AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

71 ಯೂನಿಟ್​ಗೆ ಮೂರು ಪಟ್ಟು ದಂಡ ವಿಧಿಸಿದ ಬೆಸ್ಕಾಂ: ಹೆಚ್​ಡಿ ಕುಮಾರಸ್ವಾಮಿ ಆರೋಪ

ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ ನಂತರ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದನ್ನು ಬೊಟ್ಟು ಮಾಡಿದರು.

71 ಯೂನಿಟ್​ಗೆ ಮೂರು ಪಟ್ಟು ದಂಡ ವಿಧಿಸಿದ ಬೆಸ್ಕಾಂ: ಹೆಚ್​ಡಿ ಕುಮಾರಸ್ವಾಮಿ ಆರೋಪ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on: Nov 17, 2023 | 12:01 PM

Share

ಬೆಂಗಳೂರು, ನ.17: ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ (BESCOM) ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ ನಂತರ ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy), 71 ಯೂನಿಟ್​ಗೆ ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದಾಗಿ ಆರೋಪಿಸಿದರು.

ಬೆಸ್ಕಾಂ ಇಲಾಖೆ ಅಧಿಕಾರಿಗಳು 2,526 ರೂ. ಬಿಲ್ ಬದಲು 68,526 ರೂಪಾಯಿ ದಂಡದ ಬಿಲ್ ನೀಡಿದ್ದಾರೆ. ಕರೆಂಟ್ ಬಿಲ್ ಕಟ್ಟಲು ನಾನು ಸಿದ್ಧನಿದ್ದೇನೆ. ಲೈಟಿಂಗ್ ಹಾಕಿದ್ದಕ್ಕೆ ಹೆಚ್ಚು ಕರೆಂಟ್ ತೆಗೆದುಕೊಳ್ಳುವುದಿಲ್ಲ. ಅದು 1 ಕಿಲೋ ವ್ಯಾಟ್​ಗಿಂತ ಕಡಿಮೆ ಇರುತ್ತದೆ. ಆದರೆ ಇವರು 2.5 ಕಿಲೋ ವ್ಯಾಟ್​ಗೆ ಲೆಕ್ಕ ತೆಗೆದುಕೊಂಡಿದ್ದಾರೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಆದರೆ ಅವರು 71 ಯೂನಿಟ್​ಗೆ ಮೂರು ಪಟ್ಟು ದಂಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಸೂಟ್​ಕೇಸ್​ಗಳಲ್ಲಿ ಹಣ ಒಯ್ಯತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್​ಗಳನ್ನು ಯಾಕೆ ಅಂಟಿಸಬಾದು? ಹೆಚ್ ಡಿ ಕುಮಾರಸ್ವಾಮಿ

ಕರೆಂಟ್​ ಬಿಲ್​ ಬಗ್ಗೆ ಪುನರ್​ ಪರಿಶೀಲನೆ ಮಾಡಲು ಹೇಳಿದ್ದೇನೆ ಎಂದು ತಿಳಿಸಿದ ಕುಮಾರಸ್ವಾಮಿ, ನೀವು (ಬೆಸ್ಕಾಂ) ನೀಡಿದ ಬಿಲ್ ಕೂಡ ಸರಿ ಇಲ್ಲ ಅಂತ ಪ್ರತಿಭಟನೆ ಮಾಡಿದ್ದೇನೆ. ಬೆಸ್ಕಾಂ ಇಲಾಖೆ ಪ್ರಕಾರ 2,526 ರೂಪಾಯಿ ಬಿಲ್​​ ನೀಡಬೇಕಿತ್ತು. ಆದರೆ ಬೆಸ್ಕಾಂ ಇಲಾಖೆ 68,526 ರೂ. ಕರೆಂಟ್​ ಬಿಲ್ ನೀಡಿದೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?