AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿಯಲ್ಲಿ KRIDL ಹೆಸರಿನಲ್ಲಿ ಅಕ್ರಮ ಮರಳು ದಂಧೆ; ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆ ಅಗೆದ ದುಷ್ಕರ್ಮಿಗಳು

ಕಲಬುರಗಿ ತಾಲೂಕಿನ ಪಿರೋಜಾಬಾದ್ ಬಳಿ ಅಕ್ರಮ ಮರಳು ದಂಧೆ ನಡೆಯುತ್ತಿರುವುದು ತಿಳಿಯುತ್ತಿದ್ದಂತೆ ನಿನ್ನೆ ಅಕ್ರಮ ಮರಳು ಅಡ್ಡಾಕ್ಕೆ ಭೇಟಿ ನೀಡಲು KRIDL ಅಧ್ಯಕ್ಷ ರುದ್ರೇಶ್ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ವಾಹನ ತೆರಳದಂತೆ ದಂಧೆಕೋರರು ರಸ್ತೆ ಅಗೆದಿದ್ದಾರೆ.

ಭೀಮಾ ನದಿಯಲ್ಲಿ KRIDL ಹೆಸರಿನಲ್ಲಿ ಅಕ್ರಮ ಮರಳು ದಂಧೆ; ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆ ಅಗೆದ ದುಷ್ಕರ್ಮಿಗಳು
ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆ ಅಗೆದಿದ್ದ ದುಷ್ಕರ್ಮಿಗಳು
TV9 Web
| Edited By: |

Updated on: Jul 16, 2021 | 9:37 AM

Share

ಕಲಬುರಗಿ: ಭೀಮಾ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆಯ ಸದ್ದು ಕೇಳಿ ಬಂದಿದೆ. KRIDL ಹೆಸರಿನಲ್ಲಿ ಅಕ್ರಮ ಮರಳು ದಂಧೆ ಆರೋಪ ಕೇಳಿ ಬಂದಿದ್ದು ಸ್ಥಳಕ್ಕೆ ಯಾರೂ ತೆರಳದಂತೆ ದುಷ್ಕರ್ಮಿಗಳು ರಸ್ತೆ ಅಗೆದ ಘಟನೆ ನಡೆದಿದೆ.

ಕಲಬುರಗಿ ತಾಲೂಕಿನ ಪಿರೋಜಾಬಾದ್ ಬಳಿ ಅಕ್ರಮ ಮರಳು ದಂಧೆ ನಡೆಯುತ್ತಿರುವುದು ತಿಳಿಯುತ್ತಿದ್ದಂತೆ ನಿನ್ನೆ ಅಕ್ರಮ ಮರಳು ಅಡ್ಡಾಕ್ಕೆ ಭೇಟಿ ನೀಡಲು KRIDL ಅಧ್ಯಕ್ಷ ರುದ್ರೇಶ್ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ವಾಹನ ತೆರಳದಂತೆ ದಂಧೆಕೋರರು ರಸ್ತೆ ಅಗೆದಿದ್ದಾರೆ. ಹೀಗಾಗಿ ರುದ್ರೇಶ್ 3 ಕಿ.ಮೀ. ನಡೆದು ಸ್ಥಳ ಪರಿಶೀಲಿಸಿದ್ದಾರೆ.

ಭೀಮಾ ನದಿಯಲ್ಲಿ KRIDL ಹೆಸರಿನಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಹಾಗೂ ಇನ್ನು ಮುಂದೆ ತಮ್ಮ ನಿಗಮಕ್ಕೆ ಮಂಜೂರಾದ ಮರಳಿನ ಟೆಂಡರ್ ರದ್ದತಿಗೆ KRIDL ಅಧ್ಯಕ್ಷ ರುದ್ರೇಶ್ ಚಿಂತನೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾನದಿಯಲ್ಲಿ ಅಕ್ರಮ ಮರಳುಗಾರಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹಸಿರು ನ್ಯಾಯಾಧಿಕರಣ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಬಾರದೆಂದು ತಡೆ ಹಾಕಿದ್ದರೂ ಇಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಲ್ಲಲ್ಲಿ ಪ್ರಭಾವಿಗಳು, ರಾಜಕಾರಣಿಗಳ ಬೆಂಬಲಿಗರು ನದಿಯಲ್ಲಿ ಮರಳನ್ನು ಕದಿಯುತ್ತಲೇ ಇದ್ದಾರೆ. ಇಂಥ ಘಟನೆಗಳಿಗೆ ಪೂರ್ಣ ವಿರಾಮ ಹಾಕಲು ಕಳೆದ ವರ್ಷವೇ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮುಂದಾಗಿದ್ದರು.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಆಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜೊತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆಯೂ ತೀವ್ರ ನಿಗಾ ಇಡುವಂತೆ ಸಭೆಯಲ್ಲಿ ಡಿಸಿ ವೈ.ಎಸ್.ಪಾಟೀಲ್ ಖಡಕ್ ಸೂಚನೆ ನೀಡಿದ್ದರು. ಆದ್ರೆ ಇನ್ನೂ ಕೂಡ ಈ ಅಕ್ರಮ ಮರಳು ದಂಧೆ ನಿಂತಿಲ್ಲ ಎಂಬ ಕೂಗು ಕೇಳಿ ಬಂದಿದೆ.

ಇದನ್ನೂ ಓದಿ: ಹರಿಹರದಲ್ಲಿ ಪೊಲೀಸರಿಂದಲೇ ಅಕ್ರಮ ಮರಳು ದಂಧೆ.. ಸೂಚಿಸಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಶಾಸನ ಎಸ್.ರಾಮಪ್ಪ ಕಿಡಿ

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್​, ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್