AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್: ಸಿಬಿಐ ನಡೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇನೆ ಎಂದ ಯತ್ನಾಳ್

ತನ್ನ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಬಿಜೆಪಿ ಸರ್ಕಾರದ ಆದೇಶಕ್ಕೆ ತಡೆಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ. ಮುಂದೆ ಸಿಬಿಐ ನಡೆಯ ಮೇಲೆ ಡಿಕೆ ಶಿವಕುಮಾರ್ ಅವರ ಭವಿಷ್ಯ ನಿಂತಿದೆ. ಈ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಟ್ವೀಟ್ ಮಾಡಿದ್ದು, ಸಿಬಿಐ ನಡೆಗಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.

ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್: ಸಿಬಿಐ ನಡೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇನೆ ಎಂದ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಡಿಕೆ ಶಿವಕುಮಾರ್
TV9 Web
| Edited By: Rakesh Nayak Manchi|

Updated on: Nov 29, 2023 | 4:24 PM

Share

ಬೆಂಗಳೂರು, ನ.29: ತನ್ನ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಬಿಜೆಪಿ ಸರ್ಕಾರದ ಆದೇಶಕ್ಕೆ ತಡೆಕೋರಿ ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ. ಆ ಮೂಲಕ ಕೋರ್ಟ್ ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಸಿಬಿಐ ಮುಂದಿನ ನಡೆಯ ಮೇಲೆ ನನ್ನ ನಿರ್ಧಾರ ನಿಂತಿದೆ ಎಂದಿದ್ದಾರೆ.

ಗೌರವಾನ್ವಿತ ಹೈಕೋರ್ಟ್ ರಿಟ್ ಮೇಲ್ಮನವಿ ಮತ್ತು ರಿಟ್ ಅರ್ಜಿಯನ್ನು ಹಿಂಪಡೆಯಲು ಮೇಲ್ಮನವಿದಾರರಿಗೆ ಅನುಮತಿ ನೀಡಿದೆ. ಅನುಮತಿ ಹಿಂಪಡೆಯುವ ಸವಾಲನ್ನು ಪೀಠ ವಿಚಾರಣೆ ನಡೆಸಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅನುಮತಿ ವಾಪಸ್ ಪಡೆಯುವ ಸರ್ಕಾರದ ನಿರ್ಧಾರವನ್ನು ಸಿಬಿಐ ಪ್ರಶ್ನಿಸಬೇಕು, ಇಲ್ಲದಿದ್ದರೆ ನನ್ನ ಕಾನೂನು ತಂಡವನ್ನು ಸಂಪರ್ಕಿಸಿ ಮುಂದಿನ ನಡೆಯನ್ನು ನಿರ್ಧರಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್, ಮೇಲ್ಮನವಿ ವಾಪಸ್​ಗೆ ಅನುಮತಿ

ತಪ್ಪೇ ಮಾಡದೆ ಇದ್ದರೇ ತನಿಖೆ ಎದುರಿಸಲು “ಭಯ”ವೇಕೆ?

ತನ್ನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಯತ್ನಾಳ್​ಗೆ ಯಾರ್ಯಾರಿಗೆ ಯಾವ ಯಾವ ರೀತಿ ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಯತ್ನಾಳ್, ಯಾರು, ಯಾರಿಗೆ ಉತ್ತರ ಕೊಡುತ್ತಾರೋ ಕಾಲ ನಿರ್ಣಯ ಮಾಡುತ್ತದೆ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಯತ್ನಾಳ್, ಯಾರು, ಯಾರಿಗೆ ಉತ್ತರ ಕೊಡುತ್ತಾರೋ ಕಾಲ ನಿರ್ಣಯ ಮಾಡುತ್ತದೆ. ನ್ಯಾಯಾಲಯದಲ್ಲಿ ಹಾಕಿದ್ದ ಅರ್ಜಿ ವಾಪಸ್ ಪಡೆಯುವುದು ಒಂದು ವಿಜಯವೆಂದು ಸಂಭ್ರಮಿಸಿದರೆ ಅದನ್ನು ಯಾರು ಪ್ರಶ್ನೆ ಮಾಡುತ್ತಾರೆ? ತಪ್ಪೇ ಮಾಡದೆ ಇದ್ದರೇ ತನಿಖೆ ಎದುರಿಸಲು “ಭಯ”ವೇಕೆ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ