AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ

ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ.

ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ
ಗೃಹಸಚಿವ ಡಾ.ಜಿ.ಪರಮೇಶ್ವರ್
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi|

Updated on: Nov 07, 2023 | 2:30 PM

Share

ಬೆಂಗಳೂರು, ನ.7: ಕಲಬುರಗಿಯಲ್ಲಿ ನಡೆದ ಕೆಇಎ (KEA) ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwara), ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ. ಅಲ್ಲದೆ, ಪೊಲೀಸರ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್.ಡಿ.ಪಾಟೀಲ್ ಮೇಲೆ ಸಾಕಷ್ಟು ಕೇಸ್‌ಗಳಿವೆ. ಅಗತ್ಯವಿದ್ದರೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ. ಮರು ಪರೀಕ್ಷೆ ನಡೆಸುವ ಕುರಿತು ಕೆಇಎ ತೀರ್ಮಾನ ಮಾಡುತ್ತದೆ. ನಮಗೆ ದೂರು ಕೊಟ್ಟ ಹಿನ್ನೆಲೆ ತನಿಖೆ ಮಾಡುತ್ತಿದ್ದೇವೆ. ಕಿಂಗ್‌ಪಿನ್‌ಗಳಿಗೆ ಭಯ ಇಲ್ಲದಿರುವುದಕ್ಕೆ ಈ ರೀತಿ ಮಾಡಿದ್ದಾರೆ. ಇನ್ನು ಮುಂದೆ ಹೀಗೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಬಳಿಕ ಪರಮೇಶ್ವರ್​ ಸಿಎಂ: ಕಾಂಗ್ರೆಸ್​ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ ಸಚಿವ ರಾಜಣ್ಣ ಹೇಳಿಕೆ

ತನ್ನ ಮನೆಗೆ ಪೊಲೀಸರು ಎಂಟ್ರಿ ಕೊಡುತ್ತಿದ್ದಂತೆ ಕಿಂಗ್​ಪಿನ್ ಆರ್​ಡಿ ಪಾಟೀಲ್ ಕಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಈ ರೀತಿ ಮಾಡುವುದು ಈತ ಮೊದಲೇನಲ್ಲ. ಪೊಲೀಸರು ಬಂದಾಗ ಕಂಪೌಂಡ್ ಹಾರೋ ಚಟ ಮಾಡಿಕೊಂಡಿರೋ ಆರ್ ಡಿ ಪಾಟೀಲ್, ಈ ಹಿಂದೆ ಪಿಎಸ್​ಐ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ಪೊಲೀಸರು ಬಂಧನ ಮಾಡಲು ಹೋದಾಗ ಇದೇ ರೀತಿ ಕಂಪೌಂಡ್ ಹಾರಿ ತಪ್ಪಿಸಿಕೊಂಡು ಹೋಗಿದ್ದ.

ಸಿಐಡಿ ಅಧಿಕಾರಿಗಳನ್ನು ತಳ್ಳಿ ಹಿಂಬಾಗಿಲಿನಿಂದ ತಪ್ಪಿಸಿಕೊಂಡು ಹೋಗಿದ್ದ ಆರ್​ಡಿ ಪಾಟೀಲ್, ಪೊಲೀಸರ ಜೊತೆ ಚೆಲ್ಲಾಟವಾಡುವ ಚಾಳಿ ಬೆಳಸಿಕೊಂಡಿದ್ದಾನೆ. ಪೊಲೀಸರ ಕೈಗೆ ಸಿಕ್ಕರೆ ಕಂಬಿ ಹಿಂದೆ ಹೋಗಬೇಕಾಗುತ್ತದೆ. ಸಾಕ್ಷಿಗಳು ನಾಶವಾಗಲಿ‌ ಅನ್ನೋ ಉದ್ದೇಶದಿಂದ ಈ ರೀತಿ ಕಳ್ಳಾಟವಾಡುತ್ತಿದ್ದಾನೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!