AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿ ಮಂಜೂರು ಮಾಡದ ಹಿನ್ನೆಲೆ ಸರ್ಕಾರಿ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ತಲೆ ಎತ್ತಿದ ಗುಡಿಸಲುಗಳು

ಸರ್ವೆ ನಂ.22 ರಲ್ಲಿರುವ 1 ಎಕರೆ 20 ಗುಂಟೆ ಸರ್ಕಾರಿ ಗೋಮಾಳದ ಪಕ್ಕದಲ್ಲಿ ವಿ.ಆರ್.ವೆಂಚರ್ಸ್ ಲೇಔಟ್ ನಿರ್ಮಾಣ ಮಾಡಿ ಒತ್ತುವರಿಗೆ ಯತ್ನಿಸಿರುವ ಆರೋಪವಿದೆ. ಹೀಗಾಗಿ ಸ್ಥಳೀಯರು ರಾತ್ರೋರಾತ್ರಿ ಗೋಮಾಳದಲ್ಲಿ ಗುಡಿಸಲು ನಿರ್ಮಾಣ ಮಾಡಿದ್ದಾರೆ.

ಭೂಮಿ ಮಂಜೂರು ಮಾಡದ ಹಿನ್ನೆಲೆ ಸರ್ಕಾರಿ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ತಲೆ ಎತ್ತಿದ ಗುಡಿಸಲುಗಳು
ಸರ್ಕಾರಿ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ತಲೆ ಎತ್ತಿದ ಗುಡಿಸಲುಗಳು
Follow us
TV9 Web
| Updated By: ಆಯೇಷಾ ಬಾನು

Updated on: Jun 25, 2021 | 8:57 AM

ಕೋಲಾರ: ರಾತ್ರೋರಾತ್ರಿ ಸರ್ಕಾರಿ ಜಮೀನಿನಲ್ಲಿ ಗುಡಿಸಲು ನಿರ್ಮಾಣ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹನುಮಂತಪುರ ಬಳಿ ನಡೆದಿದೆ. ನಿವೇಶನರಹಿತರಿಗೆ ಭೂಮಿ ಮಂಜೂರು ಮಾಡದ ಹಿನ್ನೆಲೆಯಲ್ಲಿ ಹನುಮಂತಪುರ ಬಳಿಯ ಗೋಮಾಳ ಜಾಗದಲ್ಲಿ ಸ್ಥಳೀಯರು 10ಕ್ಕೂ ಹೆಚ್ಚು ಗುಡಿಸಲು ನಿರ್ಮಾಣ ಮಾಡಿದ್ದಾರೆ.

ಹನುಮಂತಪುರ ಗ್ರಾಮದ ಸರ್ವೆ ನಂ.22 ರಲ್ಲಿರುವ 1 ಎಕರೆ 20 ಗುಂಟೆ ಸರ್ಕಾರಿ ಗೋಮಾಳವಿದ್ದು ಅದರ ಪಕ್ಕದಲ್ಲೇ, ವಿ.ಅರ್.ವೆಂಚರ್ಸ್ ಲೇಔಟ್ ನಿರ್ಮಾಣ ಮಾಡುತ್ತಿದ್ದು ಅವರು ಸರ್ಕಾರಿ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡು ಭೂಮಿ ಲಪಟಾಯಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿರುವ ನಿವೇಶನ ರಹಿತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು, ಈ ಕೂಡಲೇ ನಮಗೆ ನಿವೇಶನ ಮಂಜೂರು ಮಾಡುವಂತೆ ಪಟ್ಟು ಹಿಡಿದಿದ್ದಾರೆ, ಇನ್ನು ವಿ.ಆರ್.ವೆಂಚರ್ಸ್ ಲೇಔಟ್ ಸುಮಾರು120 ಎಕರೆಯಲ್ಲಿ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ. ಈ ವೇಳೆ ಜಮೀನಿನ ಅಕ್ಕ ಪಕ್ಕದಲ್ಲಿರುವ ಸರ್ಕಾರಿ ಗೋಮಾಳ ಜಮೀನನ್ನು ಲಪಟಾಯಿಸಲು ಪ್ಲಾನ್ ಮಾಡಿದ್ದಾರೆ, ಹಾಗಾಗಿ ಹಣವಂತರಿಗೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ನೀಡುವ ಬದಲು, ಹತ್ತಾರು ವರ್ಷಗಳಿಂದ ನಿವೇಶನ ಇಲ್ಲದೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ‌ ಜನರಿಗೆ ನಿವೇಶನ ಹಂಚಿಕೆ ಮಾಡಿ ಮಂಜೂರು ಮಾಡುವಂತೆ ಆಗ್ರಹಿಸಿದ್ದಾರೆ.

ರಾತ್ರೋ ರಾತ್ರಿ ಗೋಮಾಳ ಭೂಮಿಯಲ್ಲಿ ಗುಡಿಸಲುಗಳ ನಿರ್ಮಾಣ ಮಾಡಿ ಅಂಬೇಡ್ಕರ್ ಭಾವಚಿತ್ರವಿಟ್ಟು ಪಟ್ಟು ಹಿಡಿದಿದ್ದಾರೆ. ಹುಣಸನಹಳ್ಳಿಯ ಹತ್ತಾರು ದಲಿತ ಕುಟುಂಬಗಳು, ನಿವೇಶನಕ್ಕಾಗಿ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದು, ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ದಯಾನಂದ್ ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಸರ್ಕಾರಿ ಭೂಮಿಯನ್ನು ಸರ್ಕಾರಕ್ಕೆ ಉಳಿಸಿಕೊಳ್ಳುವ ಸಲುವಾಗಿ ನಿವೇಶನ ರಹಿತ ಪ್ರತಿಭಟನಾ ನಿರತರ ಮನವೊಲಿಸುವ ಪ್ರಯತ್ನ ಮಾಡಲಾಗುತ್ತಿದೆ.

illegal acquisition of land

ಸರ್ಕಾರಿ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ತಲೆ ಎತ್ತಿದ ಗುಡಿಸಲುಗಳು

ಇದನ್ನೂ ಓದಿ: Shabana Azmi: ಆಲ್ಕೋಹಾಲ್​ ಆರ್ಡರ್​ ಮಾಡಿದ ಶಬಾನಾ ಆಜ್ಮಿಗೆ ಮೋಸ; ಪೊಲೀಸರ ಮೊರೆ ಹೋದ ಖ್ಯಾತ ನಟಿ

horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್