AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮೊಬೈಲ್ ಟವರ್‌ಗಳಿಗೆ ದಂಡ ವಿಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿರುವ ಟವರ್‌ಗಳ ಪೈಕಿ ಹಲವನ್ನು ಇನ್​ಸ್ಟಾಲೇಶನ್ ಚಾರ್ಜಸ್ ಪಾವತಿಸದೆ ಸ್ಥಾಪಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ ಎನ್ನಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಕ್ರಮ ಮೊಬೈಲ್ ಟವರ್‌ಗಳಿಗೆ ದಂಡ ವಿಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಸಿದ್ದರಾಮಯ್ಯ
TV9 Web
| Edited By: |

Updated on: Dec 11, 2023 | 11:39 AM

Share

ಬೆಂಗಳೂರು, ಡಿಸೆಂಬರ್ 11: ರಾಜ್ಯಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು (Telecom Towers) ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಈ ನಿರ್ದೇಶನ ನೀಡಿದ್ದಾರೆ. ಈ ಮೂಲಕ ರಾಜ್ಯವು 7,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಶನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ 2019 ರ ಪ್ರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ.ವರೆಗೆ, ಇತರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50,000 ರೂ, ನಗರ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಗ್ರಾಮ ಪಂಚಾಯ್ತಿ ಮಿತಿಗಳಲ್ಲಿ 35,000 ರೂ. ಇನ್​ಸ್ಟಾಲೇಶನ್ ಚಾರ್ಜಸ್ ವಿಧಿಸಬಹುದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಸುಮಾರು 8,000 ಇಂತಹ ಟವರ್‌ಗಳು ಇದ್ದು ಮತ್ತು ರಾಜ್ಯದಾದ್ಯಂತ 48,000 ಇವೆ.

ಇದನ್ನೂ ಓದಿ: ಇಂದಿನಿಂದ ಬೆಂಗಳೂರಿನಿಂದ ನಂದಿ ಹಿಲ್ಸ್​ಗೆ ಇಂದಿನಿಂದ ಎಲೆಕ್ಟ್ರಿಕ್ ರೈಲು ಸಂಚಾರ

ರಾಜ್ಯದಲ್ಲಿರುವ ಟವರ್‌ಗಳ ಪೈಕಿ ಹಲವನ್ನು ಇನ್​ಸ್ಟಾಲೇಶನ್ ಚಾರ್ಜಸ್ ಪಾವತಿಸದೆ ಸ್ಥಾಪಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ ಎಂದು ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರದಲ್ಲಿ ರಮೇಶ್ ಉಲ್ಲೇಖಿಸಿದ್ದರು. ಅಳವಡಿಕೆ ಶುಲ್ಕವನ್ನು ಇತರೆ ತೆರಿಗೆಯೊಂದಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಇತರ ರಾಜ್ಯಗಳು ಮೊಬೈಲ್ ಟವರ್‌ಗಳಿಂದ 2 ಲಕ್ಷ ರೂ.ವರೆಗೆ ಶುಲ್ಕವನ್ನು ಸಂಗ್ರಹಿಸುತ್ತವೆ. ಕರ್ನಾಟಕ ಕೂಡ ಶುಲ್ಕ ಹೆಚ್ಚಿಸಬೇಕು ಎಂದು ಅವರು ಸಲಹೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ