AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿವಿಯ ಉತ್ತರ ಪತ್ರಿಕೆ ಅಕ್ರಮ ಜಾಲ ಕೇಸ್; ಆರೋಪಿ ಇನ್ಸ್ಪೆಕ್ಟರ್ ಜಾಮೀನು ಅರ್ಜಿ ವಜಾ

ಆರೋಪಿಯಾಗಿದ್ದ ಮಂಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಜಾಮೀನು ಅರ್ಜಿ ವಜಾಗೊಂಡಿದೆ. ಮೈಸೂರಿನ 5ನೇ ಜಿಲ್ಲಾ & ಸತ್ರ ನ್ಯಾಯಾಲಯದಿಂದ ವಜಾಗೊಳಿಸಿದೆ.

ಮೈಸೂರು ವಿವಿಯ ಉತ್ತರ ಪತ್ರಿಕೆ ಅಕ್ರಮ ಜಾಲ ಕೇಸ್; ಆರೋಪಿ ಇನ್ಸ್ಪೆಕ್ಟರ್ ಜಾಮೀನು ಅರ್ಜಿ ವಜಾ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 30, 2021 | 11:23 AM

Share

ಮೈಸೂರು ವಿವಿಯ ಉತ್ತರ ಪತ್ರಿಕೆ ಅಕ್ರಮ ಜಾಲ ಕೇಸ್ಗೆ ಸಂಬಂಧಿಸಿ ಪ್ರಕರಣದ ಆರೋಪಿಯಾಗಿದ್ದ ಮಂಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಜಾಮೀನು ಅರ್ಜಿ ವಜಾಗೊಂಡಿದೆ. ಮೈಸೂರಿನ 5ನೇ ಜಿಲ್ಲಾ & ಸತ್ರ ನ್ಯಾಯಾಲಯದಿಂದ ವಜಾಗೊಳಿಸಿದೆ. ಇನ್ನು ಈ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಮೊಹಮ್ಮದ್ ನಿಸಾರ್ನನ್ನು ಮೈಸೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ವಿವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಲಾಗಿದೆ ಎಂದು ಹೇಳಲಾಗುತ್ತಿತ್ತು. ಏಪ್ರಿಲ್ 15, 22ರಂದು ಪ್ರಸಕ್ತ ಸಾಲಿನ ಪರೀಕ್ಷೆ ನಡೆದಿತ್ತು. ಪರೀಕ್ಷೆ ಮುಗಿದ ಬಳಿಕ ಬಿ‌ಎಸ್ಸಿ ರಸಾಯನಶಾಸ್ತ್ರ ಪರೀಕ್ಷೆಯನ್ನು ಚಂದನ್, ಚೇತನ್, ಇತರೆ ವಿದ್ಯಾರ್ಥಿಗಳು ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಬರೆದಿದ್ದರು. ಈ ಪ್ರಕರಣ ಸಂಬಂಧ ಈಗ 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ನಿಸಾರ್, ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ, ರಾಕೇಶ್, ಚಂದನ್, ಚೇತನ್, ಬ್ಲೂ ಡೈಮಂಡ್ ಲಾಡ್ಜ್ ಮಾಲೀಕನ ವಿರುದ್ಧ ಕೇಸ್ ದಾಖಲಾಗಿದೆ. ಪರೀಕ್ಷೆ ನಡೆಯುವಾಗ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ದಾಳಿ ಮಾಡಿ ಆರೋಪಿಗಳ ಹೇಳಿಕೆ ಪಡೆದು ಆರೋಪಿಗಳನ್ನು ಬಿಟ್ಟ ಆರೋಪ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ ವಿರುದ್ಧವೂ FIR ದಾಖಲಾಗಿದೆ. ಸೆಕ್ಷನ್ 420, 406, 408, 470, 471, 472, 473, 474 ಸೇರಿ ಹಲವು ಸೆಕ್ಷನ್‌ಗಳಡಿ ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿದ ಆರೋಪ; ಇನ್ಸ್‌ಪೆಕ್ಟರ್ ಸೇರಿ 6 ಜನರ ವಿರುದ್ಧ ಎಫ್​ಐಆರ್

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ