ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. […]

ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK
ಸಾಧು ಶ್ರೀನಾಥ್​

Updated on: Nov 19, 2019 | 6:40 PM

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ.. ಅನರ್ಹರು ಮಾತ್ರ ಗೆಲ್ಲಬಾರದು:
ಕಾಂಗ್ರೆಸ್ ಮತ್ತು ಜೆಡಿಎಸ್​ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಮಾತಿದೆ. ಆದ್ರೆ ಒಟ್ಟಾಗಿ ಹೋದ್ರೆ ಏನಾಗುತ್ತೆ ಅಂತಾ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಗೊತ್ತಾಗಿದೆ. ಕಾಂಗ್ರೆಸ್​ ನಾಯಕರು JDS​ ಅಭ್ಯರ್ಥಿಗಳ ಸೋಲಿಗೆ ಕೆಲಸ ಮಾಡುತ್ತಾರೆ. ಅದೇ ರೀತಿ ಉಪಚುನಾವಣೆಯಲ್ಲೂ ಮಾಡಲು ಬಯಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಆದ್ರೆ ನಮಗೆ JDS ಗೆಲ್ಲದಿದ್ದರೂ ಪರವಾಗಿಲ್ಲ; ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ! ಅನರ್ಹರು ಮಾತ್ರ ಗೆಲ್ಲಬಾರದು ಎಂದು ತೀರ್ಮಾನಿಸಿದ್ದೇವೆ. ಆ ನಿಟ್ಟಿನಲ್ಲಿ ಅನರ್ಹರ ವಿರುದ್ಧ ಹೋರಾಟ ಮಾಡುತ್ತೇವೆ. JDS ಪ್ರಬಲವಿಲ್ಲದ ಕಡೆ ಪರೋಕ್ಷವಾಗಿ ಕಾಂಗ್ರೆಸ್​ಗೆ ಬೆಂಬಲ ನೀಡುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Published On - 6:29 pm, Tue, 19 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us