AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯಲ್ಲಿ KRIDL ಹೆಸರಿನಲ್ಲಿ ಅಕ್ರಮ ಮರಳು ದಂಧೆ; ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆ ಅಗೆದ ದುಷ್ಕರ್ಮಿಗಳು

ಕಲಬುರಗಿ ತಾಲೂಕಿನ ಪಿರೋಜಾಬಾದ್ ಬಳಿ ಅಕ್ರಮ ಮರಳು ದಂಧೆ ನಡೆಯುತ್ತಿರುವುದು ತಿಳಿಯುತ್ತಿದ್ದಂತೆ ನಿನ್ನೆ ಅಕ್ರಮ ಮರಳು ಅಡ್ಡಾಕ್ಕೆ ಭೇಟಿ ನೀಡಲು KRIDL ಅಧ್ಯಕ್ಷ ರುದ್ರೇಶ್ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ವಾಹನ ತೆರಳದಂತೆ ದಂಧೆಕೋರರು ರಸ್ತೆ ಅಗೆದಿದ್ದಾರೆ.

ಭೀಮಾ ನದಿಯಲ್ಲಿ KRIDL ಹೆಸರಿನಲ್ಲಿ ಅಕ್ರಮ ಮರಳು ದಂಧೆ; ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆ ಅಗೆದ ದುಷ್ಕರ್ಮಿಗಳು
ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆ ಅಗೆದಿದ್ದ ದುಷ್ಕರ್ಮಿಗಳು
TV9 Web
| Edited By: |

Updated on: Jul 16, 2021 | 9:37 AM

Share

ಕಲಬುರಗಿ: ಭೀಮಾ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆಯ ಸದ್ದು ಕೇಳಿ ಬಂದಿದೆ. KRIDL ಹೆಸರಿನಲ್ಲಿ ಅಕ್ರಮ ಮರಳು ದಂಧೆ ಆರೋಪ ಕೇಳಿ ಬಂದಿದ್ದು ಸ್ಥಳಕ್ಕೆ ಯಾರೂ ತೆರಳದಂತೆ ದುಷ್ಕರ್ಮಿಗಳು ರಸ್ತೆ ಅಗೆದ ಘಟನೆ ನಡೆದಿದೆ.

ಕಲಬುರಗಿ ತಾಲೂಕಿನ ಪಿರೋಜಾಬಾದ್ ಬಳಿ ಅಕ್ರಮ ಮರಳು ದಂಧೆ ನಡೆಯುತ್ತಿರುವುದು ತಿಳಿಯುತ್ತಿದ್ದಂತೆ ನಿನ್ನೆ ಅಕ್ರಮ ಮರಳು ಅಡ್ಡಾಕ್ಕೆ ಭೇಟಿ ನೀಡಲು KRIDL ಅಧ್ಯಕ್ಷ ರುದ್ರೇಶ್ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ವಾಹನ ತೆರಳದಂತೆ ದಂಧೆಕೋರರು ರಸ್ತೆ ಅಗೆದಿದ್ದಾರೆ. ಹೀಗಾಗಿ ರುದ್ರೇಶ್ 3 ಕಿ.ಮೀ. ನಡೆದು ಸ್ಥಳ ಪರಿಶೀಲಿಸಿದ್ದಾರೆ.

ಭೀಮಾ ನದಿಯಲ್ಲಿ KRIDL ಹೆಸರಿನಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಹಾಗೂ ಇನ್ನು ಮುಂದೆ ತಮ್ಮ ನಿಗಮಕ್ಕೆ ಮಂಜೂರಾದ ಮರಳಿನ ಟೆಂಡರ್ ರದ್ದತಿಗೆ KRIDL ಅಧ್ಯಕ್ಷ ರುದ್ರೇಶ್ ಚಿಂತನೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾನದಿಯಲ್ಲಿ ಅಕ್ರಮ ಮರಳುಗಾರಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹಸಿರು ನ್ಯಾಯಾಧಿಕರಣ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಬಾರದೆಂದು ತಡೆ ಹಾಕಿದ್ದರೂ ಇಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಲ್ಲಲ್ಲಿ ಪ್ರಭಾವಿಗಳು, ರಾಜಕಾರಣಿಗಳ ಬೆಂಬಲಿಗರು ನದಿಯಲ್ಲಿ ಮರಳನ್ನು ಕದಿಯುತ್ತಲೇ ಇದ್ದಾರೆ. ಇಂಥ ಘಟನೆಗಳಿಗೆ ಪೂರ್ಣ ವಿರಾಮ ಹಾಕಲು ಕಳೆದ ವರ್ಷವೇ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮುಂದಾಗಿದ್ದರು.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಆಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜೊತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆಯೂ ತೀವ್ರ ನಿಗಾ ಇಡುವಂತೆ ಸಭೆಯಲ್ಲಿ ಡಿಸಿ ವೈ.ಎಸ್.ಪಾಟೀಲ್ ಖಡಕ್ ಸೂಚನೆ ನೀಡಿದ್ದರು. ಆದ್ರೆ ಇನ್ನೂ ಕೂಡ ಈ ಅಕ್ರಮ ಮರಳು ದಂಧೆ ನಿಂತಿಲ್ಲ ಎಂಬ ಕೂಗು ಕೇಳಿ ಬಂದಿದೆ.

ಇದನ್ನೂ ಓದಿ: ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ.. ಸೂಚಿಸಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಶಾಸನ ಎಸ್.ರಾಮಪ್ಪ ಕಿಡಿ

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್​, ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!