Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ

ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ.

ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ
ಗೃಹಸಚಿವ ಡಾ.ಜಿ.ಪರಮೇಶ್ವರ್
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Nov 07, 2023 | 2:30 PM

ಬೆಂಗಳೂರು, ನ.7: ಕಲಬುರಗಿಯಲ್ಲಿ ನಡೆದ ಕೆಇಎ (KEA) ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwara), ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ. ಅಲ್ಲದೆ, ಪೊಲೀಸರ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್.ಡಿ.ಪಾಟೀಲ್ ಮೇಲೆ ಸಾಕಷ್ಟು ಕೇಸ್‌ಗಳಿವೆ. ಅಗತ್ಯವಿದ್ದರೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ. ಮರು ಪರೀಕ್ಷೆ ನಡೆಸುವ ಕುರಿತು ಕೆಇಎ ತೀರ್ಮಾನ ಮಾಡುತ್ತದೆ. ನಮಗೆ ದೂರು ಕೊಟ್ಟ ಹಿನ್ನೆಲೆ ತನಿಖೆ ಮಾಡುತ್ತಿದ್ದೇವೆ. ಕಿಂಗ್‌ಪಿನ್‌ಗಳಿಗೆ ಭಯ ಇಲ್ಲದಿರುವುದಕ್ಕೆ ಈ ರೀತಿ ಮಾಡಿದ್ದಾರೆ. ಇನ್ನು ಮುಂದೆ ಹೀಗೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಬಳಿಕ ಪರಮೇಶ್ವರ್​ ಸಿಎಂ: ಕಾಂಗ್ರೆಸ್​ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ ಸಚಿವ ರಾಜಣ್ಣ ಹೇಳಿಕೆ

ತನ್ನ ಮನೆಗೆ ಪೊಲೀಸರು ಎಂಟ್ರಿ ಕೊಡುತ್ತಿದ್ದಂತೆ ಕಿಂಗ್​ಪಿನ್ ಆರ್​ಡಿ ಪಾಟೀಲ್ ಕಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಈ ರೀತಿ ಮಾಡುವುದು ಈತ ಮೊದಲೇನಲ್ಲ. ಪೊಲೀಸರು ಬಂದಾಗ ಕಂಪೌಂಡ್ ಹಾರೋ ಚಟ ಮಾಡಿಕೊಂಡಿರೋ ಆರ್ ಡಿ ಪಾಟೀಲ್, ಈ ಹಿಂದೆ ಪಿಎಸ್​ಐ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ಪೊಲೀಸರು ಬಂಧನ ಮಾಡಲು ಹೋದಾಗ ಇದೇ ರೀತಿ ಕಂಪೌಂಡ್ ಹಾರಿ ತಪ್ಪಿಸಿಕೊಂಡು ಹೋಗಿದ್ದ.

ಸಿಐಡಿ ಅಧಿಕಾರಿಗಳನ್ನು ತಳ್ಳಿ ಹಿಂಬಾಗಿಲಿನಿಂದ ತಪ್ಪಿಸಿಕೊಂಡು ಹೋಗಿದ್ದ ಆರ್​ಡಿ ಪಾಟೀಲ್, ಪೊಲೀಸರ ಜೊತೆ ಚೆಲ್ಲಾಟವಾಡುವ ಚಾಳಿ ಬೆಳಸಿಕೊಂಡಿದ್ದಾನೆ. ಪೊಲೀಸರ ಕೈಗೆ ಸಿಕ್ಕರೆ ಕಂಬಿ ಹಿಂದೆ ಹೋಗಬೇಕಾಗುತ್ತದೆ. ಸಾಕ್ಷಿಗಳು ನಾಶವಾಗಲಿ‌ ಅನ್ನೋ ಉದ್ದೇಶದಿಂದ ಈ ರೀತಿ ಕಳ್ಳಾಟವಾಡುತ್ತಿದ್ದಾನೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಹನಿ ಟ್ರ್ಯಾಪ್, ಸಿಡಿ ಫ್ಯಾಕ್ಟರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಲ್ಲ: ಶಾಸಕ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಮುನಿರತ್ನ ನಿನ್ನೆ ಮಾಡಿದ ಹಲವು ಅರೋಪಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಬೆಂಗಳೂರು ಹೋಟೆಲ್​ನಲ್ಲಿ ಹಿಂದಿ ಹೇರಿಕೆ, ವಿಡಿಯೋ ವೈರಲ್
ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್
ಪೌರ ಕಾರ್ಮಿಕರ ಜೊತೆ ಸೇರಿ ಕಸ ಆಯ್ದ ರಕ್ಷಕ್ ಬುಲೆಟ್
ಔರಂಗಜೇಬನ ಸಮಾಧಿ ವಿವಾದ, ಸುತ್ತಲೂ ತಾತ್ಕಾಲಿಕ ಗೋಡೆ ನಿರ್ಮಾಣ
ಔರಂಗಜೇಬನ ಸಮಾಧಿ ವಿವಾದ, ಸುತ್ತಲೂ ತಾತ್ಕಾಲಿಕ ಗೋಡೆ ನಿರ್ಮಾಣ
ನಮಸ್ಕಾರದ ಮಹತ್ವವೇನು? ಯಾರಿಗೆ, ಹೇಗೆ ನಮಸ್ಕಾರ ಮಾಡಬೇಕು, ಇಲ್ಲಿದೆ ವಿವರ
ನಮಸ್ಕಾರದ ಮಹತ್ವವೇನು? ಯಾರಿಗೆ, ಹೇಗೆ ನಮಸ್ಕಾರ ಮಾಡಬೇಕು, ಇಲ್ಲಿದೆ ವಿವರ
ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ