರ ಸಂಘದ ಈ ನಿಲುವು ಎಂದಿಗೂ ಬದಲಾಗುವುದಿಲ್ಲ ಎಂದರು.

ಬಾಂಗ್ಲಾದಲ್ಲಿ ಅಡುಗೆಮನೆ: ಭಾರತದಲ್ಲಿ ಬಾತ್ ರೂಮ್ 

ಸ್ವಯಂ ಸೇವಕರಿಗೆ ಎಲ್ಲಾ ರಾಜಕೀಯ ಪಕ್ಷಗಳ ಬಾಗಿಲು ಬಂದ್ ಆಗಿತ್ತು, ಹಾಗಾಗಿ ಬಿಜೆಪಿಗೆ ಹೋದರು. ಬೇರೆ ಪಕ್ಷಗಳಲ್ಲಿ ಸ್ವಯಂ ಸೇವಕರು ಯಾಕಿಲ್ಲ ಎಂದು ಆ ಪಕ್ಷದವರನ್ನೇ ಕೇಳಿ. ನಾವು ರಾಷ್ಟ್ರ ನೀತಿಯನ್ನು ಬೆಂಬಲಿಸುತ್ತೇವೆ ಹೊರತು ರಾಜನೀತಿಯನ್ನಲ್ಲ. ದೇಶದ ಗಡಿ ಬಂದ್ ಮಾಡಿದ್ದಕ್ಕೆ ಮಣಿಪುರದಲ್ಲಿ ಗಲಾಟೆ ಸೃಷ್ಟಿಯಾಯಿತು. ಆದರೆ ನಮ್ಮಲ್ಲಿನ ಕೆಲವರು ಅದನ್ನ ಬೇರೆ ರೀತಿಯಲ್ಲಿ ಬಿಂಬಿಸಿದರು. ಭಾರತದ ಗಡಿ ನಿರ್ಮಾಣ ಅಸ್ವಾಭಾವಿಕವಾಗಿದೆ. ಬಾಂಗ್ಲಾದಲ್ಲಿ ಅಡುಗೆಮನೆಯಾದರೆ, ಭಾರತದಲ್ಲಿ ಬಾತ್ ರೂಮ್ ಆಗಿದೆ. ಪೆನ್ ತೆಗೆದುಕೊಂಡು ಗೆರೆ ಎಳೆದಿದ್ದೇನೆ ಎಂದು ಗಡಿ ರೇಖೆ ಬರೆದ ವ್ಯಕ್ತಿಯೇ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ಮಕ್ಕಳಿಗೆ ಸಂಸ್ಕಾರ ಕಲಿಸದಿದ್ದರೆ ಲವ್ ಜಿಹಾದ್​ಗೆ ಬಲಿಯಾಗಬೇಕಾಗುತ್ತೆ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ರಾಜಕಾರಣಿಗಳು ಜಾತಿ ಜಾತಿಗಳ ವಿಭಜನೆ ಮಾಡುತ್ತಾರೆ. ನಾವೆಲ್ಲಾ ಒಂದೇ ಎಂದು ನೀವ್ಯಾಕೆ ಹೇಳಲ್ಲ? ಭಾರತೀಯ ನಾಗರಿಕರೆಲ್ಲರೂ ಇದನ್ನು ವಿರೋಧಿಸಬೇಕು. ಒಂದೇ ಶತಮಾನದಲ್ಲಿ ಮೂರು ಖಂಡ ಮತಾಂತರವಾಗಿದೆ, ಆದರೆ ಭಾರತ ಹಾಗಾಗಿಲ್ಲ. ಐನೂರು ವರ್ಷ ನಮ್ಮನ್ನು ಆಳಿದರೂ, ಮತಾಂತರಿಗಳು ಇಂದಿಗೂ ಮೈನಾರಿಟಿ ಆಗಿದ್ದಾರೆ. ಒಂದು ಜಾತಿ ಒಂದು ಕೆಲಸ ಎಂಬ ಪದ್ದತಿ ಬೆಳೆದು ಬಂದಿದೆ. ಆದರೆ ಈಗ ಯಾರು ಬೇಕಾದರೂ ಯಾವುದೇ ಕೆಲಸ ಮಾಡಬಹುದು. ಸಂಘದಲ್ಲಿ ಜಾತಿ ಉಲ್ಲೇಖ ಮಾಡಲ್ಲ, ನಮ್ಮ ಜಾತಿಯನ್ನೇ ಮರೆಯುತ್ತೇವೆ. ರಾಜಕೀಯ ಕಾರಣದಿಂದ ಜಾತಿ, ಅಸ್ಪೃಶ್ಯತೆ ಇಂದಿಗೂ ಇದೆ. ಮೀಸಲಾತಿ ಮುಂದುವರೆಯಬೇಕು. ಅಸ್ಪೃಶ್ಯತೆ, ಅಸಮಾನತೆ ಎಲ್ಲಾ ಮೊದಲು ದೂರವಾಗಬೇಕು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:45 pm, Sun, 9 November 25

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ