ಕರೆಂಟ್ ಬಿಲ್ ಪಾವತಿಸುವಾಗ ಈ ತಪ್ಪು ಮಾಡಬೇಡಿ; ಉಚಿತ ವಿದ್ಯುತ್ ಯೋಜನೆಯಿಂದ ವಂಚಿತರಾಗ್ತೀರಿ

ವಿದ್ಯುತ್ ಶುಲ್ಕವನ್ನು ಆನ್​​ಲೈನ್​ನಲ್ಲಿ ಪಾವತಿಸುವವರು ನೀವಾಗಿದ್ದರೆ ನೀವು ಮಾಡುವ ಒಂದು ಸಣ್ಣ ತಪ್ಪು ಉಚಿತ ವಿದ್ಯುತ್ ಯೋಜನೆ ನಿಮಗೆ ದೊರೆಯದಂತೆ ಮಾಡೀತು ಎಂಬ ಎಚ್ಚರವಿರಲಿ. ಹಾಗಾದಾರೆ ಆನ್​​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿಸುವಾಗ ಏನು ಎಚ್ಚರಿಕೆ ವಹಿಸಬೇಕು? ಯಾವ ರೀತಿ ಪಾವತಿಸಬೇಕು? ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಕರೆಂಟ್ ಬಿಲ್ ಪಾವತಿಸುವಾಗ ಈ ತಪ್ಪು ಮಾಡಬೇಡಿ; ಉಚಿತ ವಿದ್ಯುತ್ ಯೋಜನೆಯಿಂದ ವಂಚಿತರಾಗ್ತೀರಿ
ಸಾಂದರ್ಭಿಕ ಚಿತ್ರ
Follow us
|

Updated on:Jun 22, 2023 | 8:54 PM

ಬೆಂಗಳೂರು: ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ಗೆ (Gruha Jyothi Scheme) ಅರ್ಜಿ ಸಲ್ಲಿಕೆ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದೆ. ಒಂದೆಡೆ ಆನ್​ಲೈನ್​​ನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಿದ್ದರಿಂದ ಸರ್ವರ್ ಸಮಸ್ಯೆಯಾಗಿದ್ದರೆ, ಬೆಂಗಳೂರು ವನ್, ನಾಡ ಕಚೇರಿ ಸೇರಿದಂತೆ ವಿದ್ಯುತ್ ನಿಗಮಗಳ ಇತರ ಕಚೇರಿಯಲ್ಲಿ ಅರ್ಜಿ ಸಲ್ಲಿಸುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಇದೀಗ ಸರ್ವರ್ ಸಮಸ್ಯೆ ಬಗೆಹರಿದಿದೆ ಎಂದು ಹೇಳಲಾಗಿದೆ. ಇದೇನೇ ಇದ್ದರೂ ಈ ಹಿಂದಿನ ತಿಂಗಳ ವಿದ್ಯುತ್ ಶುಲ್ಕವನ್ನು (Electricity Bill) ಆನ್​​ಲೈನ್​ನಲ್ಲಿ ಪಾವತಿಸುವವರು ನೀವಾಗಿದ್ದರೆ ನೀವು ಮಾಡುವ ಒಂದು ಸಣ್ಣ ತಪ್ಪು ಉಚಿತ ವಿದ್ಯುತ್ ಯೋಜನೆ ನಿಮಗೆ ದೊರೆಯದಂತೆ ಮಾಡೀತು ಎಂಬ ಎಚ್ಚರವಿರಲಿ. ಹಾಗಾದಾರೆ ಆನ್​​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿಸುವಾಗ ಏನು ಎಚ್ಚರಿಕೆ ವಹಿಸಬೇಕು? ಯಾವ ರೀತಿ ಪಾವತಿಸಬೇಕು? ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ವಿಶೇಷವಾಗಿ, ಬೆಸ್ಕಾಂ ಗ್ರಾಹಕರಿಗೆ ಜೂನ್ ತಿಂಗಳಲ್ಲಿ ಮನೆಗೆ ಬಂದಿರುವ ವಿದ್ಯುತ್ ಬಿಲ್ ಮತ್ತು ಆನ್​​ಲೈನ್​ನಲ್ಲಿ ತೋರಿಸುತ್ತಿರುವ ಬಿಲ್​​ನಲ್ಲಿ ವ್ಯತ್ಯಾಸ ಕಂಡುಬಂದಿದೆ. ಕೆಲವು ಮಂದಿಗೆ ಆನ್​​ಲೈನ್​​ನಲ್ಲಿ ತೀರಾ ಕಡಿಮೆ ಮೊತ್ತದ ಬಿಲ್ ಬಂದಿದೆ. ಹಾಗೆಂದು ಆನ್​ಲೈನ್​ನಲ್ಲಿ ಕಡಿಮೆ ಬಿಲ್ ಬಂದಿದೆ ಎಂದು ಅದನ್ನಷ್ಟೇ ಪಾವತಿಸಿ ಸುಮ್ಮನಾಗಿದ್ದರೆ ನಿಮ್ಮ ಗೃಹಜ್ಯೋತಿ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆ ಇದೆ. ಬೆಸ್ಕಾಂ ಕೂಡ ಆನ್​ಲೈನ್​ ಬಿಲ್​ನಲ್ಲಿರುವ ದೋಷದ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದೆ.

ಆನ್​ಲೈನ್​​ನಲ್ಲಿ ಕಡಿಮೆ ಬಿಲ್ ಬಂದಿದ್ದೇಕೆ?

ಸಾಮಾನ್ಯವಾಗಿ ಮೇ ತಿಂಗಳ ವಿದ್ಯುತ್ ಶುಲ್ಕದ ಬಿಲ್ ಜೂನ್​ನಲ್ಲಿ ಬರುತ್ತದೆ. ಆದರೆ, ಅನೇಕರಿಗೆ ಆನ್​ಲೈನ್ ಆ್ಯಪ್​ನಲ್ಲಿ ಮೇ ತಿಂಗಳ ಬಿಲ್ ಅಪ್​ಡೇಟ್ ಆಗಿಲ್ಲ. ಬದಲಿಗೆ ಕೆಲವೇ ನೂರು ರೂಪಾಯಿ ಬಿಲ್ ಬಂದಿದೆ. ಆದರೆ, ಮನೆಗೆ ರೀಡಿಂಗ್ ಸಿಬ್ಬಂದಿ ಬಂದು ನೀಡಿದ ಬಿಲ್​ನಲ್ಲಿ ಮೊತ್ತ ಹೆಚ್ಚಿದೆ. ಜೂನ್ ತಿಂಗಳಲ್ಲಿ ಗ್ರಾಹಕರಿಗೆ ನೀಡಿರುವ ಬಿಲ್ ಮಾಹಿತಿ ತಂತ್ರಾಂಶದಲ್ಲಿ ಸೇರ್ಪಡೆಗೊಳಿಸುವ ಕಾರ್ಯ ಪ್ರಗತಿಯಲ್ಲಿರುವ ಕಾರಣ ಆನ್​ಲೈನ್​ನಲ್ಲಿ ಋಣಾತ್ಮಕ ಬಿಲ್​ ಬಂದಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗಿದ್ದರೆ ಆನ್​ಲೈನ್​ನಲ್ಲಿ ಕಂಡುಬಂದ ಕಡಿಮೆ ಮೊತ್ತದ ಬಿಲ್ ಯಾವುದು? ಇದು ಏಪ್ರಿಲ್ ತಿಂಗಳ ಬಾಕಿ!

ಹೌದು, ವಿದ್ಯುತ್ ದರ ಹೆಚ್ಚಳ ಏಪ್ರಿಲ್​​ನಿಂದ ಪೂರ್ವಾನ್ವಯವಾಗಿದೆ. ನಾವು ಈ ಹಿಂದೆ ಏಪ್ರಿಲ್​ ತಿಂಗಳ ವಿದ್ಯುತ್ ಬಿಲ್ ಪಾವತಿಸಿದ್ದರೂ ದರ ಹೆಚ್ಚಳದ ಹೆಚ್ಚುವರಿ ಮೊತ್ತ ಪಾವತಿಸಿಲ್ಲ. ಆ ಬಾಕಿ ಮೊತ್ತವೇ ಆನ್​ಲೈನ್​ ಆ್ಯಪ್​​ನಲ್ಲಿ ಕಾಣಿಸಿದೆ. ಅದನ್ನಷ್ಟೇ ಪಾವತಿಸಿ ನಂತರ ಮೇ ತಿಂಗಳ ಬಿಲ್ ಬಾಕಿ ಇರಿಸಿಕೊಂಡಿದ್ದರೆ ನಾವು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡವರಾಗಿರುತ್ತೇವೆ. ಪರಿಣಾಮವಾಗಿ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಪಡೆಯಲು ಅರ್ಹರಾಗುವುದಿಲ್ಲ. ಹೀಗಾಗಿ ನಮ್ಮ ಅರ್ಜಿಯನ್ನು ಸರ್ಕಾರ ಬಾಕಿ ಇಟ್ಟುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಮೇ ತಿಂಗಳ ಬಿಲ್ ಎಂದು ಭಾವಿಸಿ ಏಪ್ರಿಲ್​ನ ಹೆಚ್ಚುವರಿ ಮೊತ್ತವನ್ನಷ್ಟೇ ಪಾವತಿಸಿದವರು ಇನ್ನೊಮ್ಮೆ ಗಮನಹರಿಸುವುದು ಒಳಿತು.

ಇದನ್ನೂ ಓದಿ: BESCOM: ಜೂನ್ ತಿಂಗಳಲ್ಲಿ ಹೆಚ್ಚು ವಿದ್ಯುತ್ ಬಿಲ್ ಬಂದಿದೆಯೇ? ಬೆಸ್ಕಾಂ ಸ್ಪಷ್ಟೀಕರಣ ಇಲ್ಲಿದೆ

ಏಪ್ರಿಲ್​​​ನ ಹೆಚ್ಚುವರಿ ಮೊತ್ತ ಪಾವತಿಸಿದ ನಾಲ್ಕೈದು ದಿನಗಳಲ್ಲಿ ಮೇ ತಿಂಗಳ ವಿದ್ಯುತ್ ಬಿಲ್ ಆನ್​ಲೈನ್ ಆ್ಯಪ್​​ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಬೆಸ್ಕಾಂ ಮೂಲಗಳು ಹೇಳಿವೆ. ಹೀಗಾಗಿ ಮತ್ತೊಮ್ಮೆ ಆ್ಯಪ್ ಪರಿಶೀಲಿಸಿ ಮೇ ತಿಂಗಳ ಬಿಲ್ ಚುಕ್ತಾ ಮಾಡಿಕೊಳ್ಳುವುದು ಒಳಿತು. ಇದರಿಂದ ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯುವುದು ಸಲೀಸಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Wed, 21 June 23

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ