AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಂಎ ಪ್ರಕರಣ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಮನೆ ದಾಳಿ ನಡೆಸಿದ ಎಸಿಬಿ

ಎಸಿಬಿ ಅಧಿಕಾರಿಗಳು ಜಾರಿ ನಿರ್ದೇಶನಾಲಯದ ನಿರ್ದೇಶನದಂತೆ ಅಕ್ರಮ ಆಸ್ತಿಗಳಿಕೆ‌ ಪ್ರಕರಣ ದಾಖಲಿಸಿಕೊಂಡು ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಐಎಂಎ ಪ್ರಕರಣ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಮನೆ ದಾಳಿ ನಡೆಸಿದ ಎಸಿಬಿ
ಶಾಸಕ ಜಮೀರ್ ಅಹಮದ್ ಖಾನ್ ನಿವಾಸದ ಎದುರು ಪೊಲೀಸ್ ಭದ್ರತೆ
TV9 Web
| Edited By: |

Updated on:Jul 05, 2022 | 11:57 AM

Share

ಬೆಂಗಳೂರು: ಐಎಂಎ ವಂಚನೆ ಪ್ರಕರಣದ ಉರುಳು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಕೊರಳಿನ ಸುತ್ತ ತಿರುಗುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರದ ದಳ(ACB)ದ ಅಧಿಕಾರಿಗಳು ಜಮೀರ್ ಮನೆಗೆ ದಾಳಿ(Raid) ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಂಟೋನ್ಮೆಂಟ್​ನಲ್ಲಿರುವ ಜಮೀರ್ ಅಹಮದ್ ಖಾನ್ ಅವರ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್​ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ಏಕಕಾದಲ್ಲಿ 40 ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಇದೀಗ ಸದಾಶಿವನಗರದಲ್ಲಿರುವ ಫ್ಲ್ಯಾಟ್ ಮೇಲಿನ ದಾಳಿಯನ್ನು ಅಧಿಕಾರಿಗಳು ಮುಕ್ತಾಯಗೊಳಿಸಿದ್ದಾರೆ. ಫ್ಲ್ಯಾಟ್​ನಲ್ಲಿನ ವಸ್ತುಗಳ ವ್ಯಾಲ್ಯುಯೇಷನ್ ಮಾಡಿ ಫ್ಲ್ಯಾಟ್​​ನಲ್ಲಿನ ವಸ್ತು ಹಾಗೂ ದಾಖಲೆಗಳ ವ್ಯಾಲ್ಯುಯೇಷನ್ ಮಾಡಿ ಅದರ ಕಾಪಿಯನ್ನು ಫ್ಲ್ಯಾಟ್ ನೋಡಿಕೊಳ್ಳುವ ಯುವಕನಿಗೆ ನೀಡಿದ್ದಾರೆ. ವ್ಯಾಲ್ಯುಯೇಷನ್ ಮೊತ್ತ ಇನ್ನಷ್ಟೆ ಲೆಕ್ಕ ಹಾಕಬೇಕಿದ್ದು, ಗೆಸ್ಟ್ ಹೌಸ್ ದಾಳಿಯಲ್ಲಿ ಮಹತ್ವದ ದಾಖಲೆಗಳು ಸಿಕ್ಕಿಲ್ಲಾ ಎನ್ನಲಾಗುತ್ತಿದೆ.

ಇದನ್ನೂ ಓದಿ: TV9 Exclusive: ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ರೇಡ್ ಆದಾಗ ಇಂದು ಬಂಧಿತರಾದ ಮಂಜುನಾಥ್ ಏನು ಹೇಳಿದ್ದರು ಗೊತ್ತಾ? ಇಂಟರೆಸ್ಟಿಂಗ್​!

ಐಎಂಎ ಪ್ರಕರಣ ಸಂಬಂಧ ಜಮೀರ್ ನಿವಾಸದ ಮೇಲೆ ಇಡಿ ದಾಳಿ ನಡೆದಿತ್ತು. ಈ ವೇಳೆ ಆದಾಯ ಮೀರಿದ ಆಸ್ತಿಗಳಿಕೆ ಮಾಡಿರುವುದು ಬೆಳಕಿಗೆ ಬಂದ ಹಿನ್ನೆಲೆ ಇಡಿ ನಿರ್ದೇಶನದಂತೆ ಅಕ್ರಮ ಆಸ್ತಿಗಳಿಕೆ‌ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು, ಶಾಸಕ ಜಮೀರ್​ ಮನೆ, ಕಚೇರಿ ಸೇರಿ 5 ಕಡೆಗಳಲ್ಲಿ ಶೋಧಕಾರ್ಯ ಮುಂದುವರೆಸಿದ್ದಾರೆ. 5 ವಾಹನಗಳಲ್ಲಿ ಒಬ್ಬರು ಡಿವೈಎಸ್​ಪಿ, ಇಬ್ಬರು ಇನ್ಸ್​ಪೆಕ್ಟರ್​​ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಳೆದ 30 ನಿಮಿಷಗಳಿಂದ ಲಭ್ಯವಾದ ಕಡತಗಳ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ ಶಾಸಕ ಜಮೀರ್ ಅಹ್ಮದ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಎದುರು ಸ್ಥಳೀಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಇದನ್ನೂ ಓದಿ: ಅಮೃತ್ ಪೌಲ್ ಕಲ್ಬುರ್ಗಿಯಲ್ಲಿ ಬೆಳಗಿನ ಜಾವ ಸಿಸಿಟಿವಿ ಆಫ್ ಮಾಡಿಸಿ, ಆನ್ಸರ್ ಶೀಟ್ ತಿದ್ದಿಸಿದ್ದಾರೆ – ಗೃಹ ಸಚಿವ ಆರಗ ಜ್ಞಾನೇಂದ್ರ

ಎಚ್​ಡಿಕೆಗೆ ನೀಡಿದ್ದ ಫ್ಲ್ಯಾಟ್ ಮೇಲೆ ದಾಳಿ

ಸದಾಶಿವನಗರದಲ್ಲಿನ ರಂಕ ಎನ್​ಕ್ಲೇವ್​ನಲ್ಲಿರುವ ಜಮೀರ್ ಅವರ ಫ್ಲ್ಯಾಟ್ ಮೇಲೆ ಎಸಿಬಿ ಡಿವೈಎಸ್​ಪಿ ವಿಜಯ್ ಹಡಗಲಿ ಮತ್ತು ತಂಡ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದೆ. ಈ ಫ್ಲ್ಯಾಟ್ ಅನ್ನು ಹಿಂದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೊಟ್ಟಿದ್ದರು. ಸಂಬಂಧ ಹಳಸಿದ ನಂತರ ಕುಮಾರಸ್ವಾಮಿ ಅವರಿಂದ ಜಮೀರ್ ಫ್ಲ್ಯಾಟ್ ಅನ್ನು ವಾಪಸ್ ಪಡೆದುಕೊಂಡಿದ್ದರು.

ಶಾಸಕರನ್ನು ಎಸಿಬಿ ಮುಟ್ಟಬಹುದೇ?

ಪ್ರತಿಯೊಂದ ತನಿಖಾ ಸಂಸ್ಥೆಗೆ ಅದರದ್ದೇ ಆದ ಬೇರೆಬೇರೆ ಕೆಲಸ ಇರುತ್ತದೆ. ಇಡಿ ಕಾಯ್ದೆ ಬೇರೆಯದ್ದೇ ಇರಲಿದೆ, ಎಸಿಬಿ ಆ್ಯಕ್ಟ್ ಬೇರೆಯದ್ದೇ ಇರಲಿದೆ. ಜಮೀರ್ ಅಹಮ್ಮದ್ ಶಾಸಕ ಆದ ನಂತರ ಇಷ್ಟು ಆಸ್ತಿ ಗಳಿಸಿದ್ದಾರೆ. ಇವರು ಸಾರ್ವಜನಿಕರ ಪ್ರತಿನಿಧಿಯೂ ಆಗಿರುವುದರಿಂದ ಎಸಿಬಿ ದಾಳಿ ನಡೆಸಬಹುದು. ಖಾಸಗಿ ವ್ಯಕ್ತಿಯಾದರೆ ದಾಳಿ ನಡೆಸುವಂತಿಲ್ಲ. ಐಎಂಎ ಪ್ರಕರಣದ ತನಿಖೆ ನಡೆಸಿದ್ದ ಇಡಿ, ತನಿಖೆಯಿಂದ ಅಕ್ರಮ ಆಸ್ತಿ ಗಳಿಸಿರುವ ಬಗ್ಗೆ ಎಸಿಬಿಗೆ ವರದಿ ನೀಡಿ ನಿಮ್ಮ ಪ್ರಕಾರ ಕ್ರಮ ಕೈಗೊಳ್ಳಿ ಎಂದು ಸೂಚಿಸಿತ್ತು. ಈ ಹಿನ್ನೆಲೆ ಎಸಿಬಿ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದೆ.

ನಿವಾಸದ ಬಳಿ ಆಗಮಿಸಿದ ಕೆಎಸ್​ಆರ್ಪಿ ತುಕಡಿ

ಶಾಸಕ ಜಮೀರ್​ ನಿವಾಸಕ್ಕೆ ಎಸಿಬಿ ಎಸ್​ಪಿ ಹರೀಶ್​ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಂಡು ರೈಲ್ವೆ ನಿಲ್ದಾಣ ಬಳಿಯ ನಿವಾಸಕ್ಕೆ ಯಲಹಂಕ ಉಪವಿಭಾಗ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇನ್ನೊಂದೆಡೆ ಜಮೀರ್ ಕಂಟೋನ್ಮೆಂಟ್ ನಿವಾಸಕ್ಕೆ ಮತ್ತೋರ್ವ ಎಸಿಬಿ ಎಸ್​ಪಿ ಯತೀಶ್ ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ದಾಳಿಯಾಗುತ್ತಿದ್ದಂತೆ ಜಮೀರ್ ನಿವಾಸದ ಬಳಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆ ನಿವಾಸದ ಬಳಿ ಅಹಿತಕರ ಘಟನೆ ನಡೆಯದಂತೆ ಕೆಎಸ್​​ಆರ್​ಪಿ ತುಕಡಿಯನ್ನು ಸ್ಥಳಕ್ಕೆ ಕರೆದು ಭದ್ರತೆಗೆ ನಿಯೋಜಿಸಲಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ.

ಅಕ್ಕಸಾಲಿಗರನ್ನು ಕರೆಸಿಕೊಂಡ ಎಸಿಬಿ

ಬೆಂಗಳೂರಿನಲ್ಲಿ ಜಮೀರ್ ಅಹಮದ್ ಖಾನ್ ಮನೆಯಲ್ಲಿ ಚಿನ್ನಾಭರಣಗಳು ಪತ್ತೆಯಾಗಿದ್ದು, ಈ ನಿಟ್ಟಿನಲ್ಲಿ ಎಸಿಬಿ ಅಧಿಕಾರಿಗಳು ಅಕ್ಕಸಾಲಿಗರನ್ನು ಕರೆಸಿಕೊಂಡಿದ್ದಾರೆ. ಅದರಂತೆ ಚಿನ್ನ, ಬೆಳ್ಳಿ ತೂಕದ ಯಂತ್ರದ ಜೊತೆಗೆ ಜಮೀರ್ ಅಹಮದ್ ಖಾನ್ ಅವರ ನಿವಾಸಕ್ಕೆ ಅಕ್ಕಸಾಲಿಗ ಆಗಮಿಸಿದ್ದಾರೆ.

Published On - 8:07 am, Tue, 5 July 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್