AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ; ರಾಜ್ಯದಲ್ಲಿ ಮೊದಲ ದಿನವೇ ಎರಡು ಕಾಪಿ ಕೇಸ್!

KSEAB ಅಧ್ಯಕ್ಷ ಗೋಪಾಲಕೃಷ್ಣ ಅವರು TNIE ಗೆ ಎರಡು ಕಡೆ ಪರೀಕೆಯಲ್ಲಿ ಕಾಪಿ ಹೊಡೆದ ಘಟನೆ ವರದಿಯಾಗಿವೆ, ಒಂದು ಯಾದಗಿರಿ ಮತ್ತು ಇನ್ನೊಂದು ಬೆಳಗಾವಿಯಲ್ಲಿ ಎಂದು ತಿಳಿಸಿದರು.

Karnataka PUC Exam 2023: ದ್ವಿತೀಯ ಪಿಯುಸಿ ಪರೀಕ್ಷೆ; ರಾಜ್ಯದಲ್ಲಿ ಮೊದಲ ದಿನವೇ ಎರಡು ಕಾಪಿ ಕೇಸ್!
Exam Malpractice
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on:Mar 10, 2023 | 1:20 PM

Share

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ವರ್ಷದ ಪದವಿ ಪೂರ್ವ (PUC Exam) ಬೋರ್ಡ್ ಪರೀಕ್ಷೆ ಗುರುವಾರ (ಮಾರ್ಚ್ 9) ಆರಂಭವಾಗಿದೆ. 5.33 ಲಕ್ಷ ವಿದ್ಯಾರ್ಥಿಗಳಲ್ಲಿ(Students), 5.1 ಲಕ್ಷ ವಿದ್ಯಾರ್ಥಿಗಳು ತಮ್ಮ ಪ್ರಥಮ ಭಾಷಾ ಪರೀಕ್ಷೆಯನ್ನು ಬರೆದಿದ್ದಾರೆ, ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 95.55 ರಷ್ಟು ಹಾಜರಾತಿಯನ್ನು ವರದಿ ಮಾಡಿದೆ. KSEAB ಅಧ್ಯಕ್ಷ ಗೋಪಾಲಕೃಷ್ಣ ಅವರು TNIE ಗೆ ಎರಡು ಕಡೆ ಪರೀಕೆಯಲ್ಲಿ ಕಾಪಿ ಹೊಡೆದ ಘಟನೆ ವರದಿಯಾಗಿವೆ, ಒಂದು ಯಾದಗಿರಿ ಮತ್ತು ಇನ್ನೊಂದು ಬೆಳಗಾವಿಯಲ್ಲಿ ಎಂದು ತಿಳಿಸಿದರು.

ಒಟ್ಟು 23,771 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ.98.99ರಷ್ಟು ವಿದ್ಯಾರ್ಥಿಗಳ ಹಾಜರಾತಿ ದಾಖಲಾಗಿದ್ದರೆ, ಬೀದರ್‌ನಲ್ಲಿ ಅತಿ ಕಡಿಮೆ ಅಂದರೆ ಶೇ.90.49ರಷ್ಟು ವಿದ್ಯಾರ್ಥಿಗಳ ಹಾಜರಾತಿ ದಾಖಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಕ್ರಮವಾಗಿ ಶೇ.95.73 ಮತ್ತು ಶೇ.96.8ರಷ್ಟು ದಾಖಲಾಗಿವೆ.

ರಾಜ್ಯದಲ್ಲಿ ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಮುಖ ಘಟನೆಗಳು ನಡೆದಿಲ್ಲ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಈ ಹಿಂದೆ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯೊಳಗೆ ಬಿಡುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಮಂಡ್ಯಗೆ ಹೋಗಿ ನನ್ನ ಜನರ ಎದುರು ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಶ್

ಆದರೆ, ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಿದ ಕೆಲ ಬಾಲಕಿಯರು ಅಧಿಕಾರಿಗಳು ಮನವೊಲಿಸಿದ ಬಳಿಕ ಅದನ್ನು ತೆಗೆಯಲು ಒಪ್ಪಿದರು. ಮಲ್ಲೇಶ್ವರಂನಲ್ಲಿ ಅಂತಹ ಒಂದು ಪ್ರಕರಣ ವರದಿಯಾಗಿದೆ ಎಂದು ಮೂಲಗಳು ತಿಳಿಸಿವೆ, ಅಲ್ಲಿನ ಪ್ರಾಂಶುಪಾಲರು ಹಿಜಾಬ್ ಅನ್ನು ತೆಗೆದುಹಾಕುವಂತೆ ಕೇಳಿಕೊಂಡ ನಂತರ ವಿದ್ಯಾರ್ಥಿಯೊಬ್ಬರು ಹಿಜಾಬ್ ಅನ್ನು ತೆಗೆಯಲು ಒಪ್ಪಿಕೊಂಡರು.

ಮಂಡಳಿಯು ರಾಜ್ಯಾದ್ಯಂತ 1,109 ಕೇಂದ್ರಗಳನ್ನು ಸ್ಥಾಪಿಸಿತ್ತು. ಪರೀಕ್ಷೆಯನ್ನು ಶಾಂತಿಯುತವಾಗಿ ನಡೆಸಲು ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಾಗೇಶ್ ತಿಳಿಸಿದರು. ಸಚಿವರು ತಮ್ಮ ತಿಪಟೂರು ಕ್ಷೇತ್ರದ ಕೆಲವು ಕೇಂದ್ರಗಳಿಗೆ ಭೇಟಿ ನೀಡಿದರು.

Published On - 12:11 pm, Fri, 10 March 23

Follow Us
Nayana SP
Nayana SP

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು