AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಯತ್ನಾಳ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಸದ್ಯಕ್ಕೆ ಸಂಪೂರ್ಣ ರಿಲೀಫ್ ದೊರೆಯುವ ಲಕ್ಷಣ ಕಾಣಿಸುತ್ತಿಲ್ಲ. ಪ್ರಕರಣದ ಸಿಬಿಐ ತನಿಖೆ ರದ್ದುಗೊಳಿಸಿದ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಕೆಲವೇ ದಿನಗಳ ಹಿಂದೆ ವಜಾಗೊಳಿಸಿತ್ತು. ಆದರೆ, ಇದೀಗ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಯತ್ನಾಳ್
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಯತ್ನಾಳ್
ಹರೀಶ್ ಜಿ.ಆರ್​.
| Updated By: Ganapathi Sharma|

Updated on: Sep 05, 2024 | 2:20 PM

Share

ನವದೆಹಲಿ, ಸೆಪ್ಟೆಂಬರ್ 5: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಇದೀಗ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿಸುವ ಸಂದೇಶ ರವಾನಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29ರಂದು ಹೈಕೋರ್ಟ್ ತಿರಸ್ಕರಿಸಿತ್ತು.

ವಿಚಾರಣೆಯ ಬಳಿಕ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್‌ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಯತ್ನಾಳ್, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಈಗಾಗಲೇ ಕೇವಿಯಟ್ ಸಲ್ಲಿಸಿದ್ದಾರೆ.

ಯತ್ನಾಳ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಾಲಿನ್ಯ ನಿಯಂತ್ರಣ ಮಂಡಳಿ

ಮತ್ತೊಂದೆಡೆ, ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅವಕಾಶ ನೀಡಿರುವುದರ ವಿರುದ್ಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಪಿಸಿಬಿ) ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಕಾರ್ಖಾನೆ ತೆರೆಯಲು ಅನುಮತಿ ನೀಡದಂತೆ ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಕಾರ್ಖಾನೆ ನಿಯಮಗಳ ಉಲ್ಲಂಘಿಸಿದೆ ಎಂದು ಮೇಲ್ಮನವಿ ಅರ್ಜಿಯಲ್ಲಿ ಪಿಸಿಬಿ ಆರೋಪಿಸಿದೆ.

ಇದನ್ನೂ ಓದಿ: ಅಕ್ರಮ ಅಸ್ತಿ ಕೇಸ್: ಸಿಬಿಐ, ಯತ್ನಾಳ್ ಅರ್ಜಿ ವಜಾ, ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನಲ್ಲಿರುವ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅನುಮತಿ ನೀಡಿತ್ತು. ಆದಾಗ್ಯೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿರಲಿಲ್ಲ. ಇದರ ವಿರುದ್ಧ ಇತ್ತೀಚೆಗಷ್ಟೇ ಯತ್ನಾಳ್ ಪ್ರತಿಭಟನೆಯನ್ನೂ ನಡೆಸಿದ್ದರು. ಪ್ರತಿಪಕ್ಷ ನಾಯಕ ಆರ್ ಅಶೋಕ್ ಸೇರಿದಂತೆ ಬಿಜೆಪಿಯ ಇತರ ನಾಯಕರು ಯತ್ನಾಳ್ ಬೆಂಬಲಕ್ಕೆ ನಿಂತಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈ ವಿಚಾರವಾಗಿ ಯತ್ನಾಳ್ ಜತೆ ಮಾತುಕತೆ ನಡೆಸಿ, ಪ್ರತಿಭಟನೆ ಕೈಬಿಡಲು ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?
ಹುಲಿ ದಾಳಿ ಮಾಡದಂತೆ ಮಾನವ ಮುಖವಾಡದ ಮಾಸ್ಕ್: ಹೇಗೆ ವರ್ಕ್ ಆಗುತ್ತೆ?