AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್‌ಗೆ ಮತಹಾಕಿದ್ರೆ ಗ್ಯಾರಂಟಿ ಯೋಜನೆ ರದ್ದು ಮಾಡುತ್ತಾರೆ: ಡಿಕೆ ಶಿವಕುಮಾರ್​​

ಜನವರಿ ವೇಳೆಗೆ ಯುವ ನಿಧಿ ಯೋಜನೆಯನ್ನೂ ಜಾರಿಗೆ ತರುತ್ತೇವೆ. ಗ್ಯಾರಂಟಿಗಳು ತಲುಪಿದೆಯೋ ಇಲ್ಲವೋ ಎಂದು ಪರಿಶೀಲನೆಗೆ ನ.28ರಂದು ಸಮಿತಿ ರಚನೆ ಮಾಡುತ್ತೇವೆ. ಗ್ಯಾರೆಂಟಿಗಳ ಮೇಲ್ವಿಚಾರಣೆಗೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳು ತಲುಪಿದೆಯೇ, ಇಲ್ಲವೇ ಅಥವಾ ಏನಾದರೂ ಬದಲಾವಣೆ ಮಾಡಬೇಕಾ ಅಂತಾ ಮಾಹಿತಿ ಸಂಗ್ರಹಿಸಬೇಕು ಎಂದು ಡಿಕೆ ಶಿವಕುಮಾರ್​ ಹೇಳಿದರು.

ಬಿಜೆಪಿ, ಜೆಡಿಎಸ್‌ಗೆ ಮತಹಾಕಿದ್ರೆ ಗ್ಯಾರಂಟಿ ಯೋಜನೆ ರದ್ದು ಮಾಡುತ್ತಾರೆ: ಡಿಕೆ ಶಿವಕುಮಾರ್​​
ಡಿಸಿಎಂ ಡಿಕೆ ಶಿವಕುಮಾರ್​
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Nov 19, 2023 | 2:02 PM

Share

ಬೆಂಗಳೂರು ನ.19: ಬಿಜೆಪಿ (BJP), ಜೆಡಿಎಸ್‌ಗೆ (JDS) ಮತಹಾಕಿದರೇ ಗ್ಯಾರಂಟಿ ಯೋಜನೆ ರದ್ದು ಮಾಡುತ್ತಾರೆಂದು ಮನೆ ಮನೆಗೆ ಭೇಟಿ ನೀಡಿ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿಗಳನ್ನು ತೆಗೆಯಲ್ಲ. ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡಲ್ಲ, ಇದು ನಿಶ್ಚಿತ ಎಂದರು.

ಜನವರಿ ವೇಳೆಗೆ ಯುವ ನಿಧಿ ಯೋಜನೆಯನ್ನೂ ಜಾರಿಗೆ ತರುತ್ತೇವೆ. ಗ್ಯಾರಂಟಿಗಳು ತಲುಪಿದೆಯೋ ಇಲ್ಲವೋ ಎಂದು ಪರಿಶೀಲನೆಗೆ ನ.28ರಂದು ಸಮಿತಿ ರಚನೆ ಮಾಡುತ್ತೇವೆ. ಗ್ಯಾರೆಂಟಿಗಳ ಮೇಲ್ವಿಚಾರಣೆಗೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಜವಾಬ್ದಾರಿ ನೀಡಿದ್ದೇವೆ. ಪ್ರತಿ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳು ತಲುಪಿದೆಯೇ, ಇಲ್ಲವೇ ಅಥವಾ ಏನಾದರೂ ಬದಲಾವಣೆ ಮಾಡಬೇಕಾ ಅಂತಾ ಮಾಹಿತಿ ಸಂಗ್ರಹಿಸಬೇಕು. ಬಿಜೆಪಿ, ಜೆಡಿಎಸ್‌ಗೆ ಮತಹಾಕಿದ್ರೆ ಗ್ಯಾರಂಟಿ ಯೋಜನೆ ರದ್ದು ಮಾಡ್ತಾರೆಂದು, ಮನೆಮನೆಗೆ ಭೇಟಿ ವೇಳೆ ಮನವರಿಕೆ ಮಾಡಿಕೊಡಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಒಬ್ಬರೂ ತ್ಯಾಗ ಬಲಿದಾನ ಮಾಡಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ನವೆಂಬರ್ 17ರವರೆಗೆ ಶಕ್ತಿ ಯೋಜನೆಯಡಿ 100 ಕೋಟಿ ಟಿಕೆಟ್ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ದಿವಾಳಿ ಆಗುತ್ತೆ ಅಂತಾ ಬಿಜೆಪಿ ಹೇಳುತ್ತಿತ್ತು. ಈಗ ಬಿಜೆಪಿಯವರೇ ಗ್ಯಾರಂಟಿ ಯೋಜನೆ ನೀಡಲು ಹೊರಟಿದ್ದಾರೆ. ಹಾಸನಾಂಬೆ ಜಾತ್ರೆ ವೇಳೆ 14 ಕೋಟಿ ರೂ. ಆದಾಯ ಬಂದಿದೆ. ಮಹಿಳೆಯರಿಗೆ ಉಚಿತ ಬಸ್​ ನೀಡಿದ್ದರಿಂದ ಹೆಚ್ಚು ಆದಾಯ ಬಂದಿದೆ. ತಾಂತ್ರಿಕ ಕಾರಣದಿಂದ ಶೇ 7 ರಷ್ಟು ಜನರಿಗೆ ಗೃಹಲಕ್ಷ್ಮೀ ಯೋಜನೆ ಹಣ ತಲುಪಿಲ್ಲ ಎಂದು ತಿಳಿಸಿದರು.

ಯಾರು ರಾಜ್ಯಾಧ್ಯಕ್ಷರು ಆದ್ರೆ ಎನು? ಯಾರು ವಿರೋಧ ಪಕ್ಷದ ನಾಯಕರಾದರೇ ಏನು? ನಮಗೂ ಅದಕ್ಕೂ ಸಂಬಂಧವಿಲ್ಲ. ನಮ್ಮ ಜೊತೆ ಬರುವರ ಬಗ್ಗೆ ಮಾತಾಡಿದರೇ ದೊಡ್ಡ ಸುದ್ದಿ ಆಗುತ್ತೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:56 pm, Sun, 19 November 23

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ