AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

ಈ ಪ್ರಕರಣದಲ್ಲಿ 300 ಕೋಟಿಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​ ಪ್ರೈ. ಲಿ. ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 02, 2021 | 6:45 PM

Share

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹೆಚ್ಚು ಬಡ್ಡಿಯ ಆಸೆಗೆ ಬಿದ್ದು ಹೂಡಿಕೆ ಮಾಡುವವರರಿಗೆ ಈ ಪ್ರಕರಣ ಎಚ್ಚರಿಕೆಯ ಗಂಟೆಯಾಗಿತ್ತು. ಆದರೆ, ಈ ಪ್ರಕರಣದಿಂದ ಜನ ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಏಕೆಂದರೆ, ರಾಜ್ಯದಲ್ಲಿ ಇದೇ ಮಾದರಿಯ ಮತ್ತೊಂದು ಬಹುಕೋಟಿ ವಂಚನೆ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾಗುವವರು ಇರುವವರೆಗೂ ವಂಚಿಸುವವರು ಇದ್ದೇ ಇರುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಈ ಪ್ರಕರಣದಲ್ಲಿ 300 ಕೋಟಿ ರೂ.ಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​  ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ. ತಮಿಳುನಾಡು ಮೂಲದ ಹಣಕಾಸು ಸಂಸ್ಥೆ ಇದಾಗಿದ್ದು, ಎಂ.ಜಿ.ರಸ್ತೆಯ ಮಿತ್ತಲ್ ಟವರ್​ನಲ್ಲಿ ಶಾಖೆ ತೆರೆದಿತ್ತು. ಕರ್ನಾಟಕ ಹಾಗೂ ತಮಿಳುನಾಡಿನ ನಾನಾ ಕಡೆಗಳಲ್ಲಿ ಈ ಕಂಪೆನಿಯ ಶಾಖೆಗಳು ಇವೆ.

ಈ ಕಂಪೆನಿಯಲ್ಲಿ ಹಣ ಇಟ್ಟರೆ ಶೇ. 10.47ರಷ್ಟು ಬಡ್ಡಿ ಕೊಡುವುದಾಗಿ ಕಂಪನಿಯವರು ನಂಬಿಸಿದ್ದರು. ಹಣದ ಹರಿವು ಹೆಚ್ಚಿಸಲು, ಕಂಪೆನಿಯ ಬಗ್ಗೆ ಪ್ರಚಾರಕ್ಕೆ ಏಜೆಂಟರನ್ನು ಕೂಡ ಬಳಕೆ ಮಾಡಲಾಗಿತ್ತು. ಅಧಿಕ ಬಡ್ಡಿ ಆಸೆಗೆ ಬಿದ್ದ ಜನರು ಈ ಕಂಪೆನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈಗ ಠೇವಣಿ ಹಣ ಹಿಂದಿರುಗಿಸದೆ ಕಂಪನಿ ವಂಚನೆ ಮಾಡಿದೆ.

ಕಂಪನಿ ಮುಖ್ಯಸ್ಥರಾದ ಆರ್.ಸುಬ್ರಮಣಿಯನ್, ನಾರಾಯಣ, ರಾಜರತ್ನಂ, ಟಿಎಸ್​ ರಾಘವನ್, ಏಜೆಂಟ್ ಡಾ. ಅದಿಕೇಷನ್, ಪಿ.ಸದಾನಂದ ರಾಜೇಂದ್ರ ಕುಮಾರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ಗಿರಿನಗರ, ಸಿದ್ದಾಪುರ ಸೇರಿದಂತೆ ಹಲವು ಠಾಣೆಗಳಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.

ಮಹಿಳೆಯರೇ ಟಾರ್ಗೆಟ್​ ಈ ಪ್ರಕರಣದಲ್ಲಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಲಾಗುತ್ತಿತ್ತು. ಗೃಹಿಣಿಯರಿಗೆ ಹೆಚ್ಚಿನ ಬಡ್ಡಿ ನೀಡುವ ಆಸೆ ತೋರಿಸಿ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು