AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ

ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ.

ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ
ಗೃಹಸಚಿವ ಡಾ.ಜಿ.ಪರಮೇಶ್ವರ್
ಪ್ರಸನ್ನ ಗಾಂವ್ಕರ್​
| Edited By: |

Updated on: Nov 07, 2023 | 2:30 PM

Share

ಬೆಂಗಳೂರು, ನ.7: ಕಲಬುರಗಿಯಲ್ಲಿ ನಡೆದ ಕೆಇಎ (KEA) ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwara), ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ. ಅಲ್ಲದೆ, ಪೊಲೀಸರ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್.ಡಿ.ಪಾಟೀಲ್ ಮೇಲೆ ಸಾಕಷ್ಟು ಕೇಸ್‌ಗಳಿವೆ. ಅಗತ್ಯವಿದ್ದರೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ. ಮರು ಪರೀಕ್ಷೆ ನಡೆಸುವ ಕುರಿತು ಕೆಇಎ ತೀರ್ಮಾನ ಮಾಡುತ್ತದೆ. ನಮಗೆ ದೂರು ಕೊಟ್ಟ ಹಿನ್ನೆಲೆ ತನಿಖೆ ಮಾಡುತ್ತಿದ್ದೇವೆ. ಕಿಂಗ್‌ಪಿನ್‌ಗಳಿಗೆ ಭಯ ಇಲ್ಲದಿರುವುದಕ್ಕೆ ಈ ರೀತಿ ಮಾಡಿದ್ದಾರೆ. ಇನ್ನು ಮುಂದೆ ಹೀಗೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಬಳಿಕ ಪರಮೇಶ್ವರ್​ ಸಿಎಂ: ಕಾಂಗ್ರೆಸ್​ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ ಸಚಿವ ರಾಜಣ್ಣ ಹೇಳಿಕೆ

ತನ್ನ ಮನೆಗೆ ಪೊಲೀಸರು ಎಂಟ್ರಿ ಕೊಡುತ್ತಿದ್ದಂತೆ ಕಿಂಗ್​ಪಿನ್ ಆರ್​ಡಿ ಪಾಟೀಲ್ ಕಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಈ ರೀತಿ ಮಾಡುವುದು ಈತ ಮೊದಲೇನಲ್ಲ. ಪೊಲೀಸರು ಬಂದಾಗ ಕಂಪೌಂಡ್ ಹಾರೋ ಚಟ ಮಾಡಿಕೊಂಡಿರೋ ಆರ್ ಡಿ ಪಾಟೀಲ್, ಈ ಹಿಂದೆ ಪಿಎಸ್​ಐ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ಪೊಲೀಸರು ಬಂಧನ ಮಾಡಲು ಹೋದಾಗ ಇದೇ ರೀತಿ ಕಂಪೌಂಡ್ ಹಾರಿ ತಪ್ಪಿಸಿಕೊಂಡು ಹೋಗಿದ್ದ.

ಸಿಐಡಿ ಅಧಿಕಾರಿಗಳನ್ನು ತಳ್ಳಿ ಹಿಂಬಾಗಿಲಿನಿಂದ ತಪ್ಪಿಸಿಕೊಂಡು ಹೋಗಿದ್ದ ಆರ್​ಡಿ ಪಾಟೀಲ್, ಪೊಲೀಸರ ಜೊತೆ ಚೆಲ್ಲಾಟವಾಡುವ ಚಾಳಿ ಬೆಳಸಿಕೊಂಡಿದ್ದಾನೆ. ಪೊಲೀಸರ ಕೈಗೆ ಸಿಕ್ಕರೆ ಕಂಬಿ ಹಿಂದೆ ಹೋಗಬೇಕಾಗುತ್ತದೆ. ಸಾಕ್ಷಿಗಳು ನಾಶವಾಗಲಿ‌ ಅನ್ನೋ ಉದ್ದೇಶದಿಂದ ಈ ರೀತಿ ಕಳ್ಳಾಟವಾಡುತ್ತಿದ್ದಾನೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ