AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

71 ಯೂನಿಟ್​ಗೆ ಮೂರು ಪಟ್ಟು ದಂಡ ವಿಧಿಸಿದ ಬೆಸ್ಕಾಂ: ಹೆಚ್​ಡಿ ಕುಮಾರಸ್ವಾಮಿ ಆರೋಪ

ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ ನಂತರ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದನ್ನು ಬೊಟ್ಟು ಮಾಡಿದರು.

71 ಯೂನಿಟ್​ಗೆ ಮೂರು ಪಟ್ಟು ದಂಡ ವಿಧಿಸಿದ ಬೆಸ್ಕಾಂ: ಹೆಚ್​ಡಿ ಕುಮಾರಸ್ವಾಮಿ ಆರೋಪ
ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: Rakesh Nayak Manchi

Updated on: Nov 17, 2023 | 12:01 PM

ಬೆಂಗಳೂರು, ನ.17: ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ (BESCOM) ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ ನಂತರ ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy), 71 ಯೂನಿಟ್​ಗೆ ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದಾಗಿ ಆರೋಪಿಸಿದರು.

ಬೆಸ್ಕಾಂ ಇಲಾಖೆ ಅಧಿಕಾರಿಗಳು 2,526 ರೂ. ಬಿಲ್ ಬದಲು 68,526 ರೂಪಾಯಿ ದಂಡದ ಬಿಲ್ ನೀಡಿದ್ದಾರೆ. ಕರೆಂಟ್ ಬಿಲ್ ಕಟ್ಟಲು ನಾನು ಸಿದ್ಧನಿದ್ದೇನೆ. ಲೈಟಿಂಗ್ ಹಾಕಿದ್ದಕ್ಕೆ ಹೆಚ್ಚು ಕರೆಂಟ್ ತೆಗೆದುಕೊಳ್ಳುವುದಿಲ್ಲ. ಅದು 1 ಕಿಲೋ ವ್ಯಾಟ್​ಗಿಂತ ಕಡಿಮೆ ಇರುತ್ತದೆ. ಆದರೆ ಇವರು 2.5 ಕಿಲೋ ವ್ಯಾಟ್​ಗೆ ಲೆಕ್ಕ ತೆಗೆದುಕೊಂಡಿದ್ದಾರೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಆದರೆ ಅವರು 71 ಯೂನಿಟ್​ಗೆ ಮೂರು ಪಟ್ಟು ದಂಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಸೂಟ್​ಕೇಸ್​ಗಳಲ್ಲಿ ಹಣ ಒಯ್ಯತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್​ಗಳನ್ನು ಯಾಕೆ ಅಂಟಿಸಬಾದು? ಹೆಚ್ ಡಿ ಕುಮಾರಸ್ವಾಮಿ

ಕರೆಂಟ್​ ಬಿಲ್​ ಬಗ್ಗೆ ಪುನರ್​ ಪರಿಶೀಲನೆ ಮಾಡಲು ಹೇಳಿದ್ದೇನೆ ಎಂದು ತಿಳಿಸಿದ ಕುಮಾರಸ್ವಾಮಿ, ನೀವು (ಬೆಸ್ಕಾಂ) ನೀಡಿದ ಬಿಲ್ ಕೂಡ ಸರಿ ಇಲ್ಲ ಅಂತ ಪ್ರತಿಭಟನೆ ಮಾಡಿದ್ದೇನೆ. ಬೆಸ್ಕಾಂ ಇಲಾಖೆ ಪ್ರಕಾರ 2,526 ರೂಪಾಯಿ ಬಿಲ್​​ ನೀಡಬೇಕಿತ್ತು. ಆದರೆ ಬೆಸ್ಕಾಂ ಇಲಾಖೆ 68,526 ರೂ. ಕರೆಂಟ್​ ಬಿಲ್ ನೀಡಿದೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು