AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

ಈ ಪ್ರಕರಣದಲ್ಲಿ 300 ಕೋಟಿಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​ ಪ್ರೈ. ಲಿ. ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 02, 2021 | 6:45 PM

Share

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹೆಚ್ಚು ಬಡ್ಡಿಯ ಆಸೆಗೆ ಬಿದ್ದು ಹೂಡಿಕೆ ಮಾಡುವವರರಿಗೆ ಈ ಪ್ರಕರಣ ಎಚ್ಚರಿಕೆಯ ಗಂಟೆಯಾಗಿತ್ತು. ಆದರೆ, ಈ ಪ್ರಕರಣದಿಂದ ಜನ ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಏಕೆಂದರೆ, ರಾಜ್ಯದಲ್ಲಿ ಇದೇ ಮಾದರಿಯ ಮತ್ತೊಂದು ಬಹುಕೋಟಿ ವಂಚನೆ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾಗುವವರು ಇರುವವರೆಗೂ ವಂಚಿಸುವವರು ಇದ್ದೇ ಇರುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಈ ಪ್ರಕರಣದಲ್ಲಿ 300 ಕೋಟಿ ರೂ.ಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​  ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ. ತಮಿಳುನಾಡು ಮೂಲದ ಹಣಕಾಸು ಸಂಸ್ಥೆ ಇದಾಗಿದ್ದು, ಎಂ.ಜಿ.ರಸ್ತೆಯ ಮಿತ್ತಲ್ ಟವರ್​ನಲ್ಲಿ ಶಾಖೆ ತೆರೆದಿತ್ತು. ಕರ್ನಾಟಕ ಹಾಗೂ ತಮಿಳುನಾಡಿನ ನಾನಾ ಕಡೆಗಳಲ್ಲಿ ಈ ಕಂಪೆನಿಯ ಶಾಖೆಗಳು ಇವೆ.

ಈ ಕಂಪೆನಿಯಲ್ಲಿ ಹಣ ಇಟ್ಟರೆ ಶೇ. 10.47ರಷ್ಟು ಬಡ್ಡಿ ಕೊಡುವುದಾಗಿ ಕಂಪನಿಯವರು ನಂಬಿಸಿದ್ದರು. ಹಣದ ಹರಿವು ಹೆಚ್ಚಿಸಲು, ಕಂಪೆನಿಯ ಬಗ್ಗೆ ಪ್ರಚಾರಕ್ಕೆ ಏಜೆಂಟರನ್ನು ಕೂಡ ಬಳಕೆ ಮಾಡಲಾಗಿತ್ತು. ಅಧಿಕ ಬಡ್ಡಿ ಆಸೆಗೆ ಬಿದ್ದ ಜನರು ಈ ಕಂಪೆನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈಗ ಠೇವಣಿ ಹಣ ಹಿಂದಿರುಗಿಸದೆ ಕಂಪನಿ ವಂಚನೆ ಮಾಡಿದೆ.

ಕಂಪನಿ ಮುಖ್ಯಸ್ಥರಾದ ಆರ್.ಸುಬ್ರಮಣಿಯನ್, ನಾರಾಯಣ, ರಾಜರತ್ನಂ, ಟಿಎಸ್​ ರಾಘವನ್, ಏಜೆಂಟ್ ಡಾ. ಅದಿಕೇಷನ್, ಪಿ.ಸದಾನಂದ ರಾಜೇಂದ್ರ ಕುಮಾರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ಗಿರಿನಗರ, ಸಿದ್ದಾಪುರ ಸೇರಿದಂತೆ ಹಲವು ಠಾಣೆಗಳಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.

ಮಹಿಳೆಯರೇ ಟಾರ್ಗೆಟ್​ ಈ ಪ್ರಕರಣದಲ್ಲಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಲಾಗುತ್ತಿತ್ತು. ಗೃಹಿಣಿಯರಿಗೆ ಹೆಚ್ಚಿನ ಬಡ್ಡಿ ನೀಡುವ ಆಸೆ ತೋರಿಸಿ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?