AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

ಈ ಪ್ರಕರಣದಲ್ಲಿ 300 ಕೋಟಿಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​ ಪ್ರೈ. ಲಿ. ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 02, 2021 | 6:45 PM

Share

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹೆಚ್ಚು ಬಡ್ಡಿಯ ಆಸೆಗೆ ಬಿದ್ದು ಹೂಡಿಕೆ ಮಾಡುವವರರಿಗೆ ಈ ಪ್ರಕರಣ ಎಚ್ಚರಿಕೆಯ ಗಂಟೆಯಾಗಿತ್ತು. ಆದರೆ, ಈ ಪ್ರಕರಣದಿಂದ ಜನ ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಏಕೆಂದರೆ, ರಾಜ್ಯದಲ್ಲಿ ಇದೇ ಮಾದರಿಯ ಮತ್ತೊಂದು ಬಹುಕೋಟಿ ವಂಚನೆ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾಗುವವರು ಇರುವವರೆಗೂ ವಂಚಿಸುವವರು ಇದ್ದೇ ಇರುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಈ ಪ್ರಕರಣದಲ್ಲಿ 300 ಕೋಟಿ ರೂ.ಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​  ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ. ತಮಿಳುನಾಡು ಮೂಲದ ಹಣಕಾಸು ಸಂಸ್ಥೆ ಇದಾಗಿದ್ದು, ಎಂ.ಜಿ.ರಸ್ತೆಯ ಮಿತ್ತಲ್ ಟವರ್​ನಲ್ಲಿ ಶಾಖೆ ತೆರೆದಿತ್ತು. ಕರ್ನಾಟಕ ಹಾಗೂ ತಮಿಳುನಾಡಿನ ನಾನಾ ಕಡೆಗಳಲ್ಲಿ ಈ ಕಂಪೆನಿಯ ಶಾಖೆಗಳು ಇವೆ.

ಈ ಕಂಪೆನಿಯಲ್ಲಿ ಹಣ ಇಟ್ಟರೆ ಶೇ. 10.47ರಷ್ಟು ಬಡ್ಡಿ ಕೊಡುವುದಾಗಿ ಕಂಪನಿಯವರು ನಂಬಿಸಿದ್ದರು. ಹಣದ ಹರಿವು ಹೆಚ್ಚಿಸಲು, ಕಂಪೆನಿಯ ಬಗ್ಗೆ ಪ್ರಚಾರಕ್ಕೆ ಏಜೆಂಟರನ್ನು ಕೂಡ ಬಳಕೆ ಮಾಡಲಾಗಿತ್ತು. ಅಧಿಕ ಬಡ್ಡಿ ಆಸೆಗೆ ಬಿದ್ದ ಜನರು ಈ ಕಂಪೆನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈಗ ಠೇವಣಿ ಹಣ ಹಿಂದಿರುಗಿಸದೆ ಕಂಪನಿ ವಂಚನೆ ಮಾಡಿದೆ.

ಕಂಪನಿ ಮುಖ್ಯಸ್ಥರಾದ ಆರ್.ಸುಬ್ರಮಣಿಯನ್, ನಾರಾಯಣ, ರಾಜರತ್ನಂ, ಟಿಎಸ್​ ರಾಘವನ್, ಏಜೆಂಟ್ ಡಾ. ಅದಿಕೇಷನ್, ಪಿ.ಸದಾನಂದ ರಾಜೇಂದ್ರ ಕುಮಾರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ಗಿರಿನಗರ, ಸಿದ್ದಾಪುರ ಸೇರಿದಂತೆ ಹಲವು ಠಾಣೆಗಳಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.

ಮಹಿಳೆಯರೇ ಟಾರ್ಗೆಟ್​ ಈ ಪ್ರಕರಣದಲ್ಲಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಲಾಗುತ್ತಿತ್ತು. ಗೃಹಿಣಿಯರಿಗೆ ಹೆಚ್ಚಿನ ಬಡ್ಡಿ ನೀಡುವ ಆಸೆ ತೋರಿಸಿ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು