AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರೀತಿಯ ಕೊರೊನಾ ಟೆಸ್ಟ್ ನಡೆಸಲು ಒಪ್ಪಿಗೆ; ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದ ಸ್ಟಾರ್ಟ್​ಅಪ್​ಗೆ ಅನುಮತಿ

ಸಂಸ್ಥೆಯ ಮುಖ್ಯಸ್ಥರು ಹೇಳುವಂತೆ ಇದು ಪ್ರತಿಕಾಯಗಳನ್ನು ಕಂಡುಹಿಡಿಯಲು ಸಹಕರಿಸುವ ಪರೀಕ್ಷೆಯಾಗಿರುವ ಕಾರಣ ಕೊರೊನಾ ಲಸಿಕೆ ವಿತರಣೆಗೂ ಮುಂಬರುವ ದಿನಗಳಲ್ಲಿ ಸಹಕಾರಿಯಾಗಲಿದೆ. ಈ ಪರೀಕ್ಷೆಯ ಫಲಿತಾಂಶವನ್ನು ಪುಟ್ಟ ಸಾಧನದ ಮೂಲಕವೇ ಕೈಯಲ್ಲಿ ಹಿಡಿದು ತಿಳಿದುಕೊಳ್ಳಬಹುದಾಗಿದ್ದು, ಬಳಸಿ ಎಸೆಯಬಹುದಾದ ಸ್ಟ್ರಿಪ್​ಗಳನ್ನು ಅದು ಹೊಂದಿರಲಿದೆ.

ಹೊಸ ರೀತಿಯ ಕೊರೊನಾ ಟೆಸ್ಟ್ ನಡೆಸಲು ಒಪ್ಪಿಗೆ; ಭಾರತೀಯ ವಿಜ್ಞಾನ ಸಂಸ್ಥೆ ಸಹಯೋಗದ ಸ್ಟಾರ್ಟ್​ಅಪ್​ಗೆ ಅನುಮತಿ
ಕೊವಿಡ್​ 19 ಪರೀಕ್ಷೆ ಮಾಡುವ ಹೊಸ ಮಾದರಿಯ ಉಪಕರಣ
Skanda
|

Updated on: May 20, 2021 | 12:23 PM

Share

ಕೊರೊನಾ ಎರಡನೇ ಅಲೆ ವೈದ್ಯಕೀಯ ಲೋಕಕ್ಕೆ ಹೊಸ ಸವಾಲೊಡ್ಡಿ ನಿಂತಿದೆ. ಕಳೆದ ಬಾರಿ ಕೊರೊನಾ ವೈರಾಣು ಪತ್ತೆಗೆ ಬಳಸುತ್ತಿದ್ದ ವಿಧಾನಗಳಿಗೂ ಈ ವರ್ಷ ವೈರಾಣು ಪತ್ತೆಯಾಗದೇ ಸೋಂಕಿತರನ್ನು ಗುರುತಿಸುವುದೇ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಕೃಪಾಪೋಷಿತ ಸ್ಟಾರ್ಟ್​ಅಪ್​ ಒಂದು ನೂತನ ಮಾದರಿಯ ಕೊರೊನಾ ಪರೀಕ್ಷಾ ವಿಧಾನವನ್ನು ಪರಿಚಯಿಸಿದ್ದು ಅದು ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೇಗೆ ಕೆಲಸ ಮಾಡುತ್ತಿದೆ ಎಂದು ಪತ್ತೆಹಚ್ಚುವುದಕ್ಕೂ ಸಹಾಯ ಮಾಡುವ ನಿರೀಕ್ಷೆ ಇದೆ ಎಂದು ಪರೀಕ್ಷಾ ವಿಧಾನವನ್ನು ಅಭಿವೃದ್ಧಿಪಡಿಸಿದ ತಜ್ಞರು ಹೇಳಿದ್ದಾರೆ.

ಪಥ್​ಶೋಧ್ ಹೆಲ್ತ್​ಕೇರ್ ವತಿಯಿಂದ ಈ ಪರೀಕ್ಷಾ ವಿಧಾನವನ್ನು ಅಭಿವೃದ್ಧಿಪಡಿಸಲಾಗಿದ್ದು, ಭಾರತೀಯ ವಿಜ್ಞಾನ ಸಂಸ್ಥೆ ಹೇಳುವಂತೆ ಇದು ಕೊವಿಡ್​ 19 IgM ಹಾಗೂ IgG ಪ್ರತಿಕಾಯಗಳನ್ನು ಪತ್ತೆಹಚ್ಚಲು ಸಹಕರಿಸಲಿದೆ. ಕೊವಿಡ್ 19 ವೈರಾಣುವಿನ ಗ್ಲೈಕೋಪ್ರೋಟೀನ್​ಗೆ ಸಂಬಂಧಿಸಿದಂತೆ ಇದು ಪ್ರತಿಕಾಯಗಳನ್ನು ಪತ್ತೆ ಹಚ್ಚಲು ಎಲೆಕ್ಟ್ರೋಕೆಮಿಕಲ್ ರೆಡಾಕ್ಸ್ ಚಟುವಟಿಕೆಯ ಆಧಾರದ ಮೇಲೆ ಕಾರ್ಯ ನಿರ್ವಹಿಸಲಿದೆ.

ಸಂಸ್ಥೆಯ ಮುಖ್ಯಸ್ಥರು ಹೇಳುವಂತೆ ಇದು ಪ್ರತಿಕಾಯಗಳನ್ನು ಕಂಡುಹಿಡಿಯಲು ಸಹಕರಿಸುವ ಪರೀಕ್ಷೆಯಾಗಿರುವ ಕಾರಣ ಕೊರೊನಾ ಲಸಿಕೆ ವಿತರಣೆಗೂ ಮುಂಬರುವ ದಿನಗಳಲ್ಲಿ ಸಹಕಾರಿಯಾಗಲಿದೆ. ಈ ಪರೀಕ್ಷೆಯ ಫಲಿತಾಂಶವನ್ನು ಪುಟ್ಟ ಸಾಧನದ ಮೂಲಕವೇ ಕೈಯಲ್ಲಿ ಹಿಡಿದು ತಿಳಿದುಕೊಳ್ಳಬಹುದಾಗಿದ್ದು, ಬಳಸಿ ಎಸೆಯಬಹುದಾದ ಸ್ಟ್ರಿಪ್​ಗಳನ್ನು ಅದು ಹೊಂದಿರಲಿದೆ ಎಂದಿದ್ದಾರೆ. ತಂತ್ರಜ್ಞಾನವನ್ನೇ ಹೆಚ್ಚು ಅವಲಂಬಿಸಿ ಅಭಿವೃದ್ಧಿಪಡಿಸಲಾಗಿರುವ ಈ ಪರೀಕ್ಷಾ ವಿಧಾನವು ಗೊಂದಲ ಮುಕ್ತವಾಗಿರಲಿದೆ. ಅಲ್ಲದೇ ಇದನ್ನು ಸ್ಮಾರ್ಟ್​ಫೋನ್​ಗೆ ಸಂಪರ್ಕಿಸುವ ರೀತಿಯಲ್ಲೂ ಅಭಿವೃದ್ಧಿಪಡಿಸಲಾಗುತ್ತಿದ್ದು, ಅತಿ ಕಡಿಮೆ ಸಮಯದಲ್ಲಿ ಹೆಚ್ಚಿನ ಪರೀಕ್ಷೆ ನಡೆಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ಪರೀಕ್ಷೆಯನ್ನು ಮನೆಯಲ್ಲಿ ನಾವೇ ಮಾಡಿಕೊಳ್ಳಬಹುದು; ಐಸಿಎಂಆರ್​ನಿಂದ ಬಿಡುಗಡೆಯಾಯ್ತು ಹೊಸ ಕಿಟ್ 

ಭಾರತದಲ್ಲಿ ಕೊರೊನಾ 2ನೇ ಅಲೆ ಕೊನೆ ಯಾವಾಗ? ಮೂರನೇ ಅಲೆಯ ಪ್ರಾರಂಭಕ್ಕೆ ಇನ್ನೆಷ್ಟು ತಿಂಗಳು ಬಾಕಿ?-ಇಲ್ಲಿದೆ ನೋಡಿ ತಜ್ಞರು ನೀಡಿದ ವರದಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ