AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಅಕ್ರಮ; ವಿಧಿಸಿದ ದಂಡ 320 ಕೋಟಿ ರೂ, ವಸೂಲಾತಿ 1.60 ಕೋಟಿ ರೂ. ತಿದ್ದುಪಡಿ ಪ್ರಕಾರ ಬಾಕಿ ಇರುವುದು 8 ಸಾವಿರ ಕೋಟಿ ರೂ!

ಗಣಿ ಇಲಾಖೆಯ ಮೂಲ ರಾಜಧನ ಮೆಟ್ರಿಕ್​ ಟನ್​ಗೆ 60 ರೂಪಾಯಿಯಂತೆ ಇದ್ದು, ಅಕ್ರಮವಾಗಿ ತೆಗೆಯಲಾದ ಮೆಟ್ರಿಕ್​ ಟನ್​ ಕಲ್ಲಿಗೆ 300 ರೂಪಾಯಿ ದಂಡ ವಿಧಿಸಲಾಗಿದೆ. ಅಲ್ಲಿಗೆ ರಾಜಧನ ಹಾಗೂ ದಂಡ ಇವೆರಡನ್ನೂ ಸೇರಿಸಿದ ಮೆಟ್ರಿಕ್​ ಟನ್​ ಕಲ್ಲಿಗೆ 360 ರೂಪಾಯಿಯಂತೆ ದಂಡ ವಿಧಿಸಲಾಗಿದ್ದು, ಲಕ್ಷಾಂತರ ಟನ್​ಗೆ 320 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ.

ಗಣಿ ಅಕ್ರಮ; ವಿಧಿಸಿದ ದಂಡ 320 ಕೋಟಿ ರೂ, ವಸೂಲಾತಿ 1.60 ಕೋಟಿ ರೂ. ತಿದ್ದುಪಡಿ ಪ್ರಕಾರ ಬಾಕಿ ಇರುವುದು 8 ಸಾವಿರ ಕೋಟಿ ರೂ!
ಸಂಗ್ರಹ ಚಿತ್ರ
TV9 Web
| Edited By: |

Updated on:Jul 12, 2021 | 10:43 AM

Share

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ಯಂತ್ರ, ಸ್ಪೋಟಕಗಳನ್ನ ಬಳಸಿ ನಿಗದಿಪಡಿಸಿದಕ್ಕಿಂತ 100 ಪಟ್ಟು ಹೆಚ್ಚು ಕಲ್ಲು ತೆಗೆದಿರುವುದು ಹಾಗೂ ಅದಕ್ಕೆ ನೂರಾರು ಕೋಟಿ ರೂಪಾಯಿ ದಂಡ ವಿಧಿಸಿರುವ ವಿಚಾರ ವರದಿಯಾಗಿದೆ. ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಗಣಿಗಾರಿಕೆಗಳಿಗೆ ಒಟ್ಟು 320 ಕೋಟಿ ರೂಪಾಯಿ ದಂಡ ವಿಧಿಸಲಾಗಿದ್ದು, ಈ ಪೈಕಿ ಬೇಬಿ ಬೆಟ್ಟ ವ್ಯಾಪ್ತಿಯಲ್ಲೇ ಸುಮಾರು 280 ಕೋಟಿ ರೂಪಾಯಿ ದಂಡ ಹಾಕಿರುವುದು ತಿಳಿದುಬಂದಿದೆ. ಜಿಲ್ಲೆಯಲ್ಲಿ ನಿಯಮಾನುಸಾರ ಗಣಿಗಾರಿಕೆ ಮತ್ತು ಕ್ರಷರ್​ಗಳನ್ನು ನಡೆಸಲು ಯಾವುದೇ ತೊಂದರೆಗಳಿಲ್ಲ ಆದರೆ, ನಿಯಮ ಉಲ್ಲಂಘಿಸಿ ಸಾಗಾಣಿಕೆ ಮಾಡಿದವರಿಗೆ ದಂಡ ವಿಧಿಸಲಾಗಿದೆ ಎಂದು ಈ ಹಿಂದೆ ವಿಧಾನ ಪರಿಷತ್ತಿನಲ್ಲಿ ಸದಸ್ಯರಾಗಿದ್ದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಆರ್.ಚೌಡರೆಡ್ಡಿ ತೂಪಲ್ಲಿ ಹಾಗೂ ಕೆ.ಎ.ತಿಪ್ಪೇಸ್ವಾಮಿ ನಿಯಮ 59ರ ಅಡಿ ಪ್ರಸ್ತಾಪಿಸಿದ್ದ ನಿಲುವಳಿಗೆ ಅಂದಿನ ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿದ್ದ ಸಿ.ಸಿ.ಪಾಟೀಲ್ ಸಹಿ ಹಾಕಿದ್ದ ಉತ್ತರ ಪ್ರತಿ ಮಾಧ್ಯಮಗಳಿಗೆ ಲಭ್ಯವಾಗಿದೆ.

ಬೇಬಿ ಬೆಟ್ಟದಲ್ಲೇ ಸುಮಾರು 30 ಕಂಪನಿಗಳಿಂದ 2017 ರಿಂದ ಇಲ್ಲಿಯವರೆಗೆ ಪರಿಸರ ಇಲಾಖೆಯ ಅನುಮತಿ ಪಡೆಯದೇ ಲಕ್ಷಾಂತರ ಮೆಟ್ರಿಕ್ ಟನ್ ಕಲ್ಲು ಹೊರ ತೆಗೆಯಲಾಗಿದೆ. ಪರಿಸರ ಅನುಮೋದನಾ ಸಮಿತಿ ನಿಗದಿಗೊಳಿಸಿರುವ ಮಿತಿಯಂತೆ ವರ್ಷಕ್ಕೆ ಗರಿಷ್ಠ 25 ಸಾವಿರ ಮೆಟ್ರಿಕ್ ಟನ್ ಬಳಸಬಹುದು. ಆದರೆ, ಅಲ್ಲಿ ನಿಯಮ ಮೀರಿ ಲಕ್ಷಾಂತರ ಮೆಟ್ರಿಕ್ ಟನ್​ ಬಳಕೆಯಾಗಿರುವುದರಿಂದ ಒಂದು ಮೆಟ್ರಿಕ್​ ಟನ್​ಗೆ 300 ರೂಪಾಯಿ ದಂಡದಂತೆ ಬೇಬಿ ಬೆಟ್ಟದಲ್ಲಿನ 30 ಕಂಪನಿಗಳಿಗೆ ಒಟ್ಟು 280 ಕೋಟಿ ರೂಪಾಯಿ ದಂಡ ವಿಧಿಸಿರುವುದನ್ನು ಉತ್ತರ ಪ್ರತಿಯಲ್ಲಿ ತಿಳಿಸಲಾಗಿದೆ.

ಗಣಿ ಇಲಾಖೆಯ ಮೂಲ ರಾಜಧನ ಮೆಟ್ರಿಕ್​ ಟನ್​ಗೆ 60 ರೂಪಾಯಿಯಂತೆ ಇದ್ದು, ಅಕ್ರಮವಾಗಿ ತೆಗೆಯಲಾದ ಮೆಟ್ರಿಕ್​ ಟನ್​ ಕಲ್ಲಿಗೆ 300 ರೂಪಾಯಿ ದಂಡ ವಿಧಿಸಲಾಗಿದೆ. ಅಲ್ಲಿಗೆ ರಾಜಧನ ಹಾಗೂ ದಂಡ ಇವೆರಡನ್ನೂ ಸೇರಿಸಿದ ಮೆಟ್ರಿಕ್​ ಟನ್​ ಕಲ್ಲಿಗೆ 360 ರೂಪಾಯಿಯಂತೆ ದಂಡ ವಿಧಿಸಲಾಗಿದ್ದು, ಲಕ್ಷಾಂತರ ಟನ್​ಗೆ 320 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ಅದರಲ್ಲಿ ಬೇಬಿ ಬೆಟ್ಟವೊಂದರಲ್ಲೇ 280 ಕೋಟಿ ರೂಪಾಯಿ ದಂಡ ಹಾಕಲಾಗಿದೆ. ಆದರೆ, ಆ ಪೈಕಿ ಕೇವಲ 1.60 ಕೋಟಿ ರೂಪಾಯಿ ದಂಡ ವಸೂಲಿ ಮಾಡುವಲ್ಲಿ ಗಣಿ ಇಲಾಖೆ ಯಶಸ್ವಿಯಾಗಿದೆ ಎಂದು ಉತ್ತರ ಪ್ರತಿಯಲ್ಲಿ ತಿಳಿಸಲಾಗಿದೆ.

MANDYA MINING

ವಿಧಾನ ಪರಿಷತ್ತಿನಲ್ಲಿ ಚರ್ಚೆಯಾದ ಪ್ರತಿ

MANDYA MINING

ವಿಧಾನ ಪರಿಷತ್ತಿನಲ್ಲಿ ಚರ್ಚೆಯಾದ ಪ್ರತಿ

ಸದ್ಯ ಗಣಿ ಮತ್ತು ಖನಿಜ ಅಭಿವೃದ್ದಿ ನಿಯಂತ್ರಣ ಕಾಯ್ದೆ (ಎಂಎಂಡಿಆರ್​ಎ) ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ದಂಡದ ಹಣವನ್ನ ಪ್ರತಿ ಮೆಟ್ರಿಕ್ ಟನ್​ಗೆ 300 ರೂಪಾಯಿಯಿಂದ 1570 ರೂಪಾಯಿಗೆ ಹೆಚ್ಚಿಸಲಾಗಿದೆ. ಇದರ ಅನ್ವಯ ಸಮೀಕ್ಷೆ ನಡೆಸಿದ್ದೇ ಆದಲ್ಲಿ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯಿಂದ ವಸೂಲಾಗಬೇಕಿರುವ ದಂಡದ ಮೊತ್ತ ಸುಮಾರು 8 ಸಾವಿರ ಕೋಟಿ ರೂಪಾಯಿ ಆಗುತ್ತದೆ. ಈ ಪೈಕಿ ಬೇಬಿ ಬೆಟ್ಟವ್ಯಾಪ್ತಿಯಲ್ಲೇ ಸುಮಾರು 300 ಕೋಟಿ ರೂಪಾಯಿ ರಾಜಧನ ವಸೂಲಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ನಾವು ನಡೆಸುತ್ತಿರುವುದು ಸಕ್ರಮ ಮೈನ್ಸ್; ನಮಗೆ ಕುಮಾರಣ್ಣನು ಗೊತ್ತಿಲ್ಲ, ಸುಮಲತಾ ಅವರೂ ಗೊತ್ತಿಲ್ಲ; ನಮ್ಮನ್ನು ಬದುಕಲು ಬಿಡಿ: ಗಣಿ ಮಾಲೀಕರು 

ಅಕ್ಕ ನಮ್ಮ ಕ್ಷೇತ್ರದ ಕಡೆಯೂ ಬನ್ನಿ, ಇಲ್ಲಿನ ಗಣಿಗಾರಿಕೆ ನಿಲ್ಲಿಸಿಕೊಡಿ.. ಸಂಸದೆ ಸುಮಲತಾಗೆ ನಾಗಮಂಗಲ ಶಾಸಕ ಸುರೇಶ್‌ ಗೌಡ ವ್ಯಂಗ್ಯ

Published On - 10:30 am, Mon, 12 July 21

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?