AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMD Alert: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಜೂನ್ 6ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಜೋರಾದ ಗಾಳಿಯೊಂದಿಗೆ ಒಂದು ಅಥವಾ ಎರಡು ಬಾರಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.

IMD Alert: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಜೂನ್ 6ರ ವರೆಗೆ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jun 01, 2023 | 7:18 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕರ್ನಾಟಕದ ಕೆಲವು ಭಾಗಗಳಲ್ಲಿ ಜೂನ್ 6 ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ತಿಳಿಸಿದೆ. ಹವಾಮಾನ ಇಲಾಖೆಯು ಜೂನ್ 1 ರಿಂದ ಜೂನ್ 6 ರ ನಡುವೆ ಬೆಂಗಳೂರಿನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಜೋರಾದ ಗಾಳಿಯೊಂದಿಗೆ ಒಂದು ಅಥವಾ ಎರಡು ಬಾರಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, ನಗರದಲ್ಲಿ ಮೇ 30 ಮತ್ತು ಮೇ 31 ರ ನಡುವೆ 65.2 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದ ಇತಿಹಾಸದಲ್ಲಿ ಮೇ ತಿಂಗಳಿನಲ್ಲಿ ಸುರಿದ ಮಳೆ ದಾಖಲೆ ಸೃಷ್ಟಿಸಿದ್ದು, 66 ವರ್ಷಗಳ ದಾಖಲೆಯನ್ನು ಮುರಿದಿದೆ.

ಮುಂದಿನ ಐದು ದಿನಗಳವರೆಗೆ ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಮತ್ತು 21 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 66 ವರ್ಷಗಳ ದಾಖಲೆ ಮುರಿದ ಮಳೆ, ಪ್ರವಾಹ ನಿಯಂತ್ರಣಕ್ಕೆ ಬೇಕಿದೆ 600 ಕಿಮೀ ಒಳಚರಂಡಿ

ಜೂನ್ 1 ರಿಂದ ಜೂನ್ 6 ರ ನಡುವೆ ದಕ್ಷಿಣ ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆಯ ಎಚ್ಚರಿಕೆಯನ್ನು ಸಹ ನೀಡಲಾಗಿದೆ.

ಈ ವರ್ಷ ನೈಋತ್ಯ ಮುಂಗಾರು ವಿಳಂಬವಾಗಿದ್ದು, ಜೂನ್ 4ಕ್ಕೆ ಕೇರಳದಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ನಂತರ ಮುಂಗಾರು ಕರ್ನಾಟಕಕ್ಕೆ ಬರಲಿದೆ.

ಹವಾಮಾನ ಇಲಾಖೆಯ ಪ್ರಕಾರ ನೈರುತ್ಯ ಮುಂಗಾರು ಕರ್ನಾಟಕಕ್ಕೆ ಜೂನ್ ಮೊದಲ ವಾರದಲ್ಲಿ ಬರಬೇಕು. ಆದಾಗ್ಯೂ, ಕೇರಳಕ್ಕೆ ತಡವಾಗಿ ಪ್ರವೇಶಿಸುವ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭವು ಕೆಲವು ದಿನಗಳ ಮಟ್ಟಿಗೆ ವಿಳಂಬವಾಗಬಹುದು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ