AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹಲವೆಡೆ ಮುಂದಿನ 6 ದಿನ ಭರ್ಜರಿ ಮಳೆ: ಇಂದಿನ ಹವಾಮಾನ ವರದಿ ನೋಡಿ

Karnataka Weather Report: ಕರ್ನಾಟಕದ್ಯಾಂತ ಸುರಿಯುತ್ತಿರುವ ಮಳೆ ಮೃತ್ಯು ಮಳೆಯಾಗಿ ಕಾಡುತ್ತಿದೆ. ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿದ್ದು, ಮನೆಗಳು ಕುಸಿದುಬಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆರಾಯ ಭಾರೀ ಅವಾಂತರ ಸೃಷ್ಟಿಸಿದ್ದು, ಜನರು ಮಳೆ ಸಾಕಪ್ಪ ಸಾಕು ಎನ್ನುತ್ತಿದ್ದಾರೆ. ಆದರೂ ಸಹ ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಇನ್ನೂ ಎಷ್ಟು ದಿನ ಮಳೆ ಇದೆ? ಎಲ್ಲೆಲ್ಲಿ ಮಳೆಯಾಗಲಿದೆ? ಎನ್ನುವ ಇಂದಿನ ಹವಾಮಾನ ವರದಿ ಇಲ್ಲಿದೆ.

ಕರ್ನಾಟಕದ ಹಲವೆಡೆ ಮುಂದಿನ 6 ದಿನ ಭರ್ಜರಿ ಮಳೆ: ಇಂದಿನ ಹವಾಮಾನ ವರದಿ ನೋಡಿ
ಮಳೆImage Credit source: PTI
ರಮೇಶ್ ಬಿ. ಜವಳಗೇರಾ
|

Updated on:Oct 23, 2024 | 7:54 AM

Share

ಬೆಂಗಳೂರು, (ಅಕ್ಟೋಬರ್ 23): ಕರ್ನಾಟಕದಲ್ಲಿ ಹಿಂಗಾರು ಮಳೆ ಜೋರಾಗಿದೆ. ಕಳೆದೊಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಬೆಂಗಳೂರು ಮಾತ್ರವಲ್ಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲೂ ವರುಣನ ಆರ್ಭಟ ಜೋರಾಗಿದೆ. ಆದರೂ ಸಹ ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ 6 ದಿನಗಳ ಕಾಲ ಕರ್ನಾಟಕದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಕಡೂರು, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ ದಾವಣಗೆರೆ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಮತ್ತೆ ಮಳೆ ಎಚ್ಚರಿಕೆ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ

ಅ.23ರಂದು ಗುರುವಾರ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.

ಈ ಸಂಬಂಧ ಮಾತಾಡಿದ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗುತ್ತದೆ. ಇನ್ನು ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಹಾಗಾಗಿ ಹೈಅಲರ್ಟ್​​ ಘೋಷಿಸಲಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Wed, 23 October 24

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ