AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

ಈ ಪ್ರಕರಣದಲ್ಲಿ 300 ಕೋಟಿಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​ ಪ್ರೈ. ಲಿ. ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 02, 2021 | 6:45 PM

Share

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹೆಚ್ಚು ಬಡ್ಡಿಯ ಆಸೆಗೆ ಬಿದ್ದು ಹೂಡಿಕೆ ಮಾಡುವವರರಿಗೆ ಈ ಪ್ರಕರಣ ಎಚ್ಚರಿಕೆಯ ಗಂಟೆಯಾಗಿತ್ತು. ಆದರೆ, ಈ ಪ್ರಕರಣದಿಂದ ಜನ ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಏಕೆಂದರೆ, ರಾಜ್ಯದಲ್ಲಿ ಇದೇ ಮಾದರಿಯ ಮತ್ತೊಂದು ಬಹುಕೋಟಿ ವಂಚನೆ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾಗುವವರು ಇರುವವರೆಗೂ ವಂಚಿಸುವವರು ಇದ್ದೇ ಇರುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಈ ಪ್ರಕರಣದಲ್ಲಿ 300 ಕೋಟಿ ರೂ.ಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​  ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ. ತಮಿಳುನಾಡು ಮೂಲದ ಹಣಕಾಸು ಸಂಸ್ಥೆ ಇದಾಗಿದ್ದು, ಎಂ.ಜಿ.ರಸ್ತೆಯ ಮಿತ್ತಲ್ ಟವರ್​ನಲ್ಲಿ ಶಾಖೆ ತೆರೆದಿತ್ತು. ಕರ್ನಾಟಕ ಹಾಗೂ ತಮಿಳುನಾಡಿನ ನಾನಾ ಕಡೆಗಳಲ್ಲಿ ಈ ಕಂಪೆನಿಯ ಶಾಖೆಗಳು ಇವೆ.

ಈ ಕಂಪೆನಿಯಲ್ಲಿ ಹಣ ಇಟ್ಟರೆ ಶೇ. 10.47ರಷ್ಟು ಬಡ್ಡಿ ಕೊಡುವುದಾಗಿ ಕಂಪನಿಯವರು ನಂಬಿಸಿದ್ದರು. ಹಣದ ಹರಿವು ಹೆಚ್ಚಿಸಲು, ಕಂಪೆನಿಯ ಬಗ್ಗೆ ಪ್ರಚಾರಕ್ಕೆ ಏಜೆಂಟರನ್ನು ಕೂಡ ಬಳಕೆ ಮಾಡಲಾಗಿತ್ತು. ಅಧಿಕ ಬಡ್ಡಿ ಆಸೆಗೆ ಬಿದ್ದ ಜನರು ಈ ಕಂಪೆನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈಗ ಠೇವಣಿ ಹಣ ಹಿಂದಿರುಗಿಸದೆ ಕಂಪನಿ ವಂಚನೆ ಮಾಡಿದೆ.

ಕಂಪನಿ ಮುಖ್ಯಸ್ಥರಾದ ಆರ್.ಸುಬ್ರಮಣಿಯನ್, ನಾರಾಯಣ, ರಾಜರತ್ನಂ, ಟಿಎಸ್​ ರಾಘವನ್, ಏಜೆಂಟ್ ಡಾ. ಅದಿಕೇಷನ್, ಪಿ.ಸದಾನಂದ ರಾಜೇಂದ್ರ ಕುಮಾರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ಗಿರಿನಗರ, ಸಿದ್ದಾಪುರ ಸೇರಿದಂತೆ ಹಲವು ಠಾಣೆಗಳಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.

ಮಹಿಳೆಯರೇ ಟಾರ್ಗೆಟ್​ ಈ ಪ್ರಕರಣದಲ್ಲಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಲಾಗುತ್ತಿತ್ತು. ಗೃಹಿಣಿಯರಿಗೆ ಹೆಚ್ಚಿನ ಬಡ್ಡಿ ನೀಡುವ ಆಸೆ ತೋರಿಸಿ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ