AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

71 ಯೂನಿಟ್​ಗೆ ಮೂರು ಪಟ್ಟು ದಂಡ ವಿಧಿಸಿದ ಬೆಸ್ಕಾಂ: ಹೆಚ್​ಡಿ ಕುಮಾರಸ್ವಾಮಿ ಆರೋಪ

ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ ನಂತರ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದನ್ನು ಬೊಟ್ಟು ಮಾಡಿದರು.

71 ಯೂನಿಟ್​ಗೆ ಮೂರು ಪಟ್ಟು ದಂಡ ವಿಧಿಸಿದ ಬೆಸ್ಕಾಂ: ಹೆಚ್​ಡಿ ಕುಮಾರಸ್ವಾಮಿ ಆರೋಪ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: Rakesh Nayak Manchi|

Updated on: Nov 17, 2023 | 12:01 PM

Share

ಬೆಂಗಳೂರು, ನ.17: ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ (BESCOM) ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ ನಂತರ ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy), 71 ಯೂನಿಟ್​ಗೆ ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದಾಗಿ ಆರೋಪಿಸಿದರು.

ಬೆಸ್ಕಾಂ ಇಲಾಖೆ ಅಧಿಕಾರಿಗಳು 2,526 ರೂ. ಬಿಲ್ ಬದಲು 68,526 ರೂಪಾಯಿ ದಂಡದ ಬಿಲ್ ನೀಡಿದ್ದಾರೆ. ಕರೆಂಟ್ ಬಿಲ್ ಕಟ್ಟಲು ನಾನು ಸಿದ್ಧನಿದ್ದೇನೆ. ಲೈಟಿಂಗ್ ಹಾಕಿದ್ದಕ್ಕೆ ಹೆಚ್ಚು ಕರೆಂಟ್ ತೆಗೆದುಕೊಳ್ಳುವುದಿಲ್ಲ. ಅದು 1 ಕಿಲೋ ವ್ಯಾಟ್​ಗಿಂತ ಕಡಿಮೆ ಇರುತ್ತದೆ. ಆದರೆ ಇವರು 2.5 ಕಿಲೋ ವ್ಯಾಟ್​ಗೆ ಲೆಕ್ಕ ತೆಗೆದುಕೊಂಡಿದ್ದಾರೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಆದರೆ ಅವರು 71 ಯೂನಿಟ್​ಗೆ ಮೂರು ಪಟ್ಟು ದಂಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಸೂಟ್​ಕೇಸ್​ಗಳಲ್ಲಿ ಹಣ ಒಯ್ಯತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್​ಗಳನ್ನು ಯಾಕೆ ಅಂಟಿಸಬಾದು? ಹೆಚ್ ಡಿ ಕುಮಾರಸ್ವಾಮಿ

ಕರೆಂಟ್​ ಬಿಲ್​ ಬಗ್ಗೆ ಪುನರ್​ ಪರಿಶೀಲನೆ ಮಾಡಲು ಹೇಳಿದ್ದೇನೆ ಎಂದು ತಿಳಿಸಿದ ಕುಮಾರಸ್ವಾಮಿ, ನೀವು (ಬೆಸ್ಕಾಂ) ನೀಡಿದ ಬಿಲ್ ಕೂಡ ಸರಿ ಇಲ್ಲ ಅಂತ ಪ್ರತಿಭಟನೆ ಮಾಡಿದ್ದೇನೆ. ಬೆಸ್ಕಾಂ ಇಲಾಖೆ ಪ್ರಕಾರ 2,526 ರೂಪಾಯಿ ಬಿಲ್​​ ನೀಡಬೇಕಿತ್ತು. ಆದರೆ ಬೆಸ್ಕಾಂ ಇಲಾಖೆ 68,526 ರೂ. ಕರೆಂಟ್​ ಬಿಲ್ ನೀಡಿದೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ