AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಅಕ್ರಮ; ವಿಧಿಸಿದ ದಂಡ 320 ಕೋಟಿ ರೂ, ವಸೂಲಾತಿ 1.60 ಕೋಟಿ ರೂ. ತಿದ್ದುಪಡಿ ಪ್ರಕಾರ ಬಾಕಿ ಇರುವುದು 8 ಸಾವಿರ ಕೋಟಿ ರೂ!

ಗಣಿ ಇಲಾಖೆಯ ಮೂಲ ರಾಜಧನ ಮೆಟ್ರಿಕ್​ ಟನ್​ಗೆ 60 ರೂಪಾಯಿಯಂತೆ ಇದ್ದು, ಅಕ್ರಮವಾಗಿ ತೆಗೆಯಲಾದ ಮೆಟ್ರಿಕ್​ ಟನ್​ ಕಲ್ಲಿಗೆ 300 ರೂಪಾಯಿ ದಂಡ ವಿಧಿಸಲಾಗಿದೆ. ಅಲ್ಲಿಗೆ ರಾಜಧನ ಹಾಗೂ ದಂಡ ಇವೆರಡನ್ನೂ ಸೇರಿಸಿದ ಮೆಟ್ರಿಕ್​ ಟನ್​ ಕಲ್ಲಿಗೆ 360 ರೂಪಾಯಿಯಂತೆ ದಂಡ ವಿಧಿಸಲಾಗಿದ್ದು, ಲಕ್ಷಾಂತರ ಟನ್​ಗೆ 320 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ.

ಗಣಿ ಅಕ್ರಮ; ವಿಧಿಸಿದ ದಂಡ 320 ಕೋಟಿ ರೂ, ವಸೂಲಾತಿ 1.60 ಕೋಟಿ ರೂ. ತಿದ್ದುಪಡಿ ಪ್ರಕಾರ ಬಾಕಿ ಇರುವುದು 8 ಸಾವಿರ ಕೋಟಿ ರೂ!
ಸಂಗ್ರಹ ಚಿತ್ರ
TV9 Web
| Edited By: |

Updated on:Jul 12, 2021 | 10:43 AM

Share

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ಯಂತ್ರ, ಸ್ಪೋಟಕಗಳನ್ನ ಬಳಸಿ ನಿಗದಿಪಡಿಸಿದಕ್ಕಿಂತ 100 ಪಟ್ಟು ಹೆಚ್ಚು ಕಲ್ಲು ತೆಗೆದಿರುವುದು ಹಾಗೂ ಅದಕ್ಕೆ ನೂರಾರು ಕೋಟಿ ರೂಪಾಯಿ ದಂಡ ವಿಧಿಸಿರುವ ವಿಚಾರ ವರದಿಯಾಗಿದೆ. ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಗಣಿಗಾರಿಕೆಗಳಿಗೆ ಒಟ್ಟು 320 ಕೋಟಿ ರೂಪಾಯಿ ದಂಡ ವಿಧಿಸಲಾಗಿದ್ದು, ಈ ಪೈಕಿ ಬೇಬಿ ಬೆಟ್ಟ ವ್ಯಾಪ್ತಿಯಲ್ಲೇ ಸುಮಾರು 280 ಕೋಟಿ ರೂಪಾಯಿ ದಂಡ ಹಾಕಿರುವುದು ತಿಳಿದುಬಂದಿದೆ. ಜಿಲ್ಲೆಯಲ್ಲಿ ನಿಯಮಾನುಸಾರ ಗಣಿಗಾರಿಕೆ ಮತ್ತು ಕ್ರಷರ್​ಗಳನ್ನು ನಡೆಸಲು ಯಾವುದೇ ತೊಂದರೆಗಳಿಲ್ಲ ಆದರೆ, ನಿಯಮ ಉಲ್ಲಂಘಿಸಿ ಸಾಗಾಣಿಕೆ ಮಾಡಿದವರಿಗೆ ದಂಡ ವಿಧಿಸಲಾಗಿದೆ ಎಂದು ಈ ಹಿಂದೆ ವಿಧಾನ ಪರಿಷತ್ತಿನಲ್ಲಿ ಸದಸ್ಯರಾಗಿದ್ದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಆರ್.ಚೌಡರೆಡ್ಡಿ ತೂಪಲ್ಲಿ ಹಾಗೂ ಕೆ.ಎ.ತಿಪ್ಪೇಸ್ವಾಮಿ ನಿಯಮ 59ರ ಅಡಿ ಪ್ರಸ್ತಾಪಿಸಿದ್ದ ನಿಲುವಳಿಗೆ ಅಂದಿನ ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿದ್ದ ಸಿ.ಸಿ.ಪಾಟೀಲ್ ಸಹಿ ಹಾಕಿದ್ದ ಉತ್ತರ ಪ್ರತಿ ಮಾಧ್ಯಮಗಳಿಗೆ ಲಭ್ಯವಾಗಿದೆ.

ಬೇಬಿ ಬೆಟ್ಟದಲ್ಲೇ ಸುಮಾರು 30 ಕಂಪನಿಗಳಿಂದ 2017 ರಿಂದ ಇಲ್ಲಿಯವರೆಗೆ ಪರಿಸರ ಇಲಾಖೆಯ ಅನುಮತಿ ಪಡೆಯದೇ ಲಕ್ಷಾಂತರ ಮೆಟ್ರಿಕ್ ಟನ್ ಕಲ್ಲು ಹೊರ ತೆಗೆಯಲಾಗಿದೆ. ಪರಿಸರ ಅನುಮೋದನಾ ಸಮಿತಿ ನಿಗದಿಗೊಳಿಸಿರುವ ಮಿತಿಯಂತೆ ವರ್ಷಕ್ಕೆ ಗರಿಷ್ಠ 25 ಸಾವಿರ ಮೆಟ್ರಿಕ್ ಟನ್ ಬಳಸಬಹುದು. ಆದರೆ, ಅಲ್ಲಿ ನಿಯಮ ಮೀರಿ ಲಕ್ಷಾಂತರ ಮೆಟ್ರಿಕ್ ಟನ್​ ಬಳಕೆಯಾಗಿರುವುದರಿಂದ ಒಂದು ಮೆಟ್ರಿಕ್​ ಟನ್​ಗೆ 300 ರೂಪಾಯಿ ದಂಡದಂತೆ ಬೇಬಿ ಬೆಟ್ಟದಲ್ಲಿನ 30 ಕಂಪನಿಗಳಿಗೆ ಒಟ್ಟು 280 ಕೋಟಿ ರೂಪಾಯಿ ದಂಡ ವಿಧಿಸಿರುವುದನ್ನು ಉತ್ತರ ಪ್ರತಿಯಲ್ಲಿ ತಿಳಿಸಲಾಗಿದೆ.

ಗಣಿ ಇಲಾಖೆಯ ಮೂಲ ರಾಜಧನ ಮೆಟ್ರಿಕ್​ ಟನ್​ಗೆ 60 ರೂಪಾಯಿಯಂತೆ ಇದ್ದು, ಅಕ್ರಮವಾಗಿ ತೆಗೆಯಲಾದ ಮೆಟ್ರಿಕ್​ ಟನ್​ ಕಲ್ಲಿಗೆ 300 ರೂಪಾಯಿ ದಂಡ ವಿಧಿಸಲಾಗಿದೆ. ಅಲ್ಲಿಗೆ ರಾಜಧನ ಹಾಗೂ ದಂಡ ಇವೆರಡನ್ನೂ ಸೇರಿಸಿದ ಮೆಟ್ರಿಕ್​ ಟನ್​ ಕಲ್ಲಿಗೆ 360 ರೂಪಾಯಿಯಂತೆ ದಂಡ ವಿಧಿಸಲಾಗಿದ್ದು, ಲಕ್ಷಾಂತರ ಟನ್​ಗೆ 320 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ಅದರಲ್ಲಿ ಬೇಬಿ ಬೆಟ್ಟವೊಂದರಲ್ಲೇ 280 ಕೋಟಿ ರೂಪಾಯಿ ದಂಡ ಹಾಕಲಾಗಿದೆ. ಆದರೆ, ಆ ಪೈಕಿ ಕೇವಲ 1.60 ಕೋಟಿ ರೂಪಾಯಿ ದಂಡ ವಸೂಲಿ ಮಾಡುವಲ್ಲಿ ಗಣಿ ಇಲಾಖೆ ಯಶಸ್ವಿಯಾಗಿದೆ ಎಂದು ಉತ್ತರ ಪ್ರತಿಯಲ್ಲಿ ತಿಳಿಸಲಾಗಿದೆ.

MANDYA MINING

ವಿಧಾನ ಪರಿಷತ್ತಿನಲ್ಲಿ ಚರ್ಚೆಯಾದ ಪ್ರತಿ

MANDYA MINING

ವಿಧಾನ ಪರಿಷತ್ತಿನಲ್ಲಿ ಚರ್ಚೆಯಾದ ಪ್ರತಿ

ಸದ್ಯ ಗಣಿ ಮತ್ತು ಖನಿಜ ಅಭಿವೃದ್ದಿ ನಿಯಂತ್ರಣ ಕಾಯ್ದೆ (ಎಂಎಂಡಿಆರ್​ಎ) ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ದಂಡದ ಹಣವನ್ನ ಪ್ರತಿ ಮೆಟ್ರಿಕ್ ಟನ್​ಗೆ 300 ರೂಪಾಯಿಯಿಂದ 1570 ರೂಪಾಯಿಗೆ ಹೆಚ್ಚಿಸಲಾಗಿದೆ. ಇದರ ಅನ್ವಯ ಸಮೀಕ್ಷೆ ನಡೆಸಿದ್ದೇ ಆದಲ್ಲಿ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯಿಂದ ವಸೂಲಾಗಬೇಕಿರುವ ದಂಡದ ಮೊತ್ತ ಸುಮಾರು 8 ಸಾವಿರ ಕೋಟಿ ರೂಪಾಯಿ ಆಗುತ್ತದೆ. ಈ ಪೈಕಿ ಬೇಬಿ ಬೆಟ್ಟವ್ಯಾಪ್ತಿಯಲ್ಲೇ ಸುಮಾರು 300 ಕೋಟಿ ರೂಪಾಯಿ ರಾಜಧನ ವಸೂಲಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ನಾವು ನಡೆಸುತ್ತಿರುವುದು ಸಕ್ರಮ ಮೈನ್ಸ್; ನಮಗೆ ಕುಮಾರಣ್ಣನು ಗೊತ್ತಿಲ್ಲ, ಸುಮಲತಾ ಅವರೂ ಗೊತ್ತಿಲ್ಲ; ನಮ್ಮನ್ನು ಬದುಕಲು ಬಿಡಿ: ಗಣಿ ಮಾಲೀಕರು 

ಅಕ್ಕ ನಮ್ಮ ಕ್ಷೇತ್ರದ ಕಡೆಯೂ ಬನ್ನಿ, ಇಲ್ಲಿನ ಗಣಿಗಾರಿಕೆ ನಿಲ್ಲಿಸಿಕೊಡಿ.. ಸಂಸದೆ ಸುಮಲತಾಗೆ ನಾಗಮಂಗಲ ಶಾಸಕ ಸುರೇಶ್‌ ಗೌಡ ವ್ಯಂಗ್ಯ

Published On - 10:30 am, Mon, 12 July 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ