AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಡ್ಯಾಂ ಸುತ್ತಮುತ್ತ ರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು: ಮಾಜಿ ನೀರಾವರಿ ಸಚಿವ ಎಂ.ಬಿ.ಪಾಟೀಲ್

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿಯಾಗಿದ್ದಾರೆ. ಜಿಲ್ಲೆಗೆ ಪ್ರಸ್ತಾಪಿಸಲಾಗಿರುವ ನೀರಾವರಿ ಯೋಜನೆಗಳನ್ನು ಮಂಜೂರು ಮಾಡಿಸಿಕೊಳ್ಳಲು ಬಂದಿದ್ದೆ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಕೆಆರ್​ಎಸ್ ಸುತ್ತಮುತ್ತ ಅಕ್ರಮ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದೂ ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಡ್ಯಾಂ ಸುತ್ತಮುತ್ತ ರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು: ಮಾಜಿ ನೀರಾವರಿ ಸಚಿವ ಎಂ.ಬಿ.ಪಾಟೀಲ್
ಮಾಜಿ ಸಚಿವ ಎಂ.ಬಿ.ಪಾಟೀಲ್ (ಫೈಲ್ ಚಿತ್ರ)
TV9 Web
| Edited By: |

Updated on: Jul 09, 2021 | 1:43 PM

Share

ಬೆಂಗಳೂರು: ಯಾವುದೇ ಡ್ಯಾಂ ಸುತ್ತಮುತ್ತ ರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು ಎಂದು ರಾಜ್ಯದ ಮಾಜಿ ನೀರಾವರಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾಜಿ ಸಚಿವ ಎಂ.ಬಿ. ಪಾಟೀಲ್ ಈ ಹೇಳಿಕೆ ನೀಡಿದ್ದಾರೆ. ಕೆಆರ್ಎಸ್ ಡ್ಯಾಂನಿಂದ ಸುರಕ್ಷಿತ ಅಂತರದಲ್ಲಿ ಗಣಿಗಾರಿಕೆ ನಡೆಯಬೇಕು. ಡ್ಯಾಂ ಸುತ್ತಮುತ್ತ, ನಿಗದಿತ ವ್ಯಾಪ್ತಿಯ ಒಳಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅದರಿಂದ ನಿಜವಾಗಿಯೂ ಅಣೆಕಟ್ಟಿಗೆ ತೊಂದರೆ ಆಗುತ್ತದೆ. ಅದನ್ನು ಸರ್ಕಾರ ತಡೆಗಟ್ಟುವ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ.

ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು ಅಂಬರೀಶ್ ನನ್ನ ಸ್ನೇಹಿತ, ಇಬ್ಬರ ನಡುವೆ ಒಳ್ಳೆಯ ಸ್ನೇಹ ಇತ್ತು. ಸುಮಲತಾ ಅವರ ಬಗ್ಗೆಯೂ ಅಪಾರ ಗೌರವ ಇದೆ. ಅಕ್ರಮ ಗಣಿಗಾರಿಕೆ ವಿಚಾರವಾಗಿ ನನಗೆ ಗೊತ್ತಿಲ್ಲ. ಆದರೆ ಕೆಆರ್ಎಸ್ ಸೇರಿದಂತೆ ರಾಜ್ಯದ ಹಲವು ಡ್ಯಾಂಗಳ ಆಧುನೀಕರಣಕ್ಕೆ ನಾನು‌ ಜಲಸಂಪನ್ಮೂಲ ಸಚಿವನಾಗಿದ್ದಾಗ ಅನುಮತಿ ಸಿಕ್ಕಿತ್ತು. ಉಮಾ ಭಾರತಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವೆಯಾಗಿದ್ದರು. ಆಗ ವಿಶ್ವ ಬ್ಯಾಂಕ್ ನೆರವಿನೊಂದಿಗೆ ಡ್ಯಾಂಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಯಾವುದೇ ಡ್ಯಾಂ ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು; ನಡೆಯುತ್ತಿದ್ದರೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಯೋಜನೆ ಮಂಜೂರಾತಿಗಾಗಿ ಸಿಎಂ ಬಳಿ ಬಂದಿದ್ದೆ: ಎಂ ಬಿ ಪಾಟೀಲ್

ವಿಜಯಪುರ ಜಿಲ್ಲೆಯಲ್ಲಿ 143 ಕೋಟಿ ನೀರಾವರಿ ಯೋಜನೆ ಮುಂದುವರೆದ ಭಾಗ ಹಾಗೇ ಇತ್ತು. ಹತ್ತಾರು ಕೆರೆಗಳಿಗೆ ನೀರು ಕೊಡಲು ಪ್ರಸ್ತಾವನೆ ಆಗಿತ್ತು. ಅದನ್ನು ಆರ್ಥಿಕ ಇಲಾಖೆಯಿಂದ ಅಪ್ರೂವಲ್ ಮಾಡಿಸಿಕೊಡಲು ಕೇಳಿ ಬಂದಿದ್ದೆ. ರಾಜಕೀಯ ವಿಚಾರ ಯಾವುದೇ ಚರ್ಚೆಯಾಗುವ ಪ್ರಮೇಯ ಇಲ್ಲ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

(If there is any illegal mining happening near KRS it should be stopped says former water resource minister MB Patil)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ