AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗೆ ಆಗ್ರಹ; ಬೇಡಿಕೆ ಈಡೇರಿಸದಿದ್ದರೆ ಅಕ್ಟೋಬರ್​ 15ರಿಂದ ಮತ್ತೆ ಹೋರಾಟ

ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗೆ ಆಗ್ರಹ ವಿಚಾರದಲ್ಲಿ ಬೇಡಿಕೆ ಈಡೇರಿಸಲು ಮುಖ್ಯಮಮತ್ರಿ ಬಿ.ಎಸ್​ ಯಡಿಯೂರಪ್ಪ 6 ತಿಂಗಳ ಸಮಯ ಕೇಳಿದ್ದಾರೆ. ಆ ಸಮಯದೊಳಗೆ ಬೇಡಿಕೆ ಈಡೇರಿಸದಿದ್ದರೆ ಅಕ್ಟೋಬರ್​ 15ರಿಂದ ಮತ್ತೆ ಹೋರಾಟ ಕೈಗೊಳ್ಳುತ್ತೇವೆ ಪಂಚಮಸಾಲಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗೆ ಆಗ್ರಹ; ಬೇಡಿಕೆ ಈಡೇರಿಸದಿದ್ದರೆ ಅಕ್ಟೋಬರ್​ 15ರಿಂದ ಮತ್ತೆ ಹೋರಾಟ
ವಿಜಯಾನಂದ ಕಾಶಪ್ಪನವರ್
Follow us
shruti hegde
| Updated By: ganapathi bhat

Updated on: Apr 06, 2021 | 5:34 PM

ವಿಜಯಪುರ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗೆ ಆಗ್ರಹ ವಿಚಾರದಲ್ಲಿ ಬೇಡಿಕೆ ಈಡೇರಿಸಲು ಮುಖ್ಯಮಮತ್ರಿ ಬಿ.ಎಸ್​ ಯಡಿಯೂರಪ್ಪ 6 ತಿಂಗಳ ಸಮಯ ಕೇಳಿದ್ದಾರೆ. ಆ ಸಮಯದೊಳಗೆ ಬೇಡಿಕೆ ಈಡೇರಿಸದಿದ್ದರೆ ಅಕ್ಟೋಬರ್​ 15ರಿಂದ ಮತ್ತೆ ಹೋರಾಟ ಕೈಗೊಳ್ಳುತ್ತೇವೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.

ಸಚಿವ ಮುರುಗೇಶ್ ನಿರಾಣಿ ನಾಲಾಯಕ್ ಎಂಬ ಪದ ಬಳಸಿದ ವಿಚಾರದಲ್ಲಿ, ಅವುರು ಯಾವುದರಲ್ಲಿ ಒಳ್ಳೆಯವರಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಅನೇಕ ಹಿರಿಯರು ಮನವಿ ಮಾಡಿಕೊಂಡಿದ್ದರಿಂದ ಅವರಿಗೆ ಗೌರವ ಕೊಟ್ಟು ಹೋರಾಟ ನಿಲ್ಲಿಸಿದ್ದೇವೆ. ನಮ್ಮ ಕೊನೆಯ ಹೋರಾಟ ಮಾಡು ಇಲ್ಲವೆ ಮಡಿಯ ರೀತಿ ಇರುತ್ತದೆ. ಇದನ್ನು ಮುರುಗೇಶ್ ನಿರಾಣಿ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ ಬಿಎಸ್​ವೈ ಸೂಚನೆ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಆಗ್ರಹಿಸಿ ಎಲ್ಲೆಡೆಯಿಂದ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಹೋರಾಟ.. ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ಶುರು ರಾಜ್ಯದಲ್ಲಿ ಪ್ರಮುಖ ಸಮಾಜವಾಗಿರೋ ಲಿಂಗಾಯತ ಪಂಚಮಸಾಲಿ ಸಮಾಜ 2ಎ ಮೀಸಲಾತಿಗಾಗಿ ಹೋರಾಡುತ್ತಿದೆ. ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಕಾಣಿಸಬೇಕು ಅಂತಾ ಪಣತೊಟ್ಟಿರೋ ಕೂಡಲಸಂಗಮದ ಪಂಚಮಸಾಲಿ ಶ್ರೀಗಳು, ಕೂಡಲಸಂಗಮದಿಂದ ಪಾದಯಾತ್ರೆ ಆರಂಭಿಸಿದ್ದರು. ಬೆಂಗಳೂರುವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಕೂಡಲಸಂಗಮದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ, ವಿಜಯಾನಂದ ಕಾಶಪ್ಪನವರ್​ ನೇತೃತ್ವದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್​ರಿಂದ ಹೋರಾಟ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

2Aಗೆ ಸೇರಿಸದಿದ್ದರೆ ಪಾದಯಾತ್ರೆ ನಡೆಸುತ್ತೇವೆ: ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಘೋಷಣೆ