Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಾನ್​ಗೆ ಪ್ರಾಮುಖ್ಯತೆ, ಯುಗಾದಿ ಕಡೆಗಣನೆ: ರೇಷ್ಮೆ ಇಲಾಖೆ ಉಪ ನಿರ್ದೇಶಕರ ವಿರುದ್ಧ ಆರೋಪ

ಏಪ್ರಿಲ್ 09 ರಂದು ನಡೆಯಲಿರುವ ಯುಗಾದಿ ಹಬ್ಬದ ಪ್ರಯುಕ್ತ ಇ- ಹರಾಜನ್ನು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಲಾಗುತ್ತದೆ. ಅದೇ ರೀತಿಯಾಗಿ ಏಪ್ರಿಲ್​ 11 ರಂದು ನಡೆಯಲಿರುವ ಇ-ಹರಾಜನ್ನು ರಂಜಾನ್​​ ಹಬ್ಬದ ಪ್ರಯುಕ್ತ ಮಧ್ಯಾಹ್ನ 2 ಗಂಟೆಗೆ ಪ್ರಾರಂಭಿಸಲಾಗುತ್ತದೆ. ರೈತ ಬಾಂಧವರು ಹಾಗೂ ರೀಲರ್​ಗಳು ಸಹಕರಿಸಬೇಕಾಗಿ ಕೋರಲಾಗಿದೆ.

ರಂಜಾನ್​ಗೆ ಪ್ರಾಮುಖ್ಯತೆ, ಯುಗಾದಿ ಕಡೆಗಣನೆ: ರೇಷ್ಮೆ ಇಲಾಖೆ ಉಪ ನಿರ್ದೇಶಕರ ವಿರುದ್ಧ ಆರೋಪ
ಪ್ರಾತಿನಿಧಿಕ ಚಿತ್ರ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 08, 2024 | 6:48 PM

ರಾಮನಗರ, ಏಪ್ರಿಲ್ 08: ಮುಸ್ಲಿಂ ರ ಪ್ರವಿತ್ರ ಹಬ್ಬ ರಂಜಾನ್ (Ramzan)​ ಮತ್ತು ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬವು ಈ ಸಲ ಎರಡು ಹಬ್ಬಗಳು ಒಂದು ದಿನ ಬಿಟ್ಟು ಒಂದು ದಿನ ಬಂದಿವೆ. ಇದರ ನಡುವೆ ರಂಜಾನ್​ ಹಬ್ಬಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಯುಗಾದಿ ಹಬ್ಬ ಕಡೆಗಣನೆ ಆರೋಪ ಕೇಳಿಬಂದಿದೆ. ರಾಮನಗರದ ರೇಷ್ಮೆ ಇಲಾಖೆಯ ಉಪ ನಿರ್ದೇಶಕರ ವಿರುದ್ಧ ಆರೋಪ ಮಾಡಲಾಗಿದೆ.

ರಂಜಾನ್ ಪ್ರಯುಕ್ತ ಮಧ್ಯಾಹ್ನ 2 ಗಂಟೆಗೆ ಹರಾಜು ಎಂದು ಆದೇಶಿಸಲಾಗಿದ್ದು, ಯುಗಾದಿ ಹಬ್ಬದಂದು ಬೆಳಗ್ಗೆ 9 ಗಂಟೆಗೆ ಇ-ಹರಾಜು ಎಂದು ಸೂಚನೆ ನೀಡಲಾಗಿದೆ. ರೇಷ್ಮೆ ಗೂಡು ಇ-ಹರಾಜಿನ ಸಮಯದಲ್ಲಿ ತಾರತಮ್ಯ ಆರೋಪ ಮಾಡಿದ್ದು, ರೈತರು ಸಹಕರಿಸುವಂತೆ ರೇಷ್ಮೆ ಇಲಾಖೆ ಉಪ ನಿರ್ದೇಶಕರಿಂದ ಪ್ರಕಟಣೆ ಹೊರಡಿಸಲಾಗಿದೆ.

ಪ್ರಕಟಣೆಯಲ್ಲಿ ಏನಿದೆ?

ಏಪ್ರಿಲ್ 09 ರಂದು ನಡೆಯಲಿರುವ ಯುಗಾದಿ ಹಬ್ಬದ ಪ್ರಯುಕ್ತ ಇ- ಹರಾಜನ್ನು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಲಾಗುತ್ತದೆ. ಅದೇ ರೀತಿಯಾಗಿ ಏಪ್ರಿಲ್​ 11 ರಂದು ನಡೆಯಲಿರುವ ಇ-ಹರಾಜನ್ನು ರಂಜಾನ್​​ ಹಬ್ಬದ ಪ್ರಯುಕ್ತ ಮಧ್ಯಾಹ್ನ 2 ಗಂಟೆಗೆ ಪ್ರಾರಂಭಿಸಲಾಗುತ್ತದೆ. ರೈತ ಬಾಂಧವರು ಹಾಗೂ ರೀಲರ್​ಗಳು ಸಹಕರಿಸಬೇಕಾಗಿ ಕೋರಲಾಗಿದೆ.

ಇದನ್ನೂ ಓದಿ: Ugadi in 2024: ಯುಗಾದಿ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್, ಪ್ರಯಾಣಿಕರಿಗೆ ಗುಡ್ ನ್ಯೂಸ್

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಪ್ರತಿ ವರ್ಷ ಹಿಂದೂ ಧರ್ಮದಲ್ಲಿ, ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದಾ ದಿನದಂದು ಅಂದರೆ ಈ ಬಾರಿ ಏ. 9 ರಂದು ಮಂಗಳವಾರ ಯುಗಾದಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ದಿನ ಎಲ್ಲರ ಮನೆಗಳನ್ನು ಅಲಂಕರಿಸುವ ಮೂಲಕ, ಹೊಸ ಬಟ್ಟೆ ಧರಿಸಿ ಹಬ್ಬ ಮಾಡಲಾಗುತ್ತದೆ.

ಇದನ್ನೂ ಓದಿ: Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?

ರಂಜಾನ್ ಇಸ್ಲಾಂನಲ್ಲಿ ಅತ್ಯಂತ ಪವಿತ್ರವಾದ ತಿಂಗಳಾಗಿದೆ. ಲಕ್ಷಾಂತರ ಮುಸ್ಲಿಮರಿಗೆ ಇದು ಬಹಳ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದ ದಿನವಾಗಿದೆ. ಈ ಹಬ್ಬ 29ರಿಂದ 30 ದಿನಗಳವರೆಗೆ ಇರುತ್ತದೆ. ರಂಜಾನ್ ಉಪವಾಸ, ಪ್ರಾರ್ಥನೆ, ಪ್ರತಿಬಿಂಬ ಮತ್ತು ಸಮುದಾಯದ ಅವಧಿಯಾಗಿದೆ. ಇಸ್ಲಾಮಿಕ್ ನಂಬಿಕೆಯ ಪ್ರಕಾರ ಪ್ರವಾದಿ ಮುಹಮ್ಮದ್‌ಗೆ ಕುರಾನ್‌ನ ಮೊದಲ ಬಹಿರಂಗಪಡಿಸುವಿಕೆಯ ಸ್ಮರಣಾರ್ಥವಾಗಿ ಇದನ್ನು ಆಚರಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ