‘ನಮ್ಮ ಆಸ್ತಿ ಹಾಳು ಮಾಡಿದ್ರೆ ಸುಮ್ಮನೆ ಕೂರಬೇಕಾ, ನಮ್ಮಲ್ಲೂ ರಿವಾಲ್ವರ್ ಇವೆ’

ಬೆಳಗಾವಿ: ನಮ್ಮ ಆಸ್ತಿ ಹಾಳು ಮಾಡಿದ್ರೆ ನಾವು ಸುಮ್ಮನೆ ಕೂರಬೇಕಾ? ನಮ್ಮಲ್ಲಿ ರಿವಾಲ್ವರ್ ಇವೆ, ಅವನ್ನ ಪೂಜೆ ಮಾಡಬೇಕಾ? ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರಶ್ನಿಸಿದ್ದಾರೆ. ನಿನ್ನೆ ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅವರ ಸಾವಿಗೆ ವಿರೋಧ ಪಕ್ಷಗಳೇ ಹೊಣೆ. ಆಸ್ತಿ ಹಾಳು ಮಾಡುವವರನ್ನ ಗುಂಡಿಕ್ಕಿ ಕೊಲ್ಲಿ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಪುನರುಚ್ಚರಿಸಿದರು. ಪೌರತ್ವ ಕಾನೂನು ತಂದಿದ್ದು ಕಾಂಗ್ರೆಸ್ ಅವಧಿಯಲ್ಲಿ, ಆದರೆ ಆಗ ಜಾರಿಯಾಗಲಿಲ್ಲ. ಕಾಂಗ್ರೆಸ್ ಮತ್ತು ಕೆಲವು […]

‘ನಮ್ಮ ಆಸ್ತಿ ಹಾಳು ಮಾಡಿದ್ರೆ ಸುಮ್ಮನೆ ಕೂರಬೇಕಾ, ನಮ್ಮಲ್ಲೂ ರಿವಾಲ್ವರ್ ಇವೆ’
ಸಾಧು ಶ್ರೀನಾಥ್​

Updated on: Dec 20, 2019 | 4:04 PM

ಬೆಳಗಾವಿ: ನಮ್ಮ ಆಸ್ತಿ ಹಾಳು ಮಾಡಿದ್ರೆ ನಾವು ಸುಮ್ಮನೆ ಕೂರಬೇಕಾ? ನಮ್ಮಲ್ಲಿ ರಿವಾಲ್ವರ್ ಇವೆ, ಅವನ್ನ ಪೂಜೆ ಮಾಡಬೇಕಾ? ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರಶ್ನಿಸಿದ್ದಾರೆ. ನಿನ್ನೆ ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅವರ ಸಾವಿಗೆ ವಿರೋಧ ಪಕ್ಷಗಳೇ ಹೊಣೆ. ಆಸ್ತಿ ಹಾಳು ಮಾಡುವವರನ್ನ ಗುಂಡಿಕ್ಕಿ ಕೊಲ್ಲಿ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಪುನರುಚ್ಚರಿಸಿದರು.

ಪೌರತ್ವ ಕಾನೂನು ತಂದಿದ್ದು ಕಾಂಗ್ರೆಸ್ ಅವಧಿಯಲ್ಲಿ, ಆದರೆ ಆಗ ಜಾರಿಯಾಗಲಿಲ್ಲ. ಕಾಂಗ್ರೆಸ್ ಮತ್ತು ಕೆಲವು ಪಕ್ಷಗಳು ಪ್ರಧಾನಿ ಮತ್ತು ಗೃಹಮಂತ್ರಿ ಹೆಸರು ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರವೇ ಸರ್ಕಾರದ ಆಸ್ತಿಪಾಸ್ತಿ ಹಾನಿ ಮಾಡುವ ಕೆಲಸ ಮಾಡಬಾರದು. ಹಾನಿ ಮಾಡಿದರೆ ಆಯಾ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

Published On - 4:04 pm, Fri, 20 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us