AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. […]

ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK
ಸಾಧು ಶ್ರೀನಾಥ್​
|

Updated on:Nov 19, 2019 | 6:40 PM

Share

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ.. ಅನರ್ಹರು ಮಾತ್ರ ಗೆಲ್ಲಬಾರದು: ಕಾಂಗ್ರೆಸ್ ಮತ್ತು ಜೆಡಿಎಸ್​ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಮಾತಿದೆ. ಆದ್ರೆ ಒಟ್ಟಾಗಿ ಹೋದ್ರೆ ಏನಾಗುತ್ತೆ ಅಂತಾ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಗೊತ್ತಾಗಿದೆ. ಕಾಂಗ್ರೆಸ್​ ನಾಯಕರು JDS​ ಅಭ್ಯರ್ಥಿಗಳ ಸೋಲಿಗೆ ಕೆಲಸ ಮಾಡುತ್ತಾರೆ. ಅದೇ ರೀತಿ ಉಪಚುನಾವಣೆಯಲ್ಲೂ ಮಾಡಲು ಬಯಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಆದ್ರೆ ನಮಗೆ JDS ಗೆಲ್ಲದಿದ್ದರೂ ಪರವಾಗಿಲ್ಲ; ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ! ಅನರ್ಹರು ಮಾತ್ರ ಗೆಲ್ಲಬಾರದು ಎಂದು ತೀರ್ಮಾನಿಸಿದ್ದೇವೆ. ಆ ನಿಟ್ಟಿನಲ್ಲಿ ಅನರ್ಹರ ವಿರುದ್ಧ ಹೋರಾಟ ಮಾಡುತ್ತೇವೆ. JDS ಪ್ರಬಲವಿಲ್ಲದ ಕಡೆ ಪರೋಕ್ಷವಾಗಿ ಕಾಂಗ್ರೆಸ್​ಗೆ ಬೆಂಬಲ ನೀಡುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Published On - 6:29 pm, Tue, 19 November 19

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು