AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮೇಲೆ ಎಷ್ಟು ಕೇಸ್ ಹಾಕಿಸುತ್ತೀರಿ ಹಾಕಿ, ನಿಮಗೆ ತಾಕತ್ ಇದ್ರೆ ಪ್ರಕರಣ ದಾಖಲಿಸಿ: ಶಾಸಕ ರೇಣುಕಾಚಾರ್ಯ ಸವಾಲು

ಅಧಿಕಾರಗಳ ಮೇಲೆ ಒತ್ತಡ ಏರಿ ನನ್ನ ಮೇಲೆ ಪ್ರಕರಣ ದಾಖಲಿಸುವ ಕೆಲಸ ಮಾಜಿ ಶಾಸಕರು ಮಾಡುತ್ತಿದ್ದಾರೆ. ನಾನು ಬಂಡೆ ಇದ್ದಂತೆ, ಇಂತಹ ಯಾವುದಕ್ಕೂ ಬಗ್ಗುವುದಿಲ್ಲ, ಜಗ್ಗುವುದಿಲ್ಲ. ನನ್ನ ಮೇಲೆ ಎಷ್ಟು ಕೇಸ್ ಹಾಕಿಸುತ್ತೀರಿ ಹಾಕಿ ಎಂದು ಶಾಸಕ ರೇಣುಕಾಚಾರ್ಯ ಬಹಿರಂಗ ಸವಾಲು ಹಾಕಿದ್ದಾರೆ.

ನನ್ನ ಮೇಲೆ ಎಷ್ಟು ಕೇಸ್ ಹಾಕಿಸುತ್ತೀರಿ ಹಾಕಿ, ನಿಮಗೆ ತಾಕತ್ ಇದ್ರೆ ಪ್ರಕರಣ ದಾಖಲಿಸಿ: ಶಾಸಕ ರೇಣುಕಾಚಾರ್ಯ ಸವಾಲು
ಕೊರೊನಾ ಕಂಟಕ ನಿವಾರಣೆ ನಿಮಿತ್ತ... ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಂಪತಿಯಿಂದ ಧನ್ವಂತರಿ ಹೋಮ
TV9 Web
| Edited By: |

Updated on:Jun 13, 2021 | 6:38 PM

Share

ದಾವಣಗೆರೆ: ಕೊವಿಡ್​​ ಕೇರ್​ ಸೆಂಟರ್​ನಲ್ಲಿ ಹೋಮ ಮಾಡಿದ ವಿಚಾರವಾಗಿ ಮಾಜಿ ಶಾಸಕ ಶಾಂತನಗೌಡಗೆ ಶಾಸಕ ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿ ನನ್ನ ಕುಟುಂಬದ ಒಳಿತಿಗಾಗಿ ನಾನು ಹೋಮ ಮಾಡಿಸಿಲ್ಲ. ಅವಳಿ ತಾಲೂಕಿನ ಒಳಿತಿಗಾಗಿ ಹೋಮ ಮಾಡಿಸಿದ್ದೇನೆ. ಕೊವಿಡ್ ಕೇರ್ ಸೆಂಟರ್​ನಲ್ಲಿ ಮೋಜು ಮಸ್ತಿ ಮಾಡಲು ನಾನು ವಾಸ್ತವ್ಯ ಮಾಡಿಲ್ಲ. ಇದ್ದರೂ ಇಲ್ಲೇ ಮಣ್ಣಾದರೂ ಇಲ್ಲೇ ಎಂದು ಕೊವಿಡ್ ಸೋಂಕಿತರ ಜತೆ ಉಳಿದುಕೊಂಡಿದ್ದೇನೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಅಧಿಕಾರಗಳ ಮೇಲೆ ಒತ್ತಡ ಏರಿ ನನ್ನ ಮೇಲೆ ಪ್ರಕರಣ ದಾಖಲಿಸುವ ಕೆಲಸ ಮಾಜಿ ಶಾಸಕರು ಮಾಡುತ್ತಿದ್ದಾರೆ. ನಾನು ಬಂಡೆ ಇದ್ದಂತೆ, ಇಂತಹ ಯಾವುದಕ್ಕೂ ಬಗ್ಗುವುದಿಲ್ಲ, ಜಗ್ಗುವುದಿಲ್ಲ. ನನ್ನ ಮೇಲೆ ಎಷ್ಟು ಕೇಸ್ ಹಾಕಿಸುತ್ತೀರಿ ಹಾಕಿ ಎಂದು ಶಾಸಕ ರೇಣುಕಾಚಾರ್ಯ ಬಹಿರಂಗ ಸವಾಲು ಹಾಕಿದ್ದಾರೆ.

ಕೊವಿಡ್ ಕೇರ್ ಸೆಂಟರ್​ನಲ್ಲಿ ಹೋಮ‌ ಮಾಡಲು ನಮಗೂ ಅವಕಾಶ ನೀಡಿ ಎಂದು ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಡಿಜಿ ಶಾಂತನಗೌಡ ಅವರು ಜಿಲ್ಲಾಧಿಕಾರಿಗಳಿಗೆ ನಿನ್ನೆ ಆಗ್ರಹಿದ್ದರು. ಅವರ ಆರೋಪವನ್ನು ಸವಾಲಾಗಿ ತೆಗೆದುಕೊಂಡಿರುವ ಶಾಸಕ ರೇಣುಕಾಚಾರ್ಯ ಇಂದು ತಮ್ಮ ವಿರುದ್ಧ ಎಷ್ಟು ಪ್ರಕರಣ ದಾಖಲಿಸುತ್ತೀರೋ ದಾಖಲಿಸಿ ಎಂದು ಸವಾಲು ಒಡ್ಡಿದ್ದಾರೆ.

ರೇಣುಕಾಚಾರ್ಯ ದಂಪತಿಯಿಂದ ಹೋಮ, ಹೋಳಿಗೆ ಊಟ ಮನುಕುಲಕ್ಕೆ ಮಾರಕವಾಗಿ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ಧನ್ವಂತರಿ ಹೋಮ ಹಾಗು ನನ್ನ ಜನತೆಯ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮವನ್ನು ಅರಬಗಟ್ಟೆ ಕೊವಿಡ್ ಕೇರ್ ಸೆಂಟರ್ ನಲ್ಲಿ ನಡೆಸಲಾಗುತ್ತಿದ್ದು ನಂತರ ಮದ್ಯಾಹ್ನ ಎಲ್ಲಾ ಕೊವಿಡ್ ಸೋಂಕಿತ ಬಂಧುಗಳಿಗೆ ಹಾಗು ಸಿಬ್ಬಂದಿಗಳಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದೇನೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದರು.

ಇದನ್ನೂ ಓದಿ: Hassan Airport: ಆದಷ್ಟು ಬೇಗ ದೇವೇಗೌಡರ ಜತೆ ಹಾಸನ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮಾಡುವೆ: ಸಿಎಂ ಯಡಿಯೂರಪ್ಪ 

ಹಳ್ಳಿಗಳಿಂದ ಬೆಂಗಳೂರಿಗೆ ಜನರು; ವಾಪಸ್ಸಾಗುವವರಿಗೆ ಕೊವಿಡ್ ಪರೀಕ್ಷೆ ಇಲ್ಲದ ಕಾರಣ ಹೆಚ್ಚಿದ ಆತಂಕ

(If you have the power you can make case on me says Honnali MLA Renukacharya about home at covid care centre)

Published On - 6:36 pm, Sun, 13 June 21

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್