
ಬೆಂಗಳೂರು (ಜೂ.02): ನೈಋತ್ಯ ಮುಂಗಾರು (monsoon) ಪ್ರವೇಶದ ಹಿನ್ನೆಲೆಯಲ್ಲಿ, ಚಂಡಮಾರುತದ ಸುಳಿ ಹಾಗೂ ಟ್ರಫ್ ಪ್ರಭಾವದಿಂದಾಗಿ ಕರ್ನಾಟಕದಾದ್ಯಂತ ಇಂದಿನಿಂದ ಅಂದರೆ ಜೂನ್ 2ರಿಂದ 9 ದಿನಗಳ ಕಾಲ ಭಾರೀ ಮಳೆಯಾಗುವ (Karnataka Rain) ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (Karnataka State Natural Disaster Monitoring Centre) ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಸಲಾಗಿದೆ. ಇನ್ನು ಮೇ 26ಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿತ್ತು. ಆದ್ರೆ, ಕೈಕೊಟ್ಟಿದ್ದು, ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಬಳಿಕ ಜೂನ್ 7 ಅಥವಾ 8ಕ್ಕೆ ಕರ್ನಾಟಕಕ್ಕೆ ಪ್ರವೇಶಿಸಲಿದೆ.
02.06.2026 ರಿಂದ 10.06.2026 ರವರೆಗಿನ ಮುಂದಿನ 9 ದಿನಗಳ ರಾಜ್ಯದಲ್ಲಿ ಮಳೆ ಮುನ್ಸೂಚನೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದ್ದು, ಜೂನ್ 02 ಮತ್ತು 03 ರಂದು ರಾಜ್ಯಾದ್ಯಂತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
#Rainfall #Forecast for #Karnataka State for the next 9 days from 2nd June to 10th June 2026.
Source: SDSC SHAR ECMWF model@KarnatakaVarthe #SouthWestMonsoon #Monsoon2026 #KarnatakaRains #KSNDMC pic.twitter.com/GusYIGuL2M— Karnataka State Natural Disaster Monitoring Centre (@KarnatakaSNDMC) June 2, 2026
ಕರಾವಳಿ ಕರ್ನಾಟಕ ಜೂನ್ 4 ರಂದು ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಆರಂಭವಾಗಿ ಜೂನ್ 5 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಜೂನ್ 06 ರಿಂದ 10 ರವರೆಗೆ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದ್ದು, ಕರಾವಳಿ ಪ್ರದೇಶದಲ್ಲಿ ವ್ಯಾಪಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
SIK from 02nd June 2026 to 5th June 2026.
Thunderstorm accompanied with lightning likely to occur at one or two places over Coastal Karnataka from 02nd June 2026 to 4th June 2026. #KSNDMC #Monsoon2026— Karnataka State Natural Disaster Monitoring Centre (@KarnatakaSNDMC) June 2, 2026
ಜೂನ್ 06 ರಿಂದ 10 ರ ಅವಧಿಯಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 05 ರವರೆಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂನ್ 06 ರಿಂದ ಈ ಪ್ರದೇಶದಾದ್ಯಂತ ಅಲ್ಲಲ್ಲಿ ಹಾಗೂ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
#thunderstorm #Warning:
Thunderstorm accompanied with gusty wind with speed 40-50 kmph likely to occur at one or two places over NIK from 02nd June 2026 to 06th June 2026.
Thunderstorm accompanied with gusty wind with speed 30-40 kmph likely to occur at one or two places over— Karnataka State Natural Disaster Monitoring Centre (@KarnatakaSNDMC) June 2, 2026
ಇನ್ನು ಮುನ್ಸೂಚನೆಯ ಇಡೀ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಕಳೆದ ತಿಂಗಳು ಅಂತ್ಯಕ್ಕೆ ಅಂದರೆ ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶ ಮಾಡುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿತ್ತು. ಆದ್ರೆ, ಇದೀಗ ಜೂನ್ 4ರಂದು ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಲಿದೆ ಎಂದು IMD ಸ್ಪಷ್ಟಪಡಿಸಿದೆ. ಹೀಗಾಗಿ ಸಾಮಾನ್ಯವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದ 3ರಿಂದ 5 ದಿನಗಳ ಒಳಗಾಗಿ ಮಳೆ ಕರ್ನಾಟಕವನ್ನು ತಲುಪುತ್ತದೆ. ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಿದರೆ, ಜೂನ್ 7 ಅಥವಾ 8ರ ವೇಳೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಿಗೆ ಮುಂಗಾರು ಮಾರುತಗಳು ತಲುಪಲಿವೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
Published On - 5:58 pm, Tue, 2 June 26