AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಹೆಚ್ಚಾಗಲಿದೆ ವರುಣನ ಅಬ್ಬರ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಕರ್ನಾಟಕದಾದ್ಯಂತ ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದೆ, ಈಗಾಗಲೇ ಹಲವು ಕಡೆಗಳಲ್ಲಿ ಅನಾಹುತ ಸೃಷ್ಟಿಸಿರುವ ಮಳೆರಾಯ ಮತ್ತಷ್ಟು ಕಡೆಗಳಲ್ಲಿ ಭಾರಿ ಮಳೆ ಸುರಿಸುವ ಸಾಧ್ಯತೆ ಇದೆ. ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ.

Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಹೆಚ್ಚಾಗಲಿದೆ ವರುಣನ ಅಬ್ಬರ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​
ಮಳೆImage Credit source: Mathrubhumi English
ನಯನಾ ರಾಜೀವ್
|

Updated on: Jul 31, 2024 | 7:33 AM

Share

ಇಂದಿನಿಂದ ಕರ್ನಾಟಕದಾದ್ಯಂತ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್​, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲೂ ಮಳೆಯಾಗಲಿದೆ.

ಕಳಸ, ನಾಪೊಕ್ಲು, ಧರ್ಮಸ್ಥಳ, ಕೊಪ್ಪ, ಪೊನ್ನಂಪೇಟೆ, ಕ್ಯಾಸಲ್​ರಾಕ್, ಮೂರ್ನಾಡು, ಭಾಗಮಂಡಲ, ಕೊಟ್ಟಿಗೆಹಾರ, ಮಾಣಿ, ಸುಳ್ಯ, ಬೆಳ್ತಂಗಡಿ, ಜಯಪುರ, ಯಲ್ಲಾಪುರ, ಉಪ್ಪಿನಂಗಡಿ, ಕೊಲ್ಲೂರು, ಆನವಟ್ಟಿ, ಸೋಮವಾರಪೇಟೆ, ಎನ್​ಆರ್​ಪುರ, ಕದ್ರಾ, ಪುತ್ತೂರು, ಸಿದ್ದಾಪುರ, ಕಾರ್ಕಳ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 7 ಜಿಲ್ಲೆಗಳಲ್ಲಿ ಮಳೆ ಜೋರು

ಬನವಾಸಿ, ಮುಂಡಗೋಡು, ಹಾರಂಗಿ, ಕುಶಾಲನಗರ, ಕೊಳ್ಳೇಗಾಲ, ಗೇರುಸೊಪ್ಪ, ಉಡುಪಿ, ಹುಬ್ಬಳ್ಳಿ, ಸವಣೂರು, ಬೆಳಗಾವಿ, ಬಂಡೀಪುರ, ಅಂಕೋಲಾ, ಕೋಟ, ಮೂಡಿಗೆರೆ, ಕಲಘಟಗಿ, ಪರಶುರಾಂಪುರ, ಅಜ್ಜಂಪುರ, ಮದ್ದೂರು, ಲಕ್ಷ್ಮೇಶ್ವರ, ಕೆಆರ್​ನಗರ, ಕೃಷ್ಣರಾಜಪೇಟೆ, ಕಡೂರು, ಹಡಗಲಿ, ನಾಯಕನಹಟ್ಟಿ, ಕೊಟ್ಟೂರು, ಹುಣಸೂರು, ಕೃಷ್ಣರಾಜಸಾಗರ, ಕುಣಿಗಲ್​ನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರವೂ ಮಳೆಯಾಗಿದೆ ಇಂದೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 30.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ