ರಂಜಾನ್​ಗೆ ಪ್ರಾಮುಖ್ಯತೆ, ಯುಗಾದಿ ಕಡೆಗಣನೆ: ರೇಷ್ಮೆ ಇಲಾಖೆ ಉಪ ನಿರ್ದೇಶಕರ ವಿರುದ್ಧ ಆರೋಪ

ಏಪ್ರಿಲ್ 09 ರಂದು ನಡೆಯಲಿರುವ ಯುಗಾದಿ ಹಬ್ಬದ ಪ್ರಯುಕ್ತ ಇ- ಹರಾಜನ್ನು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಲಾಗುತ್ತದೆ. ಅದೇ ರೀತಿಯಾಗಿ ಏಪ್ರಿಲ್​ 11 ರಂದು ನಡೆಯಲಿರುವ ಇ-ಹರಾಜನ್ನು ರಂಜಾನ್​​ ಹಬ್ಬದ ಪ್ರಯುಕ್ತ ಮಧ್ಯಾಹ್ನ 2 ಗಂಟೆಗೆ ಪ್ರಾರಂಭಿಸಲಾಗುತ್ತದೆ. ರೈತ ಬಾಂಧವರು ಹಾಗೂ ರೀಲರ್​ಗಳು ಸಹಕರಿಸಬೇಕಾಗಿ ಕೋರಲಾಗಿದೆ.

ರಂಜಾನ್​ಗೆ ಪ್ರಾಮುಖ್ಯತೆ, ಯುಗಾದಿ ಕಡೆಗಣನೆ: ರೇಷ್ಮೆ ಇಲಾಖೆ ಉಪ ನಿರ್ದೇಶಕರ ವಿರುದ್ಧ ಆರೋಪ
ಪ್ರಾತಿನಿಧಿಕ ಚಿತ್ರ
Edited By:

Updated on: Apr 08, 2024 | 6:48 PM

ರಾಮನಗರ, ಏಪ್ರಿಲ್ 08: ಮುಸ್ಲಿಂ ರ ಪ್ರವಿತ್ರ ಹಬ್ಬ ರಂಜಾನ್ (Ramzan)​ ಮತ್ತು ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬವು ಈ ಸಲ ಎರಡು ಹಬ್ಬಗಳು ಒಂದು ದಿನ ಬಿಟ್ಟು ಒಂದು ದಿನ ಬಂದಿವೆ. ಇದರ ನಡುವೆ ರಂಜಾನ್​ ಹಬ್ಬಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಯುಗಾದಿ ಹಬ್ಬ ಕಡೆಗಣನೆ ಆರೋಪ ಕೇಳಿಬಂದಿದೆ. ರಾಮನಗರದ ರೇಷ್ಮೆ ಇಲಾಖೆಯ ಉಪ ನಿರ್ದೇಶಕರ ವಿರುದ್ಧ ಆರೋಪ ಮಾಡಲಾಗಿದೆ.

ರಂಜಾನ್ ಪ್ರಯುಕ್ತ ಮಧ್ಯಾಹ್ನ 2 ಗಂಟೆಗೆ ಹರಾಜು ಎಂದು ಆದೇಶಿಸಲಾಗಿದ್ದು, ಯುಗಾದಿ ಹಬ್ಬದಂದು ಬೆಳಗ್ಗೆ 9 ಗಂಟೆಗೆ ಇ-ಹರಾಜು ಎಂದು ಸೂಚನೆ ನೀಡಲಾಗಿದೆ. ರೇಷ್ಮೆ ಗೂಡು ಇ-ಹರಾಜಿನ ಸಮಯದಲ್ಲಿ ತಾರತಮ್ಯ ಆರೋಪ ಮಾಡಿದ್ದು, ರೈತರು ಸಹಕರಿಸುವಂತೆ ರೇಷ್ಮೆ ಇಲಾಖೆ ಉಪ ನಿರ್ದೇಶಕರಿಂದ ಪ್ರಕಟಣೆ ಹೊರಡಿಸಲಾಗಿದೆ.

ಪ್ರಕಟಣೆಯಲ್ಲಿ ಏನಿದೆ?

ಏಪ್ರಿಲ್ 09 ರಂದು ನಡೆಯಲಿರುವ ಯುಗಾದಿ ಹಬ್ಬದ ಪ್ರಯುಕ್ತ ಇ- ಹರಾಜನ್ನು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಲಾಗುತ್ತದೆ. ಅದೇ ರೀತಿಯಾಗಿ ಏಪ್ರಿಲ್​ 11 ರಂದು ನಡೆಯಲಿರುವ ಇ-ಹರಾಜನ್ನು ರಂಜಾನ್​​ ಹಬ್ಬದ ಪ್ರಯುಕ್ತ ಮಧ್ಯಾಹ್ನ 2 ಗಂಟೆಗೆ ಪ್ರಾರಂಭಿಸಲಾಗುತ್ತದೆ. ರೈತ ಬಾಂಧವರು ಹಾಗೂ ರೀಲರ್​ಗಳು ಸಹಕರಿಸಬೇಕಾಗಿ ಕೋರಲಾಗಿದೆ.

ಇದನ್ನೂ ಓದಿ: Ugadi in 2024: ಯುಗಾದಿ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್, ಪ್ರಯಾಣಿಕರಿಗೆ ಗುಡ್ ನ್ಯೂಸ್

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಪ್ರತಿ ವರ್ಷ ಹಿಂದೂ ಧರ್ಮದಲ್ಲಿ, ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದಾ ದಿನದಂದು ಅಂದರೆ ಈ ಬಾರಿ ಏ. 9 ರಂದು ಮಂಗಳವಾರ ಯುಗಾದಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ದಿನ ಎಲ್ಲರ ಮನೆಗಳನ್ನು ಅಲಂಕರಿಸುವ ಮೂಲಕ, ಹೊಸ ಬಟ್ಟೆ ಧರಿಸಿ ಹಬ್ಬ ಮಾಡಲಾಗುತ್ತದೆ.

ಇದನ್ನೂ ಓದಿ: Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?

ರಂಜಾನ್ ಇಸ್ಲಾಂನಲ್ಲಿ ಅತ್ಯಂತ ಪವಿತ್ರವಾದ ತಿಂಗಳಾಗಿದೆ. ಲಕ್ಷಾಂತರ ಮುಸ್ಲಿಮರಿಗೆ ಇದು ಬಹಳ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದ ದಿನವಾಗಿದೆ. ಈ ಹಬ್ಬ 29ರಿಂದ 30 ದಿನಗಳವರೆಗೆ ಇರುತ್ತದೆ. ರಂಜಾನ್ ಉಪವಾಸ, ಪ್ರಾರ್ಥನೆ, ಪ್ರತಿಬಿಂಬ ಮತ್ತು ಸಮುದಾಯದ ಅವಧಿಯಾಗಿದೆ. ಇಸ್ಲಾಮಿಕ್ ನಂಬಿಕೆಯ ಪ್ರಕಾರ ಪ್ರವಾದಿ ಮುಹಮ್ಮದ್‌ಗೆ ಕುರಾನ್‌ನ ಮೊದಲ ಬಹಿರಂಗಪಡಿಸುವಿಕೆಯ ಸ್ಮರಣಾರ್ಥವಾಗಿ ಇದನ್ನು ಆಚರಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us