AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಂಪಿಎಸ್ 820 ಕೋಟಿ ರೂ. ಅಕ್ರಮ ವಹಿವಾಟು; ಕರ್ನಾಟಕ ಸೇರಿ ಒಟ್ಟು 13 ಕಡೆಗಳಲ್ಲಿ ಸಿಬಿಐ ದಾಳಿ

ಐಎಂಪಿಎಸ್(IMPS) ಮೂಲಕ 820 ಕೋಟಿ ರೂಪಾಯಿ ಹಣ ವಹಿವಾಟು ಆರೋಪದ ಹಿನ್ನಲೆ ಅನಾಮಿಕ ವ್ಯಕ್ತಿಗಳ ಮೇಲೆ ಆರೋಪಿಸಿ ಯುಕೋ ಬ್ಯಾಂಕ್​ ದೂರು ನೀಡಿತ್ತು. ಈ ಹಿನ್ನಲೆ ಇದೀಗ ಕರ್ನಾಟಕ ಸೇರಿದಂತೆ ಪಶ್ಚಿಮ ಬಂಗಾಳದ 13 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ರಾಜ್ಯದ ಮಂಗಳೂರಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಐಎಂಪಿಎಸ್ 820 ಕೋಟಿ ರೂ. ಅಕ್ರಮ ವಹಿವಾಟು; ಕರ್ನಾಟಕ ಸೇರಿ ಒಟ್ಟು 13 ಕಡೆಗಳಲ್ಲಿ ಸಿಬಿಐ ದಾಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 05, 2023 | 10:20 PM

Share

ದಕ್ಷಿಣ ಕನ್ನಡ, ಡಿ.05: ಐಎಂಪಿಎಸ್(IMPS) ಮೂಲಕ 820 ಕೋಟಿ ರೂಪಾಯಿ ಹಣ ವಹಿವಾಟು ಆರೋಪದ ಹಿನ್ನಲೆ ಅನಾಮಿಕ ವ್ಯಕ್ತಿಗಳ ಮೇಲೆ ಆರೋಪಿಸಿ ಯುಕೋ ಬ್ಯಾಂಕ್​ ದೂರು ನೀಡಿತ್ತು. ಈ ಹಿನ್ನಲೆ ಇದೀಗ ಕರ್ನಾಟಕ ಸೇರಿದಂತೆ ಪಶ್ಚಿಮ ಬಂಗಾಳದ 13 ಸ್ಥಳಗಳಲ್ಲಿ ಸಿಬಿಐ(CBI) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಕೋಲ್ಕತ್ತಾ ಹಾಗೂ ರಾಜ್ಯದ ಮಂಗಳೂರಿ(Mangalore)ನಲ್ಲಿ ಬ್ಯಾಂಕ್ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ನಿವಾಸಗಳ ಮೇಲೆ  ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೊಬೈಲ್​,‌ ಲ್ಯಾಪ್​ಟ್ಯಾಪ್,‌ ಕಂಪ್ಯೂಟರ್​​ಗಳು, ಇ-ಮೇಲ್ ಆರ್ಚೀವ್, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ನವೆಂಬರ್ 10ರಿಂದ 13ನೇ ತಾರೀಖಿನೊಳಗೆ ಅಂದಾಜು ರೂ. 820 ಕೋಟಿ ರೂ. ವಹಿವಾಟು ನಡೆದಿತ್ತು. ಈ ಹಿನ್ನಲೆ UCO ಬ್ಯಾಂಕ್‌ನೊಂದಿಗೆ ಕೆಲಸ ಮಾಡುವ ಇಬ್ಬರು ಸಿಬ್ಬಂದಿಗಳು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಅನುಮಾನ ಬಂದ ಹಿನ್ನಲೆ UCO ಬ್ಯಾಂಕ್‌ ದೂರು ನೀಡಿತ್ತು. ಏಳು ಖಾಸಗಿ ಬ್ಯಾಂಕ್‌ಗಳಲ್ಲಿ 14000 ಖಾತೆದಾರರಿಂದ IMPS ಒಳಗಿನ ವಹಿವಾಟುಗಳನ್ನು IMPS ಮೂಲಕ UCO ಬ್ಯಾಂಕ್‌ನ 41000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:CBI Operation Chakra: ಕರ್ನಾಟಕದಲ್ಲೂ ಆಪರೇಷನ್ ಚಕ್ರ, ಸಿಬಿಐ ದಾಳಿ ವೇಳೆ ಹಣ ಸಿಕ್ಕಿದ್ದಿಷ್ಟು!

ಈ ಜಾಲವು 8,53,049 ವಹಿವಾಟುಗಳನ್ನು ಒಳಗೊಂಡಿದ್ದು, ಮತ್ತು ಈ ವಹಿವಾಟುಗಳನ್ನು UCO ಬ್ಯಾಂಕ್ ಖಾತೆದಾರರ ದಾಖಲೆಗಳಲ್ಲಿ ತಪ್ಪಾಗಿ ಮಾಹಿತಿ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಹಲವಾರು ಖಾತೆದಾರರು ಈ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. UCO ಬ್ಯಾಂಕ್‌ನಿಂದ ವಿವಿಧ ಬ್ಯಾಂಕಿಂಗ್ ಚಾನೆಲ್‌ಗಳ ಮೂಲಕ ಅಕ್ರಮವಾಗಿ ಹಣವನ್ನು ಹಿಂತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದೂರು ಹಿನ್ನೆಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಇಂದು ಒಟ್ಟು 13 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Tue, 5 December 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​