AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲ್ ಮೇಲೆ ಜೈಲಿನಿಂದ ಬಿಡುಗಡೆಗೊಂಡ ಕೈ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್

ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಆಚೆ ಬಂದಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ ಕೊಟ್ಟಿದೆ. ದಾಳಿ ಮಾಡಿದ್ದ ವೇಳೆ ಕೋಟ್ಯಂತರ ರೂಪಾಯಿ, ಚಿನ್ನ, ಬೆಳ್ಳಿ ಸೇರಿದಂತೆ ವಿರೇಂದ್ರ ಪಪ್ಪಿಯ ಖಜಾನೆಯನ್ನೇ ಇಡಿ ವಶಕ್ಕೆ ಪಡೆದಿತ್ತು. ವಶಕ್ಕೆ ಪಡೆದ ಆಸ್ತಿ ಮೌಲ್ಯ 150 ಕೋಟಿ ರೂಪಾಯಿ ದಾಟಿದೆ. ಇದರ ಬೆನ್ನಲ್ಲೇ ಇದೀಗ ಪಪ್ಪಿ ಆಸ್ತಿ ಜಪ್ತಿ ಮಾಡಿದೆ. ಎಷ್ಟು? ಏನೇನು ಎನ್ನುವ ವಿವರ ಇಲ್ಲಿದೆ.

ಬೇಲ್ ಮೇಲೆ ಜೈಲಿನಿಂದ ಬಿಡುಗಡೆಗೊಂಡ ಕೈ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್
ಶಾಸಕ ಕೆ.ಸಿ.ವೀರೇಂದ್ರ
ರಮೇಶ್ ಬಿ. ಜವಳಗೇರಾ
|

Updated on: Jan 29, 2026 | 9:24 PM

Share

ಬೆಂಗಳೂರು/ಚಿತ್ರದುರ್ಗ, (ಜನವರಿ 29): ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ (Illegal Betting Case) ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ  ಕೆ.ಸಿ. ವಿರೇಂದ್ರ ಪಪ್ಪಿಗೆ (KC Veerendra Puppy )ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ಇದೀಗ ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರೆ  ಒಟ್ಟು 177.3 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ. ಈ ಮೂಲಜ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿದ್ದ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ ಕೊಟ್ಟಿದೆ.

ಆನ್​ಲೈನ್​ ಬೆಟ್ಟಿಂಗ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ವಿರೇಂದ್ರ ಪಪ್ಪಿ ಮನೆಗಳ ಮೇಲೆ ದಾಳಿ ಮಾಡಿತ್ತು. ಆಗ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿತ್ತು. ಇದೀಗ ಮತ್ತೆ ಸಿ ಅಕ್ರಮ ಹಣದಿಂದ ಸಂಪಾದನೆ ಮಾಡಿದ ಕೃಷಿ ಜಮೀನು, ನಿವೇಶನ ಸೇರಿ 177.3 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಇದನ್ನೂ ಓದಿ: ಚಿತ್ರದುರ್ಗ ಕೈ ಶಾಸಕ ವಿರೇಂದ್ರ ಪಪ್ಪಿ ಖಜಾನೆಯನ್ನೇ ತೆರೆದಿಟ್ಟ ಇಡಿ: ಲಕ್ಸುರಿ ಕಾರು, ಚಿನ್ನಾಭರಣ ಪತ್ತೆ

ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿದ್ದ ಆನ್ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ತನಿಖೆ ವೇಳೆ ಹಗರಣದಲ್ಲಿ ಕೆ.ಸಿ.ವೀರೇಂದ್ರ ಮತ್ತು ಸಹಚರರು ಮಾಸ್ಟರ್ ಮೈಂಡ್ ಎನ್ನುವುದು ಗೊತ್ತಾಗಿದೆ. ಅಲ್ಲದೇ ನೂರಾರು ಮ್ಯೂಲ್ ಅಕೌಂಟ್ ಬಳಸಿ ಅಕ್ರಮ ಹಣ ವರ್ಗಾವಣೆ ಪತ್ತೆಯಾಗಿದೆ. ತನಿಖೆ ವೇಳೆ ಸಿಕ್ಕ ಈ ಎಲ್ಲಾ ಸಾಕ್ಷ್ಯಗಳ ಆಧಾರದ ಮೇಲೆ ಕೆ ಸಿ ವೀರೇಂದ್ರ ಆಸ್ತಿ ಜಪ್ತಿ ಮಾಡಲಾಗಿದೆ.

ಈ ಹಿಂದೆ ಪ್ರಕರಣ ಸಂಬಂಧ 60ಕ್ಕೂ ಹೆಚ್ಚು ಸ್ಥಳದಲ್ಲಿ ದಾಳಿ ನಡೆಸಿದ್ದ ಇಡಿ, ಚಿನ್ನ,ನಗದು,ಬೆಳ್ಳಿ, ವಾಹನಗಳನ್ನ ವಶಪಡಿಸಿಕೊಂಡಿತ್ತು. ಒಟ್ಟಾರೆ ಪ್ರಕರಣದಲ್ಲಿ ಇಲ್ಲಿವರೆಗೂ 320 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಇನ್ನು ಹಗರಣದಲ್ಲಿ 2,300 ಕೋಟಿ ರೂಪಾಯಿ ಅಧಿಕ ಅಕ್ರಮ ನಡೆದಿರುವುದು ಪತ್ತೆಯಾಗಿದ್ದು, ಈ ಸಂಬಂಧ ಇಡಿ ತನಿಖೆ ಮುಂದುವರೆಸಿದೆ.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!