Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

ಈ ಪ್ರಕರಣದಲ್ಲಿ 300 ಕೋಟಿಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​ ಪ್ರೈ. ಲಿ. ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Jan 02, 2021 | 6:45 PM

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹೆಚ್ಚು ಬಡ್ಡಿಯ ಆಸೆಗೆ ಬಿದ್ದು ಹೂಡಿಕೆ ಮಾಡುವವರರಿಗೆ ಈ ಪ್ರಕರಣ ಎಚ್ಚರಿಕೆಯ ಗಂಟೆಯಾಗಿತ್ತು. ಆದರೆ, ಈ ಪ್ರಕರಣದಿಂದ ಜನ ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಏಕೆಂದರೆ, ರಾಜ್ಯದಲ್ಲಿ ಇದೇ ಮಾದರಿಯ ಮತ್ತೊಂದು ಬಹುಕೋಟಿ ವಂಚನೆ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾಗುವವರು ಇರುವವರೆಗೂ ವಂಚಿಸುವವರು ಇದ್ದೇ ಇರುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಈ ಪ್ರಕರಣದಲ್ಲಿ 300 ಕೋಟಿ ರೂ.ಗೂ ಹೆಚ್ಚು ವಂಚನೆ ನಡೆದಿರುವ ಶಂಕೆ ಇದೆ. ವಿಶ್ವಪ್ರಿಯ ಫೈನಾನ್ಶಿಯಲ್​ & ಸೆಕ್ಯೂರಿಟೀಸ್​  ಕಂಪೆನಿ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿದೆ. ತಮಿಳುನಾಡು ಮೂಲದ ಹಣಕಾಸು ಸಂಸ್ಥೆ ಇದಾಗಿದ್ದು, ಎಂ.ಜಿ.ರಸ್ತೆಯ ಮಿತ್ತಲ್ ಟವರ್​ನಲ್ಲಿ ಶಾಖೆ ತೆರೆದಿತ್ತು. ಕರ್ನಾಟಕ ಹಾಗೂ ತಮಿಳುನಾಡಿನ ನಾನಾ ಕಡೆಗಳಲ್ಲಿ ಈ ಕಂಪೆನಿಯ ಶಾಖೆಗಳು ಇವೆ.

ಈ ಕಂಪೆನಿಯಲ್ಲಿ ಹಣ ಇಟ್ಟರೆ ಶೇ. 10.47ರಷ್ಟು ಬಡ್ಡಿ ಕೊಡುವುದಾಗಿ ಕಂಪನಿಯವರು ನಂಬಿಸಿದ್ದರು. ಹಣದ ಹರಿವು ಹೆಚ್ಚಿಸಲು, ಕಂಪೆನಿಯ ಬಗ್ಗೆ ಪ್ರಚಾರಕ್ಕೆ ಏಜೆಂಟರನ್ನು ಕೂಡ ಬಳಕೆ ಮಾಡಲಾಗಿತ್ತು. ಅಧಿಕ ಬಡ್ಡಿ ಆಸೆಗೆ ಬಿದ್ದ ಜನರು ಈ ಕಂಪೆನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈಗ ಠೇವಣಿ ಹಣ ಹಿಂದಿರುಗಿಸದೆ ಕಂಪನಿ ವಂಚನೆ ಮಾಡಿದೆ.

ಕಂಪನಿ ಮುಖ್ಯಸ್ಥರಾದ ಆರ್.ಸುಬ್ರಮಣಿಯನ್, ನಾರಾಯಣ, ರಾಜರತ್ನಂ, ಟಿಎಸ್​ ರಾಘವನ್, ಏಜೆಂಟ್ ಡಾ. ಅದಿಕೇಷನ್, ಪಿ.ಸದಾನಂದ ರಾಜೇಂದ್ರ ಕುಮಾರ್ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ಗಿರಿನಗರ, ಸಿದ್ದಾಪುರ ಸೇರಿದಂತೆ ಹಲವು ಠಾಣೆಗಳಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.

ಮಹಿಳೆಯರೇ ಟಾರ್ಗೆಟ್​ ಈ ಪ್ರಕರಣದಲ್ಲಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಲಾಗುತ್ತಿತ್ತು. ಗೃಹಿಣಿಯರಿಗೆ ಹೆಚ್ಚಿನ ಬಡ್ಡಿ ನೀಡುವ ಆಸೆ ತೋರಿಸಿ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ